<p><strong>ಬೆಂಗಳೂರು:</strong>‘ಬಡ್ತಿ ಮೀಸಲಾತಿ ಬೇಡ ಎಂದು ಸಾಣೇಹಳ್ಳಿ ಪಂಡಿತಾರಾಧ್ಯ ಸ್ವಾಮೀಜಿ ಹೇಳಿರುವುದು ದಲಿತ ಸಮುದಾಯಕ್ಕೆ ದಿಗ್ಭ್ರಮೆ ಮೂಡಿಸಿದೆ. ಕೂಡಲೇ ಅವರು ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು’ ಎಂದು ರಾಜ್ಯ ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ.</p>.<p>‘ಶತಮಾನಗಳಿಂದ ವಂಚಿತರಾಗಿದ್ದ ಕೆಳ ಸಮುದಾಯಗಳಿಗೆ ಅನುಭವ ಮಂಟಪದಲ್ಲಿ ಬಸವಣ್ಣ ಅವಕಾಶ ಮಾಡಿಕೊಟ್ಟಿದ್ದರು. ಇಂತಹ ಅನುಭವ ಮಂಟಪದ ಮಾದರಿಯನ್ನೇ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಸಂವಿಧಾನದಲ್ಲಿ ಅಳವಡಿಸಿದ್ದರು’ ಎಂದು ಸಮಿತಿ ಹೇಳಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/stateregional/no-need-reservation-says-655636.html" target="_blank"><strong>ಬಡ್ತಿ ಮೀಸಲಾತಿ ಬೇಡ ಸಾಣೇಹಳ್ಳಿ ಶ್ರೀ</strong></a></p>.<p>‘ಜಾತಿಯ ಅಸಮಾನತೆ ಎಲ್ಲಿಯವರೆಗೆ ಇರುತ್ತದೆಯೋ, ಅಲ್ಲಿಯವರೆಗೆ ಮೀಸಲಾತಿ, ಬಡ್ತಿ ಮೀಸಲಾತಿ ನೀಡುವುದು ಸಾಮಾಜಿಕ ನ್ಯಾಯದ ಬದ್ಧತೆ. ಬಡ್ತಿ ಮೀಸಲಾತಿ ಬಗ್ಗೆ ಸುಪ್ರೀಂ ಕೋರ್ಟ್ ಕೂಡ ದಲಿತರ ಪರ ತೀರ್ಪು ನೀಡಿದೆ. ಬಡ್ತಿ ಮೀಸಲಾತಿ ಏಕೆ ನೀಡುತ್ತಿದ್ದಾರೆ ಎಂಬ ಬಗ್ಗೆ ಸ್ವಾಮೀಜಿಯವರಿಗೆ ಅರಿವಿನ ಕೊರತೆ ಇದೆ’ ಎಂದು ಸಮಿತಿಯ ರಾಜ್ಯ ಸಂಚಾಲಕ ಲಕ್ಷ್ಮೀನಾರಾಯಣ ನಾಗವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>‘ಬಡ್ತಿ ಮೀಸಲಾತಿ ಬೇಡ ಎಂದು ಸಾಣೇಹಳ್ಳಿ ಪಂಡಿತಾರಾಧ್ಯ ಸ್ವಾಮೀಜಿ ಹೇಳಿರುವುದು ದಲಿತ ಸಮುದಾಯಕ್ಕೆ ದಿಗ್ಭ್ರಮೆ ಮೂಡಿಸಿದೆ. ಕೂಡಲೇ ಅವರು ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು’ ಎಂದು ರಾಜ್ಯ ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ.</p>.<p>‘ಶತಮಾನಗಳಿಂದ ವಂಚಿತರಾಗಿದ್ದ ಕೆಳ ಸಮುದಾಯಗಳಿಗೆ ಅನುಭವ ಮಂಟಪದಲ್ಲಿ ಬಸವಣ್ಣ ಅವಕಾಶ ಮಾಡಿಕೊಟ್ಟಿದ್ದರು. ಇಂತಹ ಅನುಭವ ಮಂಟಪದ ಮಾದರಿಯನ್ನೇ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಸಂವಿಧಾನದಲ್ಲಿ ಅಳವಡಿಸಿದ್ದರು’ ಎಂದು ಸಮಿತಿ ಹೇಳಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/stateregional/no-need-reservation-says-655636.html" target="_blank"><strong>ಬಡ್ತಿ ಮೀಸಲಾತಿ ಬೇಡ ಸಾಣೇಹಳ್ಳಿ ಶ್ರೀ</strong></a></p>.<p>‘ಜಾತಿಯ ಅಸಮಾನತೆ ಎಲ್ಲಿಯವರೆಗೆ ಇರುತ್ತದೆಯೋ, ಅಲ್ಲಿಯವರೆಗೆ ಮೀಸಲಾತಿ, ಬಡ್ತಿ ಮೀಸಲಾತಿ ನೀಡುವುದು ಸಾಮಾಜಿಕ ನ್ಯಾಯದ ಬದ್ಧತೆ. ಬಡ್ತಿ ಮೀಸಲಾತಿ ಬಗ್ಗೆ ಸುಪ್ರೀಂ ಕೋರ್ಟ್ ಕೂಡ ದಲಿತರ ಪರ ತೀರ್ಪು ನೀಡಿದೆ. ಬಡ್ತಿ ಮೀಸಲಾತಿ ಏಕೆ ನೀಡುತ್ತಿದ್ದಾರೆ ಎಂಬ ಬಗ್ಗೆ ಸ್ವಾಮೀಜಿಯವರಿಗೆ ಅರಿವಿನ ಕೊರತೆ ಇದೆ’ ಎಂದು ಸಮಿತಿಯ ರಾಜ್ಯ ಸಂಚಾಲಕ ಲಕ್ಷ್ಮೀನಾರಾಯಣ ನಾಗವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>