<p><strong>ಬೆಂಗಳೂರು</strong>: ಸರಕು ಸಾಗಣೆ ವಾಹನದಲ್ಲಿ ಈರುಳ್ಳಿ ಚೀಲಗಳ ನಡುವೆ ಶ್ರೀಗಂಧದ ತುಂಡುಗಳನ್ನು ಬಚ್ಚಿಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಸಿದ್ಧಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಆಂಧ್ರಪ್ರದೇಶ ಕರ್ನೂಲ್ ಮೂಲದ ಶೇಖ್ ಅಬ್ದುಲ್ ಕಲಾಂ (47) ಮತ್ತು ಶೇಖ್ ಶಾರೂಕ್(31) ಎಂಬುವರನ್ನು ಬಂಧಿಸಿ, ₹1.12 ಕೋಟಿ ಮೌಲ್ಯದ 750 ಕೆ.ಜಿ. ತೂಕದ 258 ಶ್ರೀಗಂಧದ ತುಂಡುಗಳು, ಸರಕು ಸಾಗಣೆ ವಾಹನ ಹಾಗೂ ಕಾರನ್ನು ಜಪ್ತಿ ಮಾಡಲಾಗಿದೆ.</p>.<p>ಆರೋಪಿಗಳು ಅಕ್ಟೋಬರ್ 15ರ ಮಧ್ಯರಾತ್ರಿ 12.30ರ ಸೋಮೇಶ್ವರನಗರ ಆರ್ಚ್ ಬಳಿ ಗೂಡ್ಸ್ ವಾಹನ ನಿಲ್ಲಿಸಿಕೊಂಡು ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದರು. ಈ ಬಗ್ಗೆ ಸಿಕ್ಕ ಮಾಹಿತಿ ಮೇರೆಗೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ಕೈಗೊಂಡು, ವಾಹನ ತಪಾಸಣೆ ನಡೆಸಿದಾಗ ಈರುಳ್ಳಿ ತುಂಬಿದ್ದ ಚೀಲದಲ್ಲಿ ಶ್ರೀಗಂಧದ ತುಂಡುಗಳು ಪತ್ತೆಯಾದವು.</p>.<p>ಆಂಧ್ರಪ್ರದೇಶ ಕರ್ನೂಲ್ನಿಂದ ಆರೋಪಿಗಳು ಶ್ರೀಗಂಧದ ತುಂಡುಗಳನ್ನು ನಗರಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದರು. 258 ತುಂಡುಗಳನ್ನು 18 ಚೀಲಗಳಿಗೆ ತುಂಬಿದ್ದರು. ಶೇಖ್ ಶಾರೂಕ್ ಈ ಲಘು ಸರಕು ಸಾಗಣೆ ವಾಹನ ಚಾಲನೆ ಮಾಡಿಕೊಂಡು ಬಂದಿದ್ದು, ಈ ವಾಹನದ ಹಿಂದೆ ಉಳಿದ ಮೂವರು ಆರೋಪಿಗಳು ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದರು. <br /><br />ಶ್ರೀಗಂಧದ ತುಂಡುಗಳನ್ನು ನಗರದ ಡೀಲರ್ಗೆ ತಲುಪಿಸಲು ಬಂದಿದ್ದರು ಎಂಬುದು ವಿಚಾರಣೆಯಿಂದ ತಿಳಿದುಬಂದಿದೆ. ಈ ಕಳ್ಳಸಾಗಣೆಯಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಸಿದ್ಧಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸರಕು ಸಾಗಣೆ ವಾಹನದಲ್ಲಿ ಈರುಳ್ಳಿ ಚೀಲಗಳ ನಡುವೆ ಶ್ರೀಗಂಧದ ತುಂಡುಗಳನ್ನು ಬಚ್ಚಿಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಸಿದ್ಧಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಆಂಧ್ರಪ್ರದೇಶ ಕರ್ನೂಲ್ ಮೂಲದ ಶೇಖ್ ಅಬ್ದುಲ್ ಕಲಾಂ (47) ಮತ್ತು ಶೇಖ್ ಶಾರೂಕ್(31) ಎಂಬುವರನ್ನು ಬಂಧಿಸಿ, ₹1.12 ಕೋಟಿ ಮೌಲ್ಯದ 750 ಕೆ.ಜಿ. ತೂಕದ 258 ಶ್ರೀಗಂಧದ ತುಂಡುಗಳು, ಸರಕು ಸಾಗಣೆ ವಾಹನ ಹಾಗೂ ಕಾರನ್ನು ಜಪ್ತಿ ಮಾಡಲಾಗಿದೆ.</p>.<p>ಆರೋಪಿಗಳು ಅಕ್ಟೋಬರ್ 15ರ ಮಧ್ಯರಾತ್ರಿ 12.30ರ ಸೋಮೇಶ್ವರನಗರ ಆರ್ಚ್ ಬಳಿ ಗೂಡ್ಸ್ ವಾಹನ ನಿಲ್ಲಿಸಿಕೊಂಡು ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದರು. ಈ ಬಗ್ಗೆ ಸಿಕ್ಕ ಮಾಹಿತಿ ಮೇರೆಗೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ಕೈಗೊಂಡು, ವಾಹನ ತಪಾಸಣೆ ನಡೆಸಿದಾಗ ಈರುಳ್ಳಿ ತುಂಬಿದ್ದ ಚೀಲದಲ್ಲಿ ಶ್ರೀಗಂಧದ ತುಂಡುಗಳು ಪತ್ತೆಯಾದವು.</p>.<p>ಆಂಧ್ರಪ್ರದೇಶ ಕರ್ನೂಲ್ನಿಂದ ಆರೋಪಿಗಳು ಶ್ರೀಗಂಧದ ತುಂಡುಗಳನ್ನು ನಗರಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದರು. 258 ತುಂಡುಗಳನ್ನು 18 ಚೀಲಗಳಿಗೆ ತುಂಬಿದ್ದರು. ಶೇಖ್ ಶಾರೂಕ್ ಈ ಲಘು ಸರಕು ಸಾಗಣೆ ವಾಹನ ಚಾಲನೆ ಮಾಡಿಕೊಂಡು ಬಂದಿದ್ದು, ಈ ವಾಹನದ ಹಿಂದೆ ಉಳಿದ ಮೂವರು ಆರೋಪಿಗಳು ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದರು. <br /><br />ಶ್ರೀಗಂಧದ ತುಂಡುಗಳನ್ನು ನಗರದ ಡೀಲರ್ಗೆ ತಲುಪಿಸಲು ಬಂದಿದ್ದರು ಎಂಬುದು ವಿಚಾರಣೆಯಿಂದ ತಿಳಿದುಬಂದಿದೆ. ಈ ಕಳ್ಳಸಾಗಣೆಯಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಸಿದ್ಧಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>