ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕಲಾವಿದರಿಗೆ ₹10 ಸಾವಿರ ಪರಿಹಾರ ನೀಡಿ’

Last Updated 2 ಜೂನ್ 2021, 19:29 IST
ಅಕ್ಷರ ಗಾತ್ರ

ಬೆಂಗಳೂರು: ‘ಕೋವಿಡ್ ಎರಡನೇ ಅಲೆಯಲ್ಲಿ ಕಲಾವಿದರ ಬದುಕು ತೀರಾ ಸಂಕಷ್ಟದಲ್ಲಿದೆ. ಅವರಿಗೆ ನೀಡುತ್ತಿರುವ ಪರಿಹಾರದ ಮೊತ್ತವನ್ನು ₹10 ಸಾವಿರಕ್ಕೆ ಹೆಚ್ಚಿಸಬೇಕು’ ಎಂದು ‘ಸಮುದಾಯ ಕರ್ನಾಟಕ ರಾಜ್ಯ ಸಮಿತಿ‘ಯು ಸರ್ಕಾರವನ್ನು ಒತ್ತಾಯಿಸಿದೆ.

‘ಕಲಾವಿದರಿಗೆ ಸರ್ಕಾರ ಘೋಷಿಸಿರುವ ₹3 ಸಾವಿರ ಏನಕ್ಕೂ ಸಾಲುವುದಿಲ್ಲ. ಅಲ್ಲದೆ, ಈ ನೆರವು ಪಡೆಯಲು 35 ವರ್ಷವಾಗಿರಬೇಕು ಎಂಬ ಷರತ್ತು ವಿಧಿಸಿರುವುದು ಸರಿಯಲ್ಲ. ಈ ನಿಯಮದಿಂದ ಬಹುತೇಕ ಯುವ ಕಲಾವಿದರು ಪರಿಹಾರದಿಂದ ವಂಚಿತರಾಗುತ್ತಾರೆ. ಸಾವಿರಾರು ಯುವಕ–ಯುವತಿಯರು ರಂಗಭೂಮಿಯನ್ನೇ ನೆಚ್ಚಿಕೊಂಡು ಕೆಲಸ ಮಾಡುತ್ತಿದ್ದಾರೆ. ಈ ನಿಯಮದಿಂದ ಸರ್ಕಾರದ ಉದ್ದೇಶವೇ ಈಡೇರಿದಂತಾಗುವುದಿಲ್ಲ’ ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಎಸ್. ದೇವೇಂದ್ರ ಗೌಡ ಹೇಳಿದ್ದಾರೆ.

‘ವಯಸ್ಸಿನ ಮಿತಿಯನ್ನು ಹಿಂಪಡೆಯಬೇಕು ಮತ್ತು ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಬೇಕು’ ಎಂದೂ ಅವರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT