ಈ ನಡುವೆ ಕೆಲವು ಕಿಡಿಗೇಡಿಗಳು, ನಾಮಫಲಕವನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ ಎಂಬ ಸುಳ್ಳು ವದಂತಿ ಹಬ್ಬಿಸಿದರು. ಘಟನೆ ಅಲ್ಲಲ್ಲಿ ತೀವ್ರ ಚರ್ಚೆಗೊಳಗಾಯಿತು. ‘ನಾಮಫಲಕವನ್ನು ಧ್ವಂಸಗೊಳಿಸಿರುವುದು ಖಂಡನೀಯ. ಕೂಡಲೇ ನಾಮಫಲಕವನ್ನು ಪುನರ್ ಸ್ಥಾಪಿಸಬೇಕು’ ಎಂದು ರಾಜ್ಯಸಭೆ ಸದಸ್ಯ ರಾಜೀವ್ ಚಂದ್ರಶೇಖರ್ ಅವರು ತಮ್ಮ ಟ್ವಿಟರ್ನಲ್ಲಿ ಒತ್ತಾಯಿಸಿದ್ದರು.