‘ಸಾವರ್ಕರ್ ಅವರು ಸ್ವಾತಂತ್ರ್ಯ ಹೋರಾಟದ ಜತೆಗೆ ಸಮಾಜ ಸುಧಾರಣೆ, ಬರಹ ಸೇರಿದಂತೆ ವಿವಿಧ ಚಟುವಟಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಸಂಪೂರ್ಣ ಸ್ವಾತಂತ್ರ್ಯ ಪಡೆಯುವುದೇ ನಮ್ಮ ಹೋರಾಟದ ಗುರಿಯೆಂದು ಮೊದಲು ಘೋಷಿಸಿದವರು ಸಾವರ್ಕರ್. ಆದರೆ, ಅಸೂಯೆ, ದ್ವೇಷ, ರಾಜಕೀಯ ಲಾಭಕ್ಕಾಗಿ ಅವರ ವಿರುದ್ಧ ಸುಳ್ಳು ಪ್ರಚಾರ ನಡೆಸಿ, ಅವರ ಬಲಿದಾನ ಮತ್ತು ಹೋರಾಟವನ್ನು ಮರೆಮಾಚಲಾಯಿತು. ಇತ್ತೀಚಿನ ದಿನಗಳಲ್ಲಿ ಅವರ ಬಗ್ಗೆ ತಿಳಿದುಕೊಳ್ಳುವ ಆಸಕ್ತಿ ಜನರಲ್ಲಿ ಹೆಚ್ಚಲಾರಂಭಿಸಿದೆ. ಇದರಿಂದ ಸತ್ಯಸಂಗತಿಗಳು ಅನಾವರಣಗೊಳ್ಳುತ್ತಿವೆ’ ಎಂದು ತಿಳಿಸಿದರು.