ಬೆಂಗಳೂರು: ರಾಜ್ಯದ ಮರಳು ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶಕ್ಕೆ ಒತ್ತಾಯಿಸಿ ಕಾಂಗ್ರೆಸ್ನ ಯು.ಟಿ.ಖಾದರ್ ಹಾಗೂ ಅಮರೇಗೌಡ ಬಯ್ಯಾಪುರ ವಿಧಾನ ಸಭಾಧ್ಯಕ್ಷರ ಪೀಠದ ಎದುರು ಶುಕ್ರವಾರ ಧರಣಿ ನಡೆಸಿದರು.
ಮರಳು ಸಮಸ್ಯೆ ಬಗ್ಗೆ ಬಿಜೆಪಿಯ ಸಂಜೀವ ಮಠಂದೂರು ಅವರ ಪ್ರಶ್ನೆಗೆ ಉತ್ತರಿಸಿದ ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ.ಪಾಟೀಲ, ರಾಜ್ಯದಲ್ಲಿ ಮರಳು ನೀತಿ ಜಾರಿಗೆ ರೂಪರೇಷೆ ಸಿದ್ಧಪಡಿಸಲಾಗುತ್ತಿದೆ ಎಂದು ಹೇಳಿದರು.
‘ಮರಳಿನ ಸಮಸ್ಯೆ ಗಂಭೀರವಾಗಿದೆ. ಎಲ್ಲಿಯೂ ಸಿಗುತ್ತಿಲ್ಲ. ಈ ಬಗ್ಗೆ ಚರ್ಚೆ ಆಗಬೇಕು ಎಂದು ಕಾಂಗ್ರೆಸ್, ಜೆಡಿಎಸ್ನ ಸದಸ್ಯರು ಒತ್ತಾಯಿಸಿದರು.