<p>ಬೆಂಗಳೂರು: ವಿದ್ಯಾಗಮ ಕಾರ್ಯಕ್ರಮದಡಿ ಕೆಲಸ ಮಾಡುತ್ತಿದ್ದ ವೇಳೆ ಸೋಂಕಿತರಾಗಿ ಸಾವಿಗೀಡಾದ ಶಿಕ್ಷಕರಿಗೆ ಸರ್ಕಾರ ಪರಿಹಾರ ಘೋಷಿಸಬೇಕು. ಸೋಂಕಿತರಾಗಿ ಚಿಕಿತ್ಸೆ ಪಡೆಯುತ್ತಿರುವವರ ವೈದ್ಯಕೀಯ ವೆಚ್ಚವನ್ನು ಸರ್ಕಾರವೇ ಭರಿಸಬೇಕು ಎಂದುಅಖಿಲಭಾರತ ಶಿಕ್ಷಣ ಉಳಿಸಿ ಸಮಿತಿ ಒತ್ತಾಯಿಸಿದೆ.</p>.<p>ಸೋಂಕಿತ ಶಿಕ್ಷಕರು ಸಂಪೂರ್ಣ ಗುಣಮುಖವಾಗುವವರೆಗೂ ಸಂಬಳ ಸಹಿತ ರಜೆ ನೀಡಬೇಕು ಎಂದು ಸಮಿತಿ ಅಧ್ಯಕ್ಷ ಅಲ್ಲಮಪ್ರಭು ಬೆಟ್ಟದೂರು ಆಗ್ರಹಿಸಿದ್ದಾರೆ.</p>.<p>‘ಎಲ್ಲ ಅತಿಥಿ ಶಿಕ್ಷಕರು ಅಥವಾ ಉಪನ್ಯಾಸಕರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಕರ್ತವ್ಯದಲ್ಲಿದ್ದಾರೆಂದು ಪರಿಗಣಿಸಿ ಅವರೆಲ್ಲರಿಗೂ ಸರ್ಕಾರ ಜೂನ್ನಿಂದ ಶಾಲಾ ಕಾಲೇಜುಗಳು ಆರಂಭವಾಗುವವರೆಗೂಸಂಬಳ ನೀಡಬೇಕು. ಖಾಸಗಿ ಶಾಲಾ–ಕಾಲೇಜುಗಳ ಸಿಬ್ಬಂದಿಗೂ ಸಂಬಳ ನೀಡುವಂತೆಖಾಸಗಿ ಆಡಳಿತ ಮಂಡಳಿಗಳಿಗೆ ನಿರ್ದೇಶನ ನೀಡಬೇಕು.ಇದನ್ನು ಉಲ್ಲಂಘಿಸುವ ಸಂಸ್ಥೆಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಸಮಿತಿ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ವಿದ್ಯಾಗಮ ಕಾರ್ಯಕ್ರಮದಡಿ ಕೆಲಸ ಮಾಡುತ್ತಿದ್ದ ವೇಳೆ ಸೋಂಕಿತರಾಗಿ ಸಾವಿಗೀಡಾದ ಶಿಕ್ಷಕರಿಗೆ ಸರ್ಕಾರ ಪರಿಹಾರ ಘೋಷಿಸಬೇಕು. ಸೋಂಕಿತರಾಗಿ ಚಿಕಿತ್