<p><strong>ಬೆಂಗಳೂರು</strong>: ‘ಜೀವನದಲ್ಲಿ ಸಾಹಿತ್ಯ, ಸಂಸ್ಕೃತಿ ಮುಖ್ಯ. ಸಾಹಿತಿಗಳ ಸಂದೇಶಗಳನ್ನು ಅರಿತು, ಅರ್ಥೈಸಿಕೊಂಡು, ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಸಲಹೆ ನೀಡಿದರು.</p>.<p>ಡಾ. ವೇಮಗಲ್ ನಾರಾಯಣಸ್ವಾಮಿ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ‘ಸಂಸ್ಕೃತಿ ಸಿರಿ–2022’ ಪ್ರಶಸ್ತಿ ಪ್ರದಾನ ಮಾಡಿ ಅವರು ಭಾನುವಾರ ಮಾತನಾಡಿದರು.</p>.<p>‘ಒಂದು ವ್ಯಕ್ತಿಯಿಂದ ಒಂದು ವಿಷಯ, ವಿಚಾರವನ್ನು ಕೇಳಿದಾಗ ಅದನ್ನು ತಿಳಿದುಕೊಳ್ಳಬೇಕು. ಮಿದುಳಿಗೆ ತೆಗೆದುಕೊಂಡು ಅರ್ಥ ಮಾಡಿಕೊಳ್ಳಬೇಕು. ಒಳ್ಳೆಯ ವಿಷಯಗಳನ್ನು ನಮ್ಮ ಜೀವನದಲ್ಲಿ ಹೇಗೆ ಅಳವಡಿಸಿಕೊಳ್ಳಬೇಕು ಎಂಬುದನ್ನು ಯೋಚಿಸಬೇಕು’ ಎಂದು ಅವರು ಹೇಳಿದರು.</p>.<p>ನಿವೃತ್ತ ಐಎಎಸ್ ಅಧಿಕಾರಿ ಐ.ಎಂ. ವಿಠ್ಠಲಮೂರ್ತಿ ಮಾತನಾಡಿ,‘ಈಗಿನ ದಿನಗಳಲ್ಲಿ ಸರ್ಕಾರಕ್ಕೂ ಅರ್ಜಿ ಹಾಕಿ ಪ್ರಶಸ್ತಿಗಳನ್ನು ಪಡೆಯಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಸಂಸ್ಥೆಗಳನ್ನು ಕಟ್ಟಿದವರನ್ನು, ಸಂಸ್ಕೃತಿ ಬೆಳೆಸಿದವರು ಸೇರಿದಂತೆ ಎಲ್ಲ ಕ್ಷೇತ್ರಕ್ಕೆ ಸೇರಿದವರಿಗೆ ಪ್ರಶಸ್ತಿ ನೀಡಿರುವುದು ಅಭಿನಂದನೀಯ’ ಎಂದು ಹೇಳಿದರು.</p>.<p>‘ಸಂಸ್ಕೃತಿ ಸಿರಿ’–2022 ಪ್ರಶಸ್ತಿಯನ್ನು ಭಾಜನರಾದ ಗಾಯಕಿ ಕಸ್ತೂರಿ ಶಂಕರ್, ವಾಗ್ಮಿ ಸುಧಾ ಬರಗೂರು, ಪರಿಸರ ತಜ್ಞ- ಲೇಖಕ ನಾಗೇಶ್ ಹೆಗಡೆ, ಕನ್ನಡಪರ ಹೋರಾಟಗಾರ ರಾಮಣ್ಣ ಕೋಡಿಹೊಸಳ್ಳಿ, ಸಾಹಿತಿ ಕೋಟಗಾನಹಳ್ಳಿ ರಾಮಯ್ಯ, ಕಾಡುಮಲೇಶ್ವರ ಗೆಳೆಯರ ಬಳಗದ ಸಂಸ್ಥಾಪಕ ಅಧ್ಯಕ್ಷ ಬಿ.ಕೆ. ಶಿವರಾಂ, ನೃತ್ಯ ಗುರು ಸುಪರ್ಣ ವೆಂಕಟೇಶ್, ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಕಡಿದಾಳ್ ಪ್ರಕಾಶ್ ಅವರಿಗೆ ನೀಡಲಾಯಿತು. ₹25 ಸಾವಿರ ನಗದು, ಫಲಕ ಮತ್ತು ಪ್ರಶಸ್ತಿ ಪತ್ರವನ್ನು ವಿತರಿಸಲಾಯಿತು.</p>.<p>ಪ್ರತಿಷ್ಠಾನದ ಅಧ್ಯಕ್ಷ ವೇಮಗಲ್ ನಾರಾಯಣಸ್ವಾಮಿ, ಗೌರವ ಅಧ್ಯಕ್ಷ ಹಿ.