<p><strong>ಬೆಂಗಳೂರು:</strong> ‘ಕರ್ಕಶ ಶಬ್ದವನ್ನುಂಟುಮಾಡುವ ಸೈಲೆನ್ಸರ್ಗಳನ್ನುವಾಹನಗಳಲ್ಲಿ ಅಳವಡಿಸಿದರೆ ಹಾಗೂ ದ್ವಿಚಕ್ರ ವಾಹನಗಳಲ್ಲಿ ವ್ಹೀಲಿಂಗ್ ಮಾಡಿದರೆ ಅಂತಹವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು’ ಎಂದು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಎಚ್ಚರಿಕೆ ನೀಡಿದರು.</p>.<p>ರಾಜಾಜಿನಗರ ಸಂಚಾರ ಪೊಲೀಸರು ಶನಿವಾರ ಆಯೋಜಿಸಿದ್ದ ‘ಸಂಚಾರ ಸಂಪರ್ಕ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಸಮಸ್ಯೆ ಹೇಳಿಕೊಂಡ ನಿವಾಸಿ ಗೀತಾ ಮಿಶ್ರಾ, ‘ನಮ್ಮ ಪ್ರದೇಶದಲ್ಲಿ ವಾಹನಗಳ ಸಂಚಾರದಿಂದ ಶಾಂತಿ ಇಲ್ಲದಂತಾಗಿದೆ. ಕೆಲವರು ತಮ್ಮ ವಾಹನಗಳಿಗೆ ಕರ್ಕಶ ಶಬ್ದ ಹೊರಹೊಮ್ಮಿಸು ಸೈಲೆನ್ಸರ್ ಅಳವಡಿಸಿ ಸಂಚರಿಸುತ್ತಿದ್ದಾರೆ. ಇದರಿಂದ ನಿತ್ಯವೂ ಕಿರಿಕಿರಿ ಆಗಿದ್ದು, ವೃದ್ಧರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ’ ಎಂದರು.</p>.<p>ದ್ವಿಚಕ್ರ ವಾಹನಗಳ ವ್ಹೀಲಿಂಗ್ ಬಗ್ಗೆಯೂ ನಿವಾಸಿಗಳು ಅಳಲು ತೋಡಿಕೊಂಡರು.</p>.<p>ಕಮಿಷನರ್ ಕಮಲ್ ಪಂತ್, ‘ಕರ್ಕಶ ಶಬ್ದದ ಸೈಲೆನ್ಸರ್ ಅಳವಡಿಸಿದ ವಾಹನಗಳ ಮಾಲೀಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವುದರ ಜೊತೆಗೆ ಅವರಿಂದ ₹ 1 ಲಕ್ಷ ಮೊತ್ತದ ಬಾಂಡ್ ಪಡೆಯುತ್ತೇವೆ. ಬಾಂಡ್ ನೀಡಿದರೆ ಮಾತ್ರ ಿಂತಹ ವಾಹನ ಬಿಡುಗಡೆಗೆ ಕ್ರಮ ಕೈಗೊಳ್ಳುವಂತೆ ಸೂಚಿಸುತ್ತೇನೆ’ ಎಂದರು.</p>.<p>ಸಂಚಾರ ನಿಯಮಗಳ ಜಾಗೃತಿಯ ಅನಿಮೇಶನ್ ಕಿರುಚಿತ್ರವನ್ನು ಬಿಡುಗಡೆ ಮಾಡಿದರು. ಜಂಟಿ ಕಮಿಷನರ್ ಡಾ. ಬಿ.ಆರ್. ರವಿಕಾಂತೇಗೌಡ ಹಾಗೂ ಡಿಸಿಪಿ ಸೌಮ್ಯಲತಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಕರ್ಕಶ ಶಬ್ದವನ್ನುಂಟುಮಾಡುವ ಸೈಲೆನ್ಸರ್ಗಳನ್ನುವಾಹನಗಳಲ್ಲಿ ಅಳವಡಿಸಿದರೆ ಹಾಗೂ ದ್ವಿಚಕ್ರ ವಾಹನಗಳಲ್ಲಿ ವ್ಹೀಲಿಂಗ್ ಮಾಡಿದರೆ ಅಂತಹವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು’ ಎಂದು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಎಚ್ಚರಿಕೆ ನೀಡಿದರು.</p>.<p>ರಾಜಾಜಿನಗರ ಸಂಚಾರ ಪೊಲೀಸರು ಶನಿವಾರ ಆಯೋಜಿಸಿದ್ದ ‘ಸಂಚಾರ ಸಂಪರ್ಕ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಸಮಸ್ಯೆ ಹೇಳಿಕೊಂಡ ನಿವಾಸಿ ಗೀತಾ ಮಿಶ್ರಾ, ‘ನಮ್ಮ ಪ್ರದೇಶದಲ್ಲಿ ವಾಹನಗಳ ಸಂಚಾರದಿಂದ ಶಾಂತಿ ಇಲ್ಲದಂತಾಗಿದೆ. ಕೆಲವರು ತಮ್ಮ ವಾಹನಗಳಿಗೆ ಕರ್ಕಶ ಶಬ್ದ ಹೊರಹೊಮ್ಮಿಸು ಸೈಲೆನ್ಸರ್ ಅಳವಡಿಸಿ ಸಂಚರಿಸುತ್ತಿದ್ದಾರೆ. ಇದರಿಂದ ನಿತ್ಯವೂ ಕಿರಿಕಿರಿ ಆಗಿದ್ದು, ವೃದ್ಧರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ’ ಎಂದರು.</p>.<p>ದ್ವಿಚಕ್ರ ವಾಹನಗಳ ವ್ಹೀಲಿಂಗ್ ಬಗ್ಗೆಯೂ ನಿವಾಸಿಗಳು ಅಳಲು ತೋಡಿಕೊಂಡರು.</p>.<p>ಕಮಿಷನರ್ ಕಮಲ್ ಪಂತ್, ‘ಕರ್ಕಶ ಶಬ್ದದ ಸೈಲೆನ್ಸರ್ ಅಳವಡಿಸಿದ ವಾಹನಗಳ ಮಾಲೀಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವುದರ ಜೊತೆಗೆ ಅವರಿಂದ ₹ 1 ಲಕ್ಷ ಮೊತ್ತದ ಬಾಂಡ್ ಪಡೆಯುತ್ತೇವೆ. ಬಾಂಡ್ ನೀಡಿದರೆ ಮಾತ್ರ ಿಂತಹ ವಾಹನ ಬಿಡುಗಡೆಗೆ ಕ್ರಮ ಕೈಗೊಳ್ಳುವಂತೆ ಸೂಚಿಸುತ್ತೇನೆ’ ಎಂದರು.</p>.<p>ಸಂಚಾರ ನಿಯಮಗಳ ಜಾಗೃತಿಯ ಅನಿಮೇಶನ್ ಕಿರುಚಿತ್ರವನ್ನು ಬಿಡುಗಡೆ ಮಾಡಿದರು. ಜಂಟಿ ಕಮಿಷನರ್ ಡಾ. ಬಿ.ಆರ್. ರವಿಕಾಂತೇಗೌಡ ಹಾಗೂ ಡಿಸಿಪಿ ಸೌಮ್ಯಲತಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>