<p>ಬೆಂಗಳೂರು: ಮನೆಯಿಂದ ನಾಪತ್ತೆಯಾಗಿದ್ದ ವೃದ್ಧ ನಾರಾಯಣಸ್ವಾಮಿ (60) ಅವರ ಮೃತದೇಹ ಸ್ಯಾಂಕಿ ಕೆರೆಯಲ್ಲಿ ಬುಧವಾರ ಪತ್ತೆಯಾಗಿದ್ದು, ಈ ಬಗ್ಗೆ ಸದಾಶಿವನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಬಸವೇಶ್ವರನಗರ ನಿವಾಸಿ ನಾರಾಯಣಸ್ವಾಮಿ, ಫೆ. 12ರಂದು ಮನೆಯಿಂದ ನಾಪತ್ತೆಯಾಗಿದ್ದರು. ಹಲವೆಡೆ ಹುಡುಕಾಡಿದರೂ ಸುಳಿವು ಸಿಕ್ಕಿರಲಿಲ್ಲ. ನಾಪತ್ತೆ ಬಗ್ಗೆ ಕುಟುಂಬಸ್ಥರು ಬಸವೇಶ್ವರನಗರ ಠಾಣೆಗೆ ದೂರು ನೀಡಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನಾರಾಯಣಸ್ವಾಮಿ, ಜಿಗುಪ್ಸೆಗೊಂಡು ಸ್ಯಾಂಕಿ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನವಿದೆ. ಕೆರೆಯಲ್ಲಿ ಮೃತದೇಹ ನೋಡಿದ್ದ ವಾಯುವಿಹಾರಿಗಳು ಠಾಣೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಹೋಗಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು’ ಎಂದು ತಿಳಿಸಿವೆ.</p>.<p>‘ಆರಂಭದಲ್ಲಿ ಮೃತ ವ್ಯಕ್ತಿ ಹೆಸರು ಗೊತ್ತಾಗಿರಲಿಲ್ಲ. ಫೋಟೊವನ್ನು ನಗರ ಹಾಗೂ ಹೊರ ಜಿಲ್ಲೆಗಳ ಠಾಣೆಗಳಿಗೆ ಕಳುಹಿಸಲಾಗಿತ್ತು. ಬಸವೇಶ್ವರನಗರ ಠಾಣೆ ಪೊಲೀಸರು, ಸಂಬಂಧಿಕರನ್ನು ಕರೆತಂದು ಮೃತದೇಹ ಗುರುತಿಸಿದ್ದಾರೆ’ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಮನೆಯಿಂದ ನಾಪತ್ತೆಯಾಗಿದ್ದ ವೃದ್ಧ ನಾರಾಯಣಸ್ವಾಮಿ (60) ಅವರ ಮೃತದೇಹ ಸ್ಯಾಂಕಿ ಕೆರೆಯಲ್ಲಿ ಬುಧವಾರ ಪತ್ತೆಯಾಗಿದ್ದು, ಈ ಬಗ್ಗೆ ಸದಾಶಿವನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಬಸವೇಶ್ವರನಗರ ನಿವಾಸಿ ನಾರಾಯಣಸ್ವಾಮಿ, ಫೆ. 12ರಂದು ಮನೆಯಿಂದ ನಾಪತ್ತೆಯಾಗಿದ್ದರು. ಹಲವೆಡೆ ಹುಡುಕಾಡಿದರೂ ಸುಳಿವು ಸಿಕ್ಕಿರಲಿಲ್ಲ. ನಾಪತ್ತೆ ಬಗ್ಗೆ ಕುಟುಂಬಸ್ಥರು ಬಸವೇಶ್ವರನಗರ ಠಾಣೆಗೆ ದೂರು ನೀಡಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನಾರಾಯಣಸ್ವಾಮಿ, ಜಿಗುಪ್ಸೆಗೊಂಡು ಸ್ಯಾಂಕಿ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನವಿದೆ. ಕೆರೆಯಲ್ಲಿ ಮೃತದೇಹ ನೋಡಿದ್ದ ವಾಯುವಿಹಾರಿಗಳು ಠಾಣೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಹೋಗಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು’ ಎಂದು ತಿಳಿಸಿವೆ.</p>.<p>‘ಆರಂಭದಲ್ಲಿ ಮೃತ ವ್ಯಕ್ತಿ ಹೆಸರು ಗೊತ್ತಾಗಿರಲಿಲ್ಲ. ಫೋಟೊವನ್ನು ನಗರ ಹಾಗೂ ಹೊರ ಜಿಲ್ಲೆಗಳ ಠಾಣೆಗಳಿಗೆ ಕಳುಹಿಸಲಾಗಿತ್ತು. ಬಸವೇಶ್ವರನಗರ ಠಾಣೆ ಪೊಲೀಸರು, ಸಂಬಂಧಿಕರನ್ನು ಕರೆತಂದು ಮೃತದೇಹ ಗುರುತಿಸಿದ್ದಾರೆ’ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>