‘ಜಾತಿಯ ಅಸಮಾನತೆ ಎಲ್ಲಿಯವರೆಗೆ ಇರುತ್ತದೆಯೋ, ಅಲ್ಲಿಯವರೆಗೆ ಮೀಸಲಾತಿ, ಬಡ್ತಿ ಮೀಸಲಾತಿ ನೀಡುವುದು ಸಾಮಾಜಿಕ ನ್ಯಾಯದ ಬದ್ಧತೆ. ಬಡ್ತಿ ಮೀಸಲಾತಿ ಬಗ್ಗೆ ಸುಪ್ರೀಂ ಕೋರ್ಟ್ ಕೂಡ ದಲಿತರ ಪರ ತೀರ್ಪು ನೀಡಿದೆ. ಬಡ್ತಿ ಮೀಸಲಾತಿ ಏಕೆ ನೀಡುತ್ತಿದ್ದಾರೆ ಎಂಬ ಬಗ್ಗೆ ಸ್ವಾಮೀಜಿಯವರಿಗೆ ಅರಿವಿನ ಕೊರತೆ ಇದೆ’ ಎಂದು ಸಮಿತಿಯ ರಾಜ್ಯ ಸಂಚಾಲಕ ಲಕ್ಷ್ಮೀನಾರಾಯಣ ನಾಗವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.