<p><strong>ಬೆಂಗಳೂರು</strong>: ಮುಂಗಾರು ಅಧಿವೇಶನವು ಇದೇ 19ರಿಂದ ಆರಂಭವಾಗಲಿದ್ದು, ಇದರಲ್ಲಿ ಎಲ್ಲರೂ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಸಂಯುಕ್ತ ಹೋರಾಟ–ಕರ್ನಾಟಕ ಎಲ್ಲಾ ಸಂಸದರಿಗೆ ಮತದಾರರ ವಿಪ್ ಜಾರಿಗೊಳಿಸಿದೆ.</p>.<p>ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ಹಾಗೂ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ರೈತಾಂದೋಲನ ರೂಪಿಸಿರುವ ಈ ಸಂಘಟನೆಯು ರಾಜ್ಯದ ಎಲ್ಲಾ ಸಂಸದರಿಗೂ ಈಗಾಗಲೇ ವಿಪ್ ರವಾನಿಸಿದೆ. ಇದನ್ನು ಉಲ್ಲಂಘಿಸಿದರೆ ಸಂಸದರು ಪಾಲ್ಗೊಳ್ಳುವ ಸಾರ್ವಜನಿಕ ಕಾರ್ಯಕ್ರಮಗಳ ವೇಳೆ ತೀವ್ರ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಸಿದೆ.</p>.<p>‘ಅಧಿವೇಶನದ ಎಲ್ಲಾ ದಿನಗಳಲ್ಲೂ ಸಂಸತ್ತಿನಲ್ಲಿ ಹಾಜರಿರಬೇಕು. ರೈತರ ಸಮಸ್ಯೆಯ ಬಗ್ಗೆ ಚರ್ಚಿಸಬೇಕು. ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಗಡಿಗಳಲ್ಲಿ ರೈತರು ಸತತ ಆರು ತಿಂಗಳಿಂದ ಧರಣಿ ನಡೆಸುತ್ತಿದ್ದು ಅವರ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಬೇಕು. ಸರ್ಕಾರವು ಈ ಬೇಡಿಕೆ ಈಡೇರಿಸುವ ಭರವಸೆ ನೀಡುವವರೆಗೂ ಕಲಾಪ ನಡೆಸಲು ಅವಕಾಶ ನೀಡಬಾರದು’ ಎಂದು ತಿಳಿಸಿದೆ.</p>.<p>‘ರೈತರ ಪರವಾದ ನಿರ್ಣಯಗಳನ್ನು ಮಂಡಿಸಿದಾಗ ಅದನ್ನು ಯಾರೂ ವಿರೋಧಿಸಬಾರದು. ಮತದಾನದಿಂದಲೂ ದೂರ ಉಳಿಯಬಾರದು’ ಎಂದು ಒತ್ತಾಯಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮುಂಗಾರು ಅಧಿವೇಶನವು ಇದೇ 19ರಿಂದ ಆರಂಭವಾಗಲಿದ್ದು, ಇದರಲ್ಲಿ ಎಲ್ಲರೂ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಸಂಯುಕ್ತ ಹೋರಾಟ–ಕರ್ನಾಟಕ ಎಲ್ಲಾ ಸಂಸದರಿಗೆ ಮತದಾರರ ವಿಪ್ ಜಾರಿಗೊಳಿಸಿದೆ.</p>.<p>ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ಹಾಗೂ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ರೈತಾಂದೋಲನ ರೂಪಿಸಿರುವ ಈ ಸಂಘಟನೆಯು ರಾಜ್ಯದ ಎಲ್ಲಾ ಸಂಸದರಿಗೂ ಈಗಾಗಲೇ ವಿಪ್ ರವಾನಿಸಿದೆ. ಇದನ್ನು ಉಲ್ಲಂಘಿಸಿದರೆ ಸಂಸದರು ಪಾಲ್ಗೊಳ್ಳುವ ಸಾರ್ವಜನಿಕ ಕಾರ್ಯಕ್ರಮಗಳ ವೇಳೆ ತೀವ್ರ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಸಿದೆ.</p>.<p>‘ಅಧಿವೇಶನದ ಎಲ್ಲಾ ದಿನಗಳಲ್ಲೂ ಸಂಸತ್ತಿನಲ್ಲಿ ಹಾಜರಿರಬೇಕು. ರೈತರ ಸಮಸ್ಯೆಯ ಬಗ್ಗೆ ಚರ್ಚಿಸಬೇಕು. ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಗಡಿಗಳಲ್ಲಿ ರೈತರು ಸತತ ಆರು ತಿಂಗಳಿಂದ ಧರಣಿ ನಡೆಸುತ್ತಿದ್ದು ಅವರ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಬೇಕು. ಸರ್ಕಾರವು ಈ ಬೇಡಿಕೆ ಈಡೇರಿಸುವ ಭರವಸೆ ನೀಡುವವರೆಗೂ ಕಲಾಪ ನಡೆಸಲು ಅವಕಾಶ ನೀಡಬಾರದು’ ಎಂದು ತಿಳಿಸಿದೆ.</p>.<p>‘ರೈತರ ಪರವಾದ ನಿರ್ಣಯಗಳನ್ನು ಮಂಡಿಸಿದಾಗ ಅದನ್ನು ಯಾರೂ ವಿರೋಧಿಸಬಾರದು. ಮತದಾನದಿಂದಲೂ ದೂರ ಉಳಿಯಬಾರದು’ ಎಂದು ಒತ್ತಾಯಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>