ಜಿ. ಬೋರಲಿಂಗಯ್ಯ, ಪ್ರಧಾನ ಕಾರ್ಯದರ್ಶಿ ಆನಂದ ಮಾದಲಗೆರೆ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಜೀವನದಲ್ಲಿ ಸಾಹಿತ್ಯ, ಸಂಸ್ಕೃತಿ ಮುಖ್ಯ. ಸಾಹಿತಿಗಳ ಸಂದೇಶಗಳನ್ನು ಅರಿತು, ಅರ್ಥೈಸಿಕೊಂಡು, ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಸಲಹೆ ನೀಡಿದರು.</p>.<p>ಡಾ. ವೇಮಗಲ್ ನಾರಾಯಣಸ್ವಾಮಿ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ‘ಸಂಸ್ಕೃತಿ ಸಿರಿ–2022’ ಪ್ರಶಸ್ತಿ ಪ್ರದಾನ ಮಾಡಿ ಅವರು ಭಾನುವಾರ ಮಾತನಾಡಿದರು.</p>.<p>‘ಒಂದು ವ್ಯಕ್ತಿಯಿಂದ ಒಂದು ವಿಷಯ, ವಿಚಾರವನ್ನು ಕೇಳಿದಾಗ ಅದನ್ನು ತಿಳಿದುಕೊಳ್ಳಬೇಕು. ಮಿದುಳಿಗೆ ತೆಗೆದುಕೊಂಡು ಅರ್ಥ ಮಾಡಿಕೊಳ್ಳಬೇಕು. ಒಳ್ಳೆಯ ವಿಷಯಗಳನ್ನು ನಮ್ಮ ಜೀವನದಲ್ಲಿ ಹೇಗೆ ಅಳವಡಿಸಿಕೊಳ್ಳಬೇಕು ಎಂಬುದನ್ನು ಯೋಚಿಸಬೇಕು’ ಎಂದು ಅವರು ಹೇಳಿದರು.</p>.<p>ನಿವೃತ್ತ ಐಎಎಸ್ ಅಧಿಕಾರಿ ಐ.ಎಂ. ವಿಠ್ಠಲಮೂರ್ತಿ ಮಾತನಾಡಿ,‘ಈಗಿನ ದಿನಗಳಲ್ಲಿ ಸರ್ಕಾರಕ್ಕೂ ಅರ್ಜಿ ಹಾಕಿ ಪ್ರಶಸ್ತಿಗಳನ್ನು ಪಡೆಯಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಸಂಸ್ಥೆಗಳನ್ನು ಕಟ್ಟಿದವರನ್ನು, ಸಂಸ್ಕೃತಿ ಬೆಳೆಸಿದವರು ಸೇರಿದಂತೆ ಎಲ್ಲ ಕ್ಷೇತ್ರಕ್ಕೆ ಸೇರಿದವರಿಗೆ ಪ್ರಶಸ್ತಿ ನೀಡಿರುವುದು ಅಭಿನಂದನೀಯ’ ಎಂದು ಹೇಳಿದರು.</p>.<p>‘ಸಂಸ್ಕೃತಿ ಸಿರಿ’–2022 ಪ್ರಶಸ್ತಿಯನ್ನು ಭಾಜನರಾದ ಗಾಯಕಿ ಕಸ್ತೂರಿ ಶಂಕರ್, ವಾಗ್ಮಿ ಸುಧಾ ಬರಗೂರು, ಪರಿಸರ ತಜ್ಞ- ಲೇಖಕ ನಾಗೇಶ್ ಹೆಗಡೆ, ಕನ್ನಡಪರ ಹೋರಾಟಗಾರ ರಾಮಣ್ಣ ಕೋಡಿಹೊಸಳ್ಳಿ, ಸಾಹಿತಿ ಕೋಟಗಾನಹಳ್ಳಿ ರಾಮಯ್ಯ, ಕಾಡುಮಲೇಶ್ವರ ಗೆಳೆಯರ ಬಳಗದ ಸಂಸ್ಥಾಪಕ ಅಧ್ಯಕ್ಷ ಬಿ.ಕೆ. ಶಿವರಾಂ, ನೃತ್ಯ ಗುರು ಸುಪರ್ಣ ವೆಂಕಟೇಶ್, ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಕಡಿದಾಳ್ ಪ್ರಕಾಶ್ ಅವರಿಗೆ ನೀಡಲಾಯಿತು. ₹25 ಸಾವಿರ ನಗದು, ಫಲಕ ಮತ್ತು ಪ್ರಶಸ್ತಿ ಪತ್ರವನ್ನು ವಿತರಿಸಲಾಯಿತು.</p>.<p>ಪ್ರತಿಷ್ಠಾನದ ಅಧ್ಯಕ್ಷ ವೇಮಗಲ್ ನಾರಾಯಣಸ್ವಾಮಿ, ಗೌರವ ಅಧ್ಯಕ್ಷ ಹಿ.ಜಿ. ಬೋರಲಿಂಗಯ್ಯ, ಪ್ರಧಾನ ಕಾರ್ಯದರ್ಶಿ ಆನಂದ ಮಾದಲಗೆರೆ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>