<p><strong>ಬೆಂಗಳೂರು</strong>: ‘ರಾಜ್ಯೋತ್ಸವ ಪ್ರಶಸ್ತಿಯ ಮಾನದಂಡದ ಪ್ರಕಾರ ಸಾಧಕರ ವಯೋಮಿತಿ 60 ವರ್ಷ ಮೇಲ್ಪಟ್ಟಿರಬೇಕು. ಈಗ ವಯೋಮಿತಿಯ ಮಾನದಂಡವನ್ನೂ ಪೂರ್ಣಗೊಳಿಸಿರುವ ಲಯ ಸಾಧಕ ಸತೀಶ್ ಹಂಪಿಹೊಳಿ ಅವರನ್ನು ಈ ವರ್ಷದ ರಾಜ್ಯೋತ್ಸವ ಪ್ರಶಸ್ತಿಗೆ ಪರಿಗಣಿಸಬೇಕು’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಮನು ಬಳಿಗಾರ್ ಅವರು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು. </p>.<p>ತಬಲಾ ವಾದಕ ಸತೀಶ್ ಹಂಪಿಹೊಳಿ ಅವರು 60 ವರ್ಷಗಳನ್ನು ಪೂರ್ಣಗೊಳಿಸಿದ ಪ್ರಯುಕ್ತ ಪಂಡಿತ್ ಸತೀಶ್ ಹಂಪಿಹೊಳಿ ಅಭಿನಂದನಾ ಸಮಿತಿ ನಗರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ‘ಲಯ ಸಾಧಕ’ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾತನಾಡಿದರು. </p>.<p>‘ಸಂಗೀತ ಕ್ಷೇತ್ರದಲ್ಲಿ 40 ವರ್ಷಗಳಿಂದ ರಂಜಿಸುತ್ತಿರುವ ಸತೀಶ್ ಹಂಪಿಹೊಳಿ ಅವರು, ಅಪಾರ ಶಿಷ್ಯ ಬಳಗವನ್ನು ಈ ನಾಡಿಗೆ ಕೊಡುಗೆಯಾಗಿ ನೀಡಿದ್ದಾರೆ. ಸಂಗೀತದಲ್ಲಿ ಅಗಾಧ ಪಾಂಡಿತ್ಯ, ವಿದ್ವತ್ತು ಹೊಂದಿರುವ ಅವರು, ಕರ್ನಾಟಕದ ಹೆಮ್ಮೆಯಾಗಿದ್ದಾರೆ. ಅವರ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರ ಈ ವರ್ಷ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಬೇಕು. ಕೇಂದ್ರ ಸರ್ಕಾರ ಕೊಡಮಾಡುವ ‘ಪದ್ಮಶ್ರೀ ಪ್ರಶಸ್ತಿ’ಗೂ ಅವರು ಅರ್ಹರಾಗಿದ್ದಾರೆ’ ಎಂದು ಹೇಳಿದರು.</p>.<p>ಜಿ.ಆರ್. ಶಿಕ್ಷಣ ಸಂಸ್ಥೆಯ ಸಂಸ್ಥಾಪನಾ ನಿರ್ದೇಶಕಿ ಗೀತಾ ರಾಮಾನುಜಂ, ‘ಸತೀಶ್ ಹಂಪಿಹೊಳಿ ಅವರು ಬದುಕಿನ ಹಲವು ಏಳು-ಬೀಳುಗಳನ್ನು ಗಟ್ಟಿಯಾಗಿ ಎದುರಿಸಿ, ಅಗಾಧವಾದ ಸಾಧನೆ ಮಾಡಿದ್ದಾರೆ. ಅವರ ಬದುಕು ಸಮಾಜಕ್ಕೆ ದೊಡ್ಡ ಸಂದೇಶ. ಸಂಗೀತದಲ್ಲಿ ಅವರ ಮಾರ್ಗದರ್ಶನ ಪಡೆಯುತ್ತಿರುವ ಪ್ರತಿಯೊಬ್ಬರೂ ಅವರ ಹಾದಿಯನ್ನು ಅನುಸರಿಸಬೇಕು’ ಎಂದರು.</p>.<p>ನಿವೃತ್ತ ಲೋಕಾಯುಕ್ತ, ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ, ‘ಒಳ್ಳೆಯ ಕೆಲಸ ಮಾಡಿದವರನ್ನು ಸನ್ಮಾನಿಸುವುದು ಸಮಾಜದ ಕರ್ತವ್ಯ’ ಎಂದು ಹೇಳಿದರು. </p>.<p>ಅಭಿನಂದನಾ ನುಡಿಗಳನ್ನಾಡಿದ ಕಲಾವಿದ ಶ್ರೀನಿವಾಸ ಪ್ರಭು, ‘ಸತೀಶ್ ಹಂಪಿಹೊಳಿ ಅವರು ಲಯ ವಾದ್ಯದಲ್ಲಿ ನೂರಾರು ನಡೆಗಳನ್ನು ಸುಲಲಿತವಾಗಿ ನುಡಿಸಿ, ಬೆರಗುಗೊಳಿಸುತ್ತಾರೆ. ವೃತ್ತಿ ಜೀವನದಲ್ಲಿ ಸದ್ದುಗದ್ದಲವಿಲ್ಲದೆ ತಮ್ಮಷ್ಟಕ್ಕೆ ತಾವು ಸಾಂಸ್ಕೃತಿಕ ಕ್ಷೇತ್ರದಲ್ಲಿ ಪ್ರೀತಿಯಿಂದ ತೊಡಗಿಕೊಂಡು, ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. </p>.<p>ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಗೌರವ ಪ್ರಧಾನ ಕಾರ್ಯದರ್ಶಿ ವೂಡೇ ಪಿ. ಕೃಷ್ಣ, ವಿಜಯ ಕರ್ನಾಟಕ ಸಂಪಾದಕ ಸುದರ್ಶನ್ ಚನ್ನಂಗಿಹಳ್ಳಿ, ವಿಜಯವಾಣಿ ಸಂಪಾದಕ ಕೆ.ಎನ್. ಚನ್ನೇಗೌಡ, ಕಾರ್ತಿಕ್ ಫೌಂಡೇಷನ್ ಕಾರ್ಯದರ್ಶಿ ರೇಖಾ ಕೆ. ಗೋವಿಂದ್ ಹಾಗೂ ಹಿಂದೂಸ್ಥಾನಿ ಗಾಯಕ ಮೃತ್ಯುಂಜಯ ಶೆಟ್ಟರ್ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ರಾಜ್ಯೋತ್ಸವ ಪ್ರಶಸ್ತಿಯ ಮಾನದಂಡದ ಪ್ರಕಾರ ಸಾಧಕರ ವಯೋಮಿತಿ 60 ವರ್ಷ ಮೇಲ್ಪಟ್ಟಿರಬೇಕು. ಈಗ ವಯೋಮಿತಿಯ ಮಾನದಂಡವನ್ನೂ ಪೂರ್ಣಗೊಳಿಸಿರುವ ಲಯ ಸಾಧಕ ಸತೀಶ್ ಹಂಪಿಹೊಳಿ ಅವರನ್ನು ಈ ವರ್ಷದ ರಾಜ್ಯೋತ್ಸವ ಪ್ರಶಸ್ತಿಗೆ ಪರಿಗಣಿಸಬೇಕು’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಮನು ಬಳಿಗಾರ್ ಅವರು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು. </p>.<p>ತಬಲಾ ವಾದಕ ಸತೀಶ್ ಹಂಪಿಹೊಳಿ ಅವರು 60 ವರ್ಷಗಳನ್ನು ಪೂರ್ಣಗೊಳಿಸಿದ ಪ್ರಯುಕ್ತ ಪಂಡಿತ್ ಸತೀಶ್ ಹಂಪಿಹೊಳಿ ಅಭಿನಂದನಾ ಸಮಿತಿ ನಗರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ‘ಲಯ ಸಾಧಕ’ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾತನಾಡಿದರು. </p>.