<p><strong>ಬೆಂಗಳೂರು:</strong> ‘ನಮ್ಮ ಹಬ್ಬಗಳು ಕನ್ನಡ, ತೆಲುಗು ಸಂಸ್ಕೃತಿ ಹಾಗೂ ಸಂಪ್ರದಾಯಗಳ ಅಡಿಪಾಯ. ಭಿನ್ನ ಹೆಸರುಗಳಿಂದ ದೇಶದೆಲ್ಲೆಡೆ ಆಚರಿಸಲಾಗುವ ರೈತರ ಹಬ್ಬ ಸಂಕ್ರಾಂತಿಯನ್ನು ತೆಲುಗಿನಲ್ಲಿ ಪೆದ್ದಪಂಡಗ ಎನ್ನಲಾಗುತ್ತದೆ’ ಎಂದು ಮಾಜಿ ಸಚಿವೆ ಜಯಮಾಲಾ ಹೇಳಿದರು.</p>.<p>ತೆಲುಗು ವಿಜ್ಞಾನ ಸಮಿತಿಯು ಶ್ರೀಕೃಷ್ಣದೇವರಾಯ ಕಲಾ ಮಂದಿರದಲ್ಲಿ ಆಯೋಜಿಸಿದ್ದ 73ನೇ ಸಂಕ್ರಾಂತಿ ಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಈ ಆಚರಣೆ ನಮ್ಮ ನೆಲಮೂಲ ಸಂಪ್ರದಾಯಗಳ ಸೋಪಾನ. ಶತಮಾನಗಳಿಂದ ಸಾಗಿ ಬಂದಿರುವ ರೈತರ ಹಬ್ಬ, ಜನಪದ ಸಂಸ್ಕೃತಿಯ ಪ್ರತಿಬಿಂಬ’ ಎಂದರು.</p>.<p>‘ಕನ್ನಡ ಮತ್ತು ತೆಲುಗು ಭಾಷೆಗಳೆರಡೂ ಮೂಲ ದ್ರಾವಿಡ ಭಾಷೆಯ ಕುಡಿಗಳು. ಸಂಸ್ಕೃತಿ ಮತ್ತು ಸಂಪ್ರದಾಯಗಳಲ್ಲಿ ಪರಸ್ಪರ ಹೋಲಿಕೆಯಿದ್ದು, ಎರಡೂ ಭಾಷೆಗಳು ಒಂದೇ ನಾಣ್ಯದ ಎರಡು ಮುಖಗಳಂತಿವೆ’ ಎಂದು ಅಭಿಪ್ರಾಯಪಟ್ಟರು.</p>.<p>ತೆಲುಗು ವಿಜ್ಞಾನ ಸಮಿತಿಯ ಅಧ್ಯಕ್ಷ ರಾಧಾಕೃಷ್ಣ ರಾಜು ಮಾತನಾಡಿ, ‘ಏಕತೆಯೇ ನಮ್ಮ ಬಲ. ಸಂಕ್ರಾಂತಿಯು ಅವಿಭಕ್ತ ಕುಟುಂಬಗಳ ಉಳಿವಿಗೆ ಪೂರಕ. ಕನ್ನಡ ಮತ್ತು ತೆಲುಗು ಭಾಷೆಗಳ ಸಂಸ್ಕೃತಿಯ ಆಧಾರಸ್ತಂಭ’ ಎಂದು ತಿಳಿಸಿದರು.</p>.<p>ಇದೇ ವೇಳೆ ಲೇಖಕಿ ರೋಹಿಣಿ ಸತ್ಯ ಅವರಿಗೆ ಸಂಕ್ರಾಂತಿ ಸಾಹಿತ್ಯ ಪ್ರಶಸ್ತಿ ಮತ್ತು ಕಲಾವಿದೆ ಮಾಲತಿ ಸುಧೀರ್ ಅವರಿಗೆ ಸಂಕ್ರಾಂತಿ ಸಂಸ್ಕೃತಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಲೇಖಕಿ ಭವಾನಿ ದೇವಿ ಮತ್ತಿತರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ನಮ್ಮ ಹಬ್ಬಗಳು ಕನ್ನಡ, ತೆಲುಗು ಸಂಸ್ಕೃತಿ ಹಾಗೂ ಸಂಪ್ರದಾಯಗಳ ಅಡಿಪಾಯ. ಭಿನ್ನ ಹೆಸರುಗಳಿಂದ ದೇಶದೆಲ್ಲೆಡೆ ಆಚರಿಸಲಾಗುವ ರೈತರ ಹಬ್ಬ ಸಂಕ್ರಾಂತಿಯನ್ನು ತೆಲುಗಿನಲ್ಲಿ ಪೆದ್ದಪಂಡಗ ಎನ್ನಲಾಗುತ್ತದೆ’ ಎಂದು ಮಾಜಿ ಸಚಿವೆ ಜಯಮಾಲಾ ಹೇಳಿದರು.</p>.<p>ತೆಲುಗು ವಿಜ್ಞಾನ ಸಮಿತಿಯು ಶ್ರೀಕೃಷ್ಣದೇವರಾಯ ಕಲಾ ಮಂದಿರದಲ್ಲಿ ಆಯೋಜಿಸಿದ್ದ 73ನೇ ಸಂಕ್ರಾಂತಿ ಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಈ ಆಚರಣೆ ನಮ್ಮ ನೆಲಮೂಲ ಸಂಪ್ರದಾಯಗಳ ಸೋಪಾನ. ಶತಮಾನಗಳಿಂದ ಸಾಗಿ ಬಂದಿರುವ ರೈತರ ಹಬ್ಬ, ಜನಪದ ಸಂಸ್ಕೃತಿಯ ಪ್ರತಿಬಿಂಬ’ ಎಂದರು.</p>.<p>‘ಕನ್ನಡ ಮತ್ತು ತೆಲುಗು ಭಾಷೆಗಳೆರಡೂ ಮೂಲ ದ್ರಾವಿಡ ಭಾಷೆಯ ಕುಡಿಗಳು. ಸಂಸ್ಕೃತಿ ಮತ್ತು ಸಂಪ್ರದಾಯಗಳಲ್ಲಿ ಪರಸ್ಪರ ಹೋಲಿಕೆಯಿದ್ದು, ಎರಡೂ ಭಾಷೆಗಳು ಒಂದೇ ನಾಣ್ಯದ ಎರಡು ಮುಖಗಳಂತಿವೆ’ ಎಂದು ಅಭಿಪ್ರಾಯಪಟ್ಟರು.</p>.<p>ತೆಲುಗು ವಿಜ್ಞಾನ ಸಮಿತಿಯ ಅಧ್ಯಕ್ಷ ರಾಧಾಕೃಷ್ಣ ರಾಜು ಮಾತನಾಡಿ, ‘ಏಕತೆಯೇ ನಮ್ಮ ಬಲ. ಸಂಕ್ರಾಂತಿಯು ಅವಿಭಕ್ತ ಕುಟುಂಬಗಳ ಉಳಿವಿಗೆ ಪೂರಕ. ಕನ್ನಡ ಮತ್ತು ತೆಲುಗು ಭಾಷೆಗಳ ಸಂಸ್ಕೃತಿಯ ಆಧಾರಸ್ತಂಭ’ ಎಂದು ತಿಳಿಸಿದರು.</p>.<p>ಇದೇ ವೇಳೆ ಲೇಖಕಿ ರೋಹಿಣಿ ಸತ್ಯ ಅವರಿಗೆ ಸಂಕ್ರಾಂತಿ ಸಾಹಿತ್ಯ ಪ್ರಶಸ್ತಿ ಮತ್ತು ಕಲಾವಿದೆ ಮಾಲತಿ ಸುಧೀರ್ ಅವರಿಗೆ ಸಂಕ್ರಾಂತಿ ಸಂಸ್ಕೃತಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಲೇಖಕಿ ಭವಾನಿ ದೇವಿ ಮತ್ತಿತರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>