ಮಂಥನ ಬೆಂಗಳೂರು, ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ‘ಸಮಗ್ರ ಸಾವರ್ಕರ್’ ವಿಚಾರಸಂಕಿರಣದಲ್ಲಿ ಅವರು ಮಾತನಾಡಿದರು. ‘ಧರ್ಮ ರಕ್ಷಣೆಗೆ ಹಿಂದೂ ಧರ್ಮದಲ್ಲಿ ಅಂತರ್ಗತವಾದ ಸ್ವಭಾವ ಜ್ಞಾನ ಮತ್ತು ಕ್ಷಾತ್ರ. ಅನ್ಯ ಧರ್ಮಗಳು ಹಿಂದೂ ಧರ್ಮದ ಅಸ್ತಿತ್ವವನ್ನೇ ಅಳಿಸಲು ಪ್ರಯತ್ನಿಸಿದ ಕಾಲಘಟ್ಟದಲ್ಲಿ ಸಾವರ್ಕರ್ ಧರ್ಮ ರಕ್ಷಿಸಲು ಶ್ರಮಿಸಿದರು. ಇದರಿಂದಾಗಿ ಸಾವರ್ಕರ್ ಇತರ ಧರ್ಮೀಯರ ಕೆಂಗಣ್ಣಿಗೆ ಗುರಿಯಾಗಿದ್ದರು. ಅವರ ಚಿಂತನೆಗಳನ್ನು ನಿರ್ಮೂಲನೆ ಮಾಡುವ ಎಲ್ಲ ರೀತಿಯ ಪ್ರಯತ್ನಗಳೂ ನಡೆದಿದ್ದವು’ ಎಂದರು.