‘ಕಲಾವಿದರಿಗೆ ಸರ್ಕಾರ ಘೋಷಿಸಿರುವ ₹3 ಸಾವಿರ ಏನಕ್ಕೂ ಸಾಲುವುದಿಲ್ಲ. ಅಲ್ಲದೆ, ಈ ನೆರವು ಪಡೆಯಲು 35 ವರ್ಷವಾಗಿರಬೇಕು ಎಂಬ ಷರತ್ತು ವಿಧಿಸಿರುವುದು ಸರಿಯಲ್ಲ. ಈ ನಿಯಮದಿಂದ ಬಹುತೇಕ ಯುವ ಕಲಾವಿದರು ಪರಿಹಾರದಿಂದ ವಂಚಿತರಾಗುತ್ತಾರೆ. ಸಾವಿರಾರು ಯುವಕ–ಯುವತಿಯರು ರಂಗಭೂಮಿಯನ್ನೇ ನೆಚ್ಚಿಕೊಂಡು ಕೆಲಸ ಮಾಡುತ್ತಿದ್ದಾರೆ. ಈ ನಿಯಮದಿಂದ ಸರ್ಕಾರದ ಉದ್ದೇಶವೇ ಈಡೇರಿದಂತಾಗುವುದಿಲ್ಲ’ ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಎಸ್. ದೇವೇಂದ್ರ ಗೌಡ ಹೇಳಿದ್ದಾರೆ.