ಬೆಂಗಳೂರು: ಚಿತ್ರರಂಗದ ಸಮಸ್ಯೆಗಳನ್ನು ಚರ್ಚಿಸಲೆಂದು ಗೋವಾಕ್ಕೆ ತೆರಳಿದ್ದ ಕನ್ನಡ ಚಲನಚಿತ್ರರಂಗದ ಕೆಲ ನಿರ್ಮಾಪಕರ ನಡುವೆ ಸೋಮವಾರ ರಾತ್ರಿ ಗಲಾಟೆ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಗಲಾಟೆಯಲ್ಲಿ ತೀವ್ರವಾಗಿ ಗಾಯಗೊಂಡ ರಥಾವರ ಮಂಜುನಾಥ್, ಎ.ಗಣೇಶ್ ಮೊದಲಾದವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.