‘ಬೆಂಗಳೂರು ಮತ್ತು ಸುತ್ತಮುತ್ತಲ ಲೋಕಸಭಾ ಸದಸ್ಯರು ಒತ್ತಡ ಹಾಕಿದರೆ ಇನ್ನೊಂದು ತಿಂಗಳಲ್ಲಿ ಕೇಂದ್ರ ಸಚಿವ ಸಂಪುಟದ ಅನುಮತಿ ದೊರೆಯುವ ಸಾಧ್ಯತೆ ಇದೆ. ಯೋಜನೆ ಸಾಧ್ಯತೆಯ ಬಗ್ಗೆ ವಿಸ್ತೃತ ಚರ್ಚೆಗಳು ನಡೆದ ಬಳಿಕವೇ ರೈಲ್ವೆ ಮಂಡಳಿಯ ಅನುಮೋದನೆ ದೊರೆತಿದೆ. ಹೀಗಾಗಿ, ಯೋಜನೆಗೆ ಮತ್ತೆ ಯಾವ ಅಡೆ–ತಡೆಯೂ ಬರಲಾರದು ಎಂಬ ನಿರೀಕ್ಷೆ ಇದೆ’ ಎನ್ನುತ್ತಾರೆ ರೈಲ್ವೆ ಹೋರಾಟಗಾರ ಸಂಜೀವ್ ದ್ಯಾಮಣ್ಣನವರ್.