ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಾದ್ಯಂತ ‘ನಾವು ಸನಾತನಿಗಳಲ್ಲ’ ಅಭಿಯಾನ: ಕೆ.ಎಸ್. ಭಗವಾನ್

ಸನಾತನವೆಂಬುದು ಬ್ರಾಹ್ಮಣ ಧರ್ಮ: ಭಗವಾನ್
Published 5 ಅಕ್ಟೋಬರ್ 2023, 14:35 IST
Last Updated 5 ಅಕ್ಟೋಬರ್ 2023, 14:35 IST
ಅಕ್ಷರ ಗಾತ್ರ

ಬೆಂಗಳೂರು: ‘ಸನಾತನವೆಂಬುದು ಬ್ರಾಹ್ಮಣ ಧರ್ಮ, ಇದು ಸಂವಿಧಾನಕ್ಕೆ ಸಂಪೂರ್ಣ ವಿರುದ್ಧವಾಗಿದೆ’ ಎಂದು ಹೇಳಿದ ವಿಚಾರವಾದಿ ಕೆ.ಎಸ್. ಭಗವಾನ್, ‘ನಾವು ಸನಾತನಿಗಳಲ್ಲ’ ಎಂಬ ಜಾಗೃತಿ ಅಭಿಯಾನವನ್ನು ರಾಜ್ಯದಾದ್ಯಂತ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಭಾರತದ ಸಂವಿಧಾನ ಯಾವುದೇ ಬೇಧ–ಭಾವ ಮಾಡದೇ ಸಮಾನತೆಯನ್ನು ಪ್ರತಿಪಾದಿಸುತ್ತದೆ. ಆದರೆ, ಸನಾತನ ಧರ್ಮದಲ್ಲಿ ಬ್ರಾಹ್ಮಣರನ್ನು ಹೊರತುಪಡಿಸಿ ಬೇರೆಲ್ಲರೂ ಕೀಳು ಎಂಬ ಮನೋಭಾವ ಇದೆ. ಎಲ್ಲ ಶೂದ್ರರು ಬ್ರಾಹ್ಮಣರ ಗುಲಾಮರು ಎಂದು ಪ್ರತಿಪಾದಿಸಲಾಗುತ್ತದೆ. ಈ ಧೋರಣೆಯನ್ನು ಒಪ್ಪಿಕೊಳ್ಳುವುದಕ್ಕೆ ಸಾಧ್ಯವೇ’ ಎಂದು ಪ್ರಶ್ನಿಸಿದರು.

‘ಸನಾತನ ಧರ್ಮ, ಸ್ವಾತಂತ್ರ್ಯವನ್ನು ಮೊಟಕುಗೊಳಿಸುವುದರ ಜೊತೆಗೆ ಅಸಮಾನತೆಯನ್ನು ಪೋಷಿಸುತ್ತದೆ. ಈ ಧರ್ಮದಲ್ಲಿನ ಅನಿಷ್ಟಗಳನ್ನು ತೊಲಗಿಸಲು ಬುದ್ಧ, ಬಸವ, ಗಾಂಧಿ ಮತ್ತು ಅಂಬೇಡ್ಕರ್ ಅವರು ಪ್ರಯತ್ನ ಮಾಡಿದ್ದರು. ಆದರೆ, ಇತ್ತೀಚಿನ ದಿನಗಳಲ್ಲಿ ಈ ಅನಿಷ್ಟಗಳು ಬಲವಾಗುತ್ತಿವೆ. ಡಾ.ಬಿ.ಆರ್. ಅಂಬೇಡ್ಕರ್ ಅವರ ಆಶಯದಂತೆ ಸನಾತನ ಧರ್ಮವನ್ನು ಬುಡಸಮೇತ ಕಿತ್ತು ಹಾಕಬೇಕು’ ಎಂದು ಹೇಳಿದರು.

‘ಹಿಂದೂ ಧರ್ಮದಲ್ಲಿ ಸಮಾನತೆ ಎಂಬುದಿಲ್ಲ. ದೇವಸ್ಥಾನಗಳಲ್ಲಿ ಬ್ರಾಹ್ಮಣರೇ ಅರ್ಚಕರಾಗಿದ್ದಾರೆ. ಆದರೆ ಬೇರೆ ಧರ್ಮಗಳಲ್ಲಿ ಈ ಅಸಮಾನತೆ ಇಲ್ಲ. ಸರ್ಕಾರದ ಅಧೀನದಲ್ಲಿರುವ ಎಲ್ಲ ದೇವಸ್ಥಾನಗಳ ಅರ್ಚಕರ ಹುದ್ದೆಗಳನ್ನು ಪರೀಕ್ಷೆ ಮೂಲಕ ಆಯ್ಕೆ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು’ ಎಂದು ಸಲಹೆ ನೀಡಿದರು.

ರಾಜಕೀಯ ವಿಶ್ಲೇಷಕ ಬಾಪು ಹೆದ್ದೂರು ಶೆಟ್ಟಿ, ಶೂದ್ರ ಶಕ್ತಿ ಪತ್ರಿಕೆಯ ಸಂಪಾದಕ ಬಿ.ಆರ್. ರಾಮೇಗೌಡ, ಲೇಖಕಿ ಬಿ.ಟಿ. ಲಲಿತಾ ನಾಯಕ್‌ ಇದ್ದರು.

ಶೂದ್ರರು ಎಂಬ ಪದ ಅವಹೇಳನಕಾರಿಯಾಗಿದ್ದು ಇದರ ಬದಲಾಗಿ ಅಬ್ರಾಹ್ಮಣರು ಎಂಬ ಪದವನ್ನೇ ಬಳಕೆ ಮಾಡಬೇಕು.

-ಕೆ.ಎಸ್. ಭಗವಾನ್ ವಿಚಾರವಾದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT