<p><strong>ಬೆಂಗಳೂರು:</strong> ಗೋವಿಂದರಾಜನಗರ ಕ್ಷೇತ್ರದಲ್ಲಿ ಸರಸ್ವತಿನಗರ ಪೊಲೀಸ್ ಠಾಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಉದ್ಘಾಟಿಸಿದರು. ವಿಶೇಷ ಪೂಜೆಯನ್ನೂ ನೆರವೇರಿಸಿದರು.</p>.<p>ನಗರದ 111ನೇ ಕಾನೂನು ಸುವ್ಯವಸ್ಥೆ ಪೊಲೀಸ್ ಠಾಣೆ ಇದಾಗಿದ್ದು, ಪಶ್ಚಿಮ ವಿಭಾಗ ವ್ಯಾಪ್ತಿಯಲ್ಲಿದೆ. ಇನ್ಸ್ಪೆಕ್ಟರ್ ನೇತೃತ್ವದಲ್ಲಿ ಪಿಎಸ್ಐಗಳು ಹಾಗೂ ಸಿಬ್ಬಂದಿ ಕೆಲಸ ಆರಂಭಿಸಿದ್ದಾರೆ.</p>.<p>ಬಸವರಾಜ ಬೊಮ್ಮಾಯಿ, ‘ಸರಸ್ವತಿನಗರ ಠಾಣೆ ಆರಂಭಕ್ಕೆ ಗೃಹ ಸಚಿವನಾಗಿದ್ದಾಗ ಅನುಮತಿ ನೀಡಿದ್ದೆ. ಇದೀಗ ಅದೇ ಠಾಣೆಯನ್ನು ನಾನು ಉದ್ಘಾಟಿಸುತ್ತಿದ್ದೇನೆ’ ಎಂದರು.</p>.<p>ಗೃಹ ಸಚಿವ ಆರಗ ಜ್ಞಾನೇಂದ್ರ, 'ಸರಸ್ವತಿನಗರ ಠಾಣೆಯಲ್ಲಿ ಎಲ್ಲ ಸೌಲಭ್ಯ ಕಲ್ಪಿಸಲಾಗಿದೆ. ಮುಂದಿನ ದಿನಗಳಲ್ಲಿ ₹ 200 ಕೋಟಿ ವೆಚ್ಚದಲ್ಲಿ 100 ಪೋಲಿಸ್ ಠಾಣೆ ಕಟ್ಟಡಗಳನ್ನು ನಿರ್ಮಿಸುವ ಗುರಿ ಇದೆ’ ಎಂದರು.</p>.<p>ಸಚಿವ ಆರ್. ಅಶೋಕ, ಸಂಸದ ತೇಜಸ್ವಿ ಸೂರ್ಯ, ಶಾಸಕ ವಿ. ಸೋಮಣ್ಣ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ಕಮಿಷನರ್ ಕಮಲ್ ಪಂತ್ ಹಾಗೂ ಇತರರು ಇದ್ದರು.</p>.<p><strong>‘ರಾತ್ರೋರಾತ್ರಿ ಡಾಂಬರೀಕರಣ’</strong></p>.<p>‘ಸರಸ್ವತಿನಗರ ಠಾಣೆಗೆ ಸಂಪರ್ಕ ಕಲ್ಪಿಸುವ ರಸ್ತೆ ಹಾಳಾಗಿ, ಗುಂಡಿಗಳು ಬಿದ್ದಿದ್ದವು. ವಾಹನ ಸವಾರರು ನಿತ್ಯವೂ ಭಯದಲ್ಲಿ ಸಂಚರಿಸುತ್ತಿದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬರುವ ಸೂಚನೆ ಸಿಗುತ್ತಿದ್ದಂತೆ ಗುರುವಾರ ರಾತ್ರಿಯೇ ರಸ್ತೆಯನ್ನು ಸಂಪೂರ್ಣ ಡಾಂಬರೀಕರಣ ಮಾಡಲಾಗಿದೆ’ ಎಂದು ಸ್ಥಳೀಯ ನಿವಾಸಿಗಳು ಹೇಳಿದರು.</p>.<p>‘ರಸ್ತೆ ದುರಸ್ತಿ ಮಾಡುವಂತೆ ಹಲವು ಬಾರಿ ಮನವಿ ಸಲ್ಲಿಸಲಾಗಿತ್ತು. ಮುಖ್ಯಮಂತ್ರಿ ಬಂದಿದ್ದರಿಂದ ಸುಸಜ್ಜಿತ ರಸ್ತೆ ಆಗಿದೆ. ಇದು ಮುಖ್ಯಮಂತ್ರಿಯವರನ್ನೇ ದಿಕ್ಕು ತಪ್ಪಿಸುವ ಯತ್ನ’ ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಗೋವಿಂದರಾಜನಗರ ಕ್ಷೇತ್ರದಲ್ಲಿ ಸರಸ್ವತಿನಗರ ಪೊಲೀಸ್ ಠಾಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಉದ್ಘಾಟಿಸಿದರು. ವಿಶೇಷ ಪೂಜೆಯನ್ನೂ ನೆರವೇರಿಸಿದರು.