‘ಅಧಿವೇಶನದ ಎಲ್ಲಾ ದಿನಗಳಲ್ಲೂ ಸಂಸತ್ತಿನಲ್ಲಿ ಹಾಜರಿರಬೇಕು. ರೈತರ ಸಮಸ್ಯೆಯ ಬಗ್ಗೆ ಚರ್ಚಿಸಬೇಕು. ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಗಡಿಗಳಲ್ಲಿ ರೈತರು ಸತತ ಆರು ತಿಂಗಳಿಂದ ಧರಣಿ ನಡೆಸುತ್ತಿದ್ದು ಅವರ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಬೇಕು. ಸರ್ಕಾರವು ಈ ಬೇಡಿಕೆ ಈಡೇರಿಸುವ ಭರವಸೆ ನೀಡುವವರೆಗೂ ಕಲಾಪ ನಡೆಸಲು ಅವಕಾಶ ನೀಡಬಾರದು’ ಎಂದು ತಿಳಿಸಿದೆ.