‘ಹಿಂದೂ ಪದಕ್ಕೆ ಕೆಟ್ಟ ಅರ್ಥವಿದೆ’ ಎಂದಿರುವ ಹೇಳಿರುವ ಸತೀಶ ಜಾರಕಿಹೊಳಿ, ಧಾರ್ಮಿಕ ವೈಷಮ್ಯಕ್ಕೆ ಪ್ರಚೋದನೆ ನೀಡಿದ್ದಾರೆ. ಸನಾತನ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ, ಜನರ ನಂಬಿಕೆಗಳಿಗೆ ಧಕ್ಕೆ ತಂದಿದ್ದಾರೆ. ಸತೀಶ ಅವರು ಕೂಡಲೇ ಕ್ಷಮೆ ಕೇಳಬೇಕು. ಇವರ ವಿರುದ್ಧ ಪ್ರಕರಣ ದಾಖಲಿಸಿ, ಜೈಲಿಗೆ ಕಳುಹಿಸಬೇಕು’ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.