</p>.<p>ನಗರದ 111ನೇ ಕಾನೂನು ಸುವ್ಯವಸ್ಥೆ ಪೊಲೀಸ್ ಠಾಣೆ ಇದಾಗಿದ್ದು, ಪಶ್ಚಿಮ ವಿಭಾಗ ವ್ಯಾಪ್ತಿಯಲ್ಲಿದೆ. ಇನ್ಸ್ಪೆಕ್ಟರ್ ನೇತೃತ್ವದಲ್ಲಿ ಪಿಎಸ್ಐಗಳು ಹಾಗೂ ಸಿಬ್ಬಂದಿ ಕೆಲಸ ಆರಂಭಿಸಿದ್ದಾರೆ.</p>.<p>ಬಸವರಾಜ ಬೊಮ್ಮಾಯಿ, ‘ಸರಸ್ವತಿನಗರ ಠಾಣೆ ಆರಂಭಕ್ಕೆ ಗೃಹ ಸಚಿವನಾಗಿದ್ದಾಗ ಅನುಮತಿ ನೀಡಿದ್ದೆ. ಇದೀಗ ಅದೇ ಠಾಣೆಯನ್ನು ನಾನು ಉದ್ಘಾಟಿಸುತ್ತಿದ್ದೇನೆ’ ಎಂದರು.</p>.<p>ಗೃಹ ಸಚಿವ ಆರಗ ಜ್ಞಾನೇಂದ್ರ, 'ಸರಸ್ವತಿನಗರ ಠಾಣೆಯಲ್ಲಿ ಎಲ್ಲ ಸೌಲಭ್ಯ ಕಲ್ಪಿಸಲಾಗಿದೆ. ಮುಂದಿನ ದಿನಗಳಲ್ಲಿ ₹ 200 ಕೋಟಿ ವೆಚ್ಚದಲ್ಲಿ 100 ಪೋಲಿಸ್ ಠಾಣೆ ಕಟ್ಟಡಗಳನ್ನು ನಿರ್ಮಿಸುವ ಗುರಿ ಇದೆ’ ಎಂದರು.</p>.<p>ಸಚಿವ ಆರ್. ಅಶೋಕ, ಸಂಸದ ತೇಜಸ್ವಿ ಸೂರ್ಯ, ಶಾಸಕ ವಿ. ಸೋಮಣ್ಣ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ಕಮಿಷನರ್ ಕಮಲ್ ಪಂತ್ ಹಾಗೂ ಇತರರು ಇದ್ದರು.</p>.<p><strong>‘ರಾತ್ರೋರಾತ್ರಿ ಡಾಂಬರೀಕರಣ’</strong></p>.<p>‘ಸರಸ್ವತಿನಗರ ಠಾಣೆಗೆ ಸಂಪರ್ಕ ಕಲ್ಪಿಸುವ ರಸ್ತೆ ಹಾಳಾಗಿ, ಗುಂಡಿಗಳು ಬಿದ್ದಿದ್ದವು. ವಾಹನ ಸವಾರರು ನಿತ್ಯವೂ ಭಯದಲ್ಲಿ ಸಂಚರಿಸುತ್ತಿದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬರುವ ಸೂಚನೆ ಸಿಗುತ್ತಿದ್ದಂತೆ ಗುರುವಾರ ರಾತ್ರಿಯೇ ರಸ್ತೆಯನ್ನು ಸಂಪೂರ್ಣ ಡಾಂಬರೀಕರಣ ಮಾಡಲಾಗಿದೆ’ ಎಂದು ಸ್ಥಳೀಯ ನಿವಾಸಿಗಳು ಹೇಳಿದರು.</p>.<p>‘ರಸ್ತೆ ದುರಸ್ತಿ ಮಾಡುವಂತೆ ಹಲವು ಬಾರಿ ಮನವಿ ಸಲ್ಲಿಸಲಾಗಿತ್ತು. ಮುಖ್ಯಮಂತ್ರಿ ಬಂದಿದ್ದರಿಂದ ಸುಸಜ್ಜಿತ ರಸ್ತೆ ಆಗಿದೆ. ಇದು ಮುಖ್ಯಮಂತ್ರಿಯವರನ್ನೇ ದಿಕ್ಕು ತಪ್ಪಿಸುವ ಯತ್ನ’ ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>