<p><strong>ಯಲಹಂಕ:</strong> ವಿಜ್ಞಾನ, ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆಯ ಕಾಲದಲ್ಲಿಯೂ ಸಂಸ್ಕೃತ ಭಾಷೆಯು ಹೆಚ್ಚು ಹೆಚ್ಚು ಪ್ರಚಾರದಲ್ಲಿರುವುದು ಈ ಭಾಷೆಯ ಪ್ರಾಮುಖ್ಯ ಹಾಗೂ ಮಹತ್ವವನ್ನು ಖಚಿತಪಡಿಸುತ್ತದೆ ಎಂದು ರಾಮಕೃಷ್ಣ ವಿವೇಕಾನಂದ ವೇದಾಂತ ಆಶ್ರಮದ ಅಭಯಾನಂದ ಸ್ವಾಮೀಜಿ ಅಭಿಪ್ರಾಯಪಟ್ಟರು.</p>.<p>ವಿದ್ಯಾರಣ್ಯಪುರದ ಕಾಳಿಕಾ ದುರ್ಗಾ ಪರಮೇಶ್ವರಿ ದೇವಸ್ಥಾನ ಹಾಗೂ ಸುರವಾಣಿ ಸಂಸ್ಕತ ಫೌಂಡೇಶನ್ ಆಶ್ರಯದಲ್ಲಿ ಎನ್ಟಿಐ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ‘ಸಂಸ್ಕೃತ ಶೋಭಾಯಾತ್ರೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ವಿಜ್ಞಾನಿಗಳು, ತಂತ್ರಜ್ಞರು ಹಾಗೂ ಕೃತಕ ಬುದ್ಧಿಮತ್ತೆಯಲ್ಲಿ ಪಿಎಚ್.ಡಿ ಪಡೆದವರೂ ಸಂಸ್ಕೃತ ಭಾಷೆಯ ಮಹತ್ವವನ್ನು ಗುರುತಿಸಿದ್ದಾರೆ.ಇದು ತಂತ್ರಜ್ಞಾನಕ್ಕೆ ಪೂರಕ, ಪ್ರೇರಕ ಮತ್ತು ಸಹಕಾರಿಯಾಗಿರುವ ಏಕೈಕ ಭಾಷೆಯಾಗಿದೆ ಎಂದರು.</p>.<p>ಬಿಜೆಪಿ ಮುಖಂಡ ಎ.ರವಿ ಮಾತನಾಡಿ, ‘ಪ್ರಾಥಮಿಕ ಹಂತದಲ್ಲಿಯೇ ಮಕ್ಕಳ ಮನಸ್ಸಿನಲ್ಲಿ ಸಂಸ್ಕೃತ ಭಾಷೆಯ ಪ್ರೇಮವನ್ನು ಜಾಗೃತಗೊಳಿಸಬೇಕಾದ ಅಗತ್ಯವಿದೆ. ಈ ದಿಸೆಯಲ್ಲಿ ಈ ವಿಶಿಷ್ಟ ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯ ಕಾರ್ಯ’ ಎಂದರು.</p>.<p>ದೇವಸ್ಥಾನದ ಪ್ರಧಾನ ಅರ್ಚಕ ಆರ್.ವಸಂತಕುಮಾರ್ ಶಾಸ್ತ್ರಿ, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಬಸಪ್ಪ ಡೊಂಕಬಳ್ಳಿ, ಮುಖಂಡರಾದ ವೆಂಕಟಾಚಲಪತಿ, ಎಚ್.ರವೀಂದ್ರ, ಸದಾಶಿವ ಮತ್ತಿತರರು ಉಪಸ್ಥಿತರಿದ್ದರು.</p>.<p><strong>ಶೋಭಾಯಾತ್ರೆ: ಕಾರ್ಯಕ್ರಮಕ್ಕೂ</strong> ಮುನ್ನ ಕಾಳಿಕಾ ದುರ್ಗಾಪರಮೇಶ್ವರಿ ದೇವಿಯ ಮೂರ್ತಿಯೊಂದಿಗೆ ದೇವಸ್ಥಾನದಿಂದ ಆರಂಭವಾದ ಸಂಸ್ಕೃತ ಶೋಭಾಯಾತ್ರೆಯು, ವಿದ್ಯಾರಣ್ಯಪುರದ ಎನ್ಟಿಐ ಕ್ರೀಡಾಂಗಣದವರೆಗೆ ಆಗಮಿಸಿತು. ದೇವ್-ಇನ್ ಅಕಾಡೆಮಿ ಫಾರ್ ಲರ್ನಿಂಗ್ ಶಾಲೆಯ 300ಕ್ಕೂ ಹೆಚ್ಚು ಮಕ್ಕಳು ಹಾಗೂ ಶಿಕ್ಷಕರು ಈ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ:</strong> ವಿಜ್ಞಾನ, ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆಯ ಕಾಲದಲ್ಲಿಯೂ ಸಂಸ್ಕೃತ ಭಾಷೆಯು ಹೆಚ್ಚು ಹೆಚ್ಚು ಪ್ರಚಾರದಲ್ಲಿರುವುದು ಈ ಭಾಷೆಯ ಪ್ರಾಮುಖ್ಯ ಹಾಗೂ ಮಹತ್ವವನ್ನು ಖಚಿತಪಡಿಸುತ್ತದೆ ಎಂದು ರಾಮಕೃಷ್ಣ ವಿವೇಕಾನಂದ ವೇದಾಂತ ಆಶ್ರಮದ ಅಭಯಾನಂದ ಸ್ವಾಮೀಜಿ ಅಭಿಪ್ರಾಯಪಟ್ಟರು.</p>.<p>ವಿದ್ಯಾರಣ್ಯಪುರದ ಕಾಳಿಕಾ ದುರ್ಗಾ ಪರಮೇಶ್ವರಿ ದೇವಸ್ಥಾನ ಹಾಗೂ ಸುರವಾಣಿ ಸಂಸ್ಕತ ಫೌಂಡೇಶನ್ ಆಶ್ರಯದಲ್ಲಿ ಎನ್ಟಿಐ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ‘ಸಂಸ್ಕೃತ ಶೋಭಾಯಾತ್ರೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ವಿಜ್ಞಾನಿಗಳು, ತಂತ್ರಜ್ಞರು ಹಾಗೂ ಕೃತಕ ಬುದ್ಧಿಮತ್ತೆಯಲ್ಲಿ ಪಿಎಚ್.ಡಿ ಪಡೆದವರೂ ಸಂಸ್ಕೃತ ಭಾಷೆಯ ಮಹತ್ವವನ್ನು ಗುರುತಿಸಿದ್ದಾರೆ.ಇದು ತಂತ್ರಜ್ಞಾನಕ್ಕೆ ಪೂರಕ, ಪ್ರೇರಕ ಮತ್ತು ಸಹಕಾರಿಯಾಗಿರುವ ಏಕೈಕ ಭಾಷೆಯಾಗಿದೆ ಎಂದರು.</p>.<p>ಬಿಜೆಪಿ ಮುಖಂಡ ಎ.ರವಿ ಮಾತನಾಡಿ, ‘ಪ್ರಾಥಮಿಕ ಹಂತದಲ್ಲಿಯೇ ಮಕ್ಕಳ ಮನಸ್ಸಿನಲ್ಲಿ ಸಂಸ್ಕೃತ ಭಾಷೆಯ ಪ್ರೇಮವನ್ನು ಜಾಗೃತಗೊಳಿಸಬೇಕಾದ ಅಗತ್ಯವಿದೆ. ಈ ದಿಸೆಯಲ್ಲಿ ಈ ವಿಶಿಷ್ಟ ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯ ಕಾರ್ಯ’ ಎಂದರು.</p>.<p>ದೇವಸ್ಥಾನದ ಪ್ರಧಾನ ಅರ್ಚಕ ಆರ್.ವಸಂತಕುಮಾರ್ ಶಾಸ್ತ್ರಿ, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಬಸಪ್ಪ ಡೊಂಕಬಳ್ಳಿ, ಮುಖಂಡರಾದ ವೆಂಕಟಾಚಲಪತಿ, ಎಚ್.ರವೀಂದ್ರ, ಸದಾಶಿವ ಮತ್ತಿತರರು ಉಪಸ್ಥಿತರಿದ್ದರು.</p>.<p><strong>ಶೋಭಾಯಾತ್ರೆ: ಕಾರ್ಯಕ್ರಮಕ್ಕೂ</strong> ಮುನ್ನ ಕಾಳಿಕಾ ದುರ್ಗಾಪರಮೇಶ್ವರಿ ದೇವಿಯ ಮೂರ್ತಿಯೊಂದಿಗೆ ದೇವಸ್ಥಾನದಿಂದ ಆರಂಭವಾದ ಸಂಸ್ಕೃತ ಶೋಭಾಯಾತ್ರೆಯು, ವಿದ್ಯಾರಣ್ಯಪುರದ ಎನ್ಟಿಐ ಕ್ರೀಡಾಂಗಣದವರೆಗೆ ಆಗಮಿಸಿತು. ದೇವ್-ಇನ್ ಅಕಾಡೆಮಿ ಫಾರ್ ಲರ್ನಿಂಗ್ ಶಾಲೆಯ 300ಕ್ಕೂ ಹೆಚ್ಚು ಮಕ್ಕಳು ಹಾಗೂ ಶಿಕ್ಷಕರು ಈ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>