<p>ಬೆಂಗಳೂರು: ‘ಕೋವಿಡ್ ಎರಡನೇ ಅಲೆಯಲ್ಲಿ ಕಲಾವಿದರ ಬದುಕು ತೀರಾ ಸಂಕಷ್ಟದಲ್ಲಿದೆ. ಅವರಿಗೆ ನೀಡುತ್ತಿರುವ ಪರಿಹಾರದ ಮೊತ್ತವನ್ನು ₹10 ಸಾವಿರಕ್ಕೆ ಹೆಚ್ಚಿಸಬೇಕು’ ಎಂದು ‘ಸಮುದಾಯ ಕರ್ನಾಟಕ ರಾಜ್ಯ ಸಮಿತಿ‘ಯು ಸರ್ಕಾರವನ್ನು ಒತ್ತಾಯಿಸಿದೆ.</p>.<p>‘ಕಲಾವಿದರಿಗೆ ಸರ್ಕಾರ ಘೋಷಿಸಿರುವ ₹3 ಸಾವಿರ ಏನಕ್ಕೂ ಸಾಲುವುದಿಲ್ಲ. ಅಲ್ಲದೆ, ಈ ನೆರವು ಪಡೆಯಲು 35 ವರ್ಷವಾಗಿರಬೇಕು ಎಂಬ ಷರತ್ತು ವಿಧಿಸಿರುವುದು ಸರಿಯಲ್ಲ. ಈ ನಿಯಮದಿಂದ ಬಹುತೇಕ ಯುವ ಕಲಾವಿದರು ಪರಿಹಾರದಿಂದ ವಂಚಿತರಾಗುತ್ತಾರೆ. ಸಾವಿರಾರು ಯುವಕ–ಯುವತಿಯರು ರಂಗಭೂಮಿಯನ್ನೇ ನೆಚ್ಚಿಕೊಂಡು ಕೆಲಸ ಮಾಡುತ್ತಿದ್ದಾರೆ. ಈ ನಿಯಮದಿಂದ ಸರ್ಕಾರದ ಉದ್ದೇಶವೇ ಈಡೇರಿದಂತಾಗುವುದಿಲ್ಲ’ ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಎಸ್. ದೇವೇಂದ್ರ ಗೌಡ ಹೇಳಿದ್ದಾರೆ.</p>.<p>‘ವಯಸ್ಸಿನ ಮಿತಿಯನ್ನು ಹಿಂಪಡೆಯಬೇಕು ಮತ್ತು ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಬೇಕು’ ಎಂದೂ ಅವರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ಕೋವಿಡ್ ಎರಡನೇ ಅಲೆಯಲ್ಲಿ ಕಲಾವಿದರ ಬದುಕು ತೀರಾ ಸಂಕಷ್ಟದಲ್ಲಿದೆ. ಅವರಿಗೆ ನೀಡುತ್ತಿರುವ ಪರಿಹಾರದ ಮೊತ್ತವನ್ನು ₹10 ಸಾವಿರಕ್ಕೆ ಹೆಚ್ಚಿಸಬೇಕು’ ಎಂದು ‘ಸಮುದಾಯ ಕರ್ನಾಟಕ ರಾಜ್ಯ ಸಮಿತಿ‘ಯು ಸರ್ಕಾರವನ್ನು ಒತ್ತಾಯಿಸಿದೆ.</p>.<p>‘ಕಲಾವಿದರಿಗೆ ಸರ್ಕಾರ ಘೋಷಿಸಿರುವ ₹3 ಸಾವಿರ ಏನಕ್ಕೂ ಸಾಲುವುದಿಲ್ಲ. ಅಲ್ಲದೆ, ಈ ನೆರವು ಪಡೆಯಲು 35 ವರ್ಷವಾಗಿರಬೇಕು ಎಂಬ ಷರತ್ತು ವಿಧಿಸಿರುವುದು ಸರಿಯಲ್ಲ. ಈ ನಿಯಮದಿಂದ ಬಹುತೇಕ ಯುವ ಕಲಾವಿದರು ಪರಿಹಾರದಿಂದ ವಂಚಿತರಾಗುತ್ತಾರೆ. ಸಾವಿರಾರು ಯುವಕ–ಯುವತಿಯರು ರಂಗಭೂಮಿಯನ್ನೇ ನೆಚ್ಚಿಕೊಂಡು ಕೆಲಸ ಮಾಡುತ್ತಿದ್ದಾರೆ. ಈ ನಿಯಮದಿಂದ ಸರ್ಕಾರದ ಉದ್ದೇಶವೇ ಈಡೇರಿದಂತಾಗುವುದಿಲ್ಲ’ ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಎಸ್. ದೇವೇಂದ್ರ ಗೌಡ ಹೇಳಿದ್ದಾರೆ.</p>.<p>‘ವಯಸ್ಸಿನ ಮಿತಿಯನ್ನು ಹಿಂಪಡೆಯಬೇಕು ಮತ್ತು ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಬೇಕು’ ಎಂದೂ ಅವರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>