ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯ ಘಟಕದ ಅಧ್ಯಕ್ಷ ಎ.ಆರ್. ಹನುಮಂತ ನಾಯ್ಕ, ‘ಲಂಬಾಣಿ ಸಂಸ್ಕೃತಿಯ ಬಗ್ಗೆ ಅರಿವಿಲ್ಲದೇ ಬಹಳಷ್ಟು ಜನ ಬೇರೆ ಬೇರೆ ಧರ್ಮಗಳಿಗೆ ಮತಾಂತರ ಆಗುತ್ತಿದ್ದಾರೆ. ಇದನ್ನು ನಿಯಂತ್ರಿಸುವ ಬಗ್ಗೆ ಸಮುದಾಯದಲ್ಲಿ ಜಾಗೃತಿ ಮೂಡಿಸಲಾಗುವುದು. ಇದೇ ಸಂದರ್ಭದಲ್ಲಿ ರಾಷ್ಟ್ರಮಟ್ಟದಲ್ಲಿ ವಧುವರಾನ್ವೇಷಣೆ ಸಮಾವೇಶ ನಡೆಯಲಿದೆ’ ಎಂದರು.