ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕನ್ನಡ ಗೆಳೆಯರ ಬಳಗದ ಸಂಚಾಲಕ ರಾ.ನಂ. ಚಂದ್ರಶೇಖರ, ‘ಪರಿಷ್ಕೃತ ಸರೋಜಿನಿ ಮಹಿಷಿ ವರದಿಯನ್ನು ಸದನದಲ್ಲಿ ಮಂಡಿಸಿ ಒಪ್ಪಿಗೆ ಪಡೆದರೆ, ಕೇಂದ್ರ ಅನುಷ್ಠಾನಗೊಳಿಸಬೇಕಾದ ಅಂಶಗಳನ್ನು ಅನುಷ್ಠಾನಗೊಳಿಸುವಂತೆ ಆಗ್ರಹಿಸಲು ರಾಜ್ಯ ಸರ್ಕಾರಕ್ಕೆ ನೈತಿಕ ಶಕ್ತಿ ಬರುತ್ತದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರ 2008ರಿಂದ ಸ್ಥಳೀಯರಿಗೆ ಉದ್ಯೋಗ ರಾಷ್ಟ್ರೀಯ ನೀತಿಯಾಗಲಿ ಎಂದು ಪ್ರತಿಪಾದಿಸುತ್ತಿದೆ. ಆ ನಿಟ್ಟಿನಲ್ಲಿ ಏನೂ ಪ್ರಯೋಜನವಾಗಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.