<p>‘ಸಂಗೀತ ಕ್ಷೇತ್ರದಲ್ಲಿ 40 ವರ್ಷಗಳಿಂದ ರಂಜಿಸುತ್ತಿರುವ ಸತೀಶ್ ಹಂಪಿಹೊಳಿ ಅವರು, ಅಪಾರ ಶಿಷ್ಯ ಬಳಗವನ್ನು ಈ ನಾಡಿಗೆ ಕೊಡುಗೆಯಾಗಿ ನೀಡಿದ್ದಾರೆ. ಸಂಗೀತದಲ್ಲಿ ಅಗಾಧ ಪಾಂಡಿತ್ಯ, ವಿದ್ವತ್ತು ಹೊಂದಿರುವ ಅವರು, ಕರ್ನಾಟಕದ ಹೆಮ್ಮೆಯಾಗಿದ್ದಾರೆ. ಅವರ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರ ಈ ವರ್ಷ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಬೇಕು. ಕೇಂದ್ರ ಸರ್ಕಾರ ಕೊಡಮಾಡುವ ‘ಪದ್ಮಶ್ರೀ ಪ್ರಶಸ್ತಿ’ಗೂ ಅವರು ಅರ್ಹರಾಗಿದ್ದಾರೆ’ ಎಂದು ಹೇಳಿದರು.</p>.<p>ಜಿ.ಆರ್. ಶಿಕ್ಷಣ ಸಂಸ್ಥೆಯ ಸಂಸ್ಥಾಪನಾ ನಿರ್ದೇಶಕಿ ಗೀತಾ ರಾಮಾನುಜಂ, ‘ಸತೀಶ್ ಹಂಪಿಹೊಳಿ ಅವರು ಬದುಕಿನ ಹಲವು ಏಳು-ಬೀಳುಗಳನ್ನು ಗಟ್ಟಿಯಾಗಿ ಎದುರಿಸಿ, ಅಗಾಧವಾದ ಸಾಧನೆ ಮಾಡಿದ್ದಾರೆ. ಅವರ ಬದುಕು ಸಮಾಜಕ್ಕೆ ದೊಡ್ಡ ಸಂದೇಶ. ಸಂಗೀತದಲ್ಲಿ ಅವರ ಮಾರ್ಗದರ್ಶನ ಪಡೆಯುತ್ತಿರುವ ಪ್ರತಿಯೊಬ್ಬರೂ ಅವರ ಹಾದಿಯನ್ನು ಅನುಸರಿಸಬೇಕು’ ಎಂದರು.</p>.<p>ನಿವೃತ್ತ ಲೋಕಾಯುಕ್ತ, ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ, ‘ಒಳ್ಳೆಯ ಕೆಲಸ ಮಾಡಿದವರನ್ನು ಸನ್ಮಾನಿಸುವುದು ಸಮಾಜದ ಕರ್ತವ್ಯ’ ಎಂದು ಹೇಳಿದರು. </p>.<p>ಅಭಿನಂದನಾ ನುಡಿಗಳನ್ನಾಡಿದ ಕಲಾವಿದ ಶ್ರೀನಿವಾಸ ಪ್ರಭು, ‘ಸತೀಶ್ ಹಂಪಿಹೊಳಿ ಅವರು ಲಯ ವಾದ್ಯದಲ್ಲಿ ನೂರಾರು ನಡೆಗಳನ್ನು ಸುಲಲಿತವಾಗಿ ನುಡಿಸಿ, ಬೆರಗುಗೊಳಿಸುತ್ತಾರೆ. ವೃತ್ತಿ ಜೀವನದಲ್ಲಿ ಸದ್ದುಗದ್ದಲವಿಲ್ಲದೆ ತಮ್ಮಷ್ಟಕ್ಕೆ ತಾವು ಸಾಂಸ್ಕೃತಿಕ ಕ್ಷೇತ್ರದಲ್ಲಿ ಪ್ರೀತಿಯಿಂದ ತೊಡಗಿಕೊಂಡು, ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. </p>.<p>ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಗೌರವ ಪ್ರಧಾನ ಕಾರ್ಯದರ್ಶಿ ವೂಡೇ ಪಿ. ಕೃಷ್ಣ, ವಿಜಯ ಕರ್ನಾಟಕ ಸಂಪಾದಕ ಸುದರ್ಶನ್ ಚನ್ನಂಗಿಹಳ್ಳಿ, ವಿಜಯವಾಣಿ ಸಂಪಾದಕ ಕೆ.ಎನ್. ಚನ್ನೇಗೌಡ, ಕಾರ್ತಿಕ್ ಫೌಂಡೇಷನ್ ಕಾರ್ಯದರ್ಶಿ ರೇಖಾ ಕೆ. ಗೋವಿಂದ್ ಹಾಗೂ ಹಿಂದೂಸ್ಥಾನಿ ಗಾಯಕ ಮೃತ್ಯುಂಜಯ ಶೆಟ್ಟರ್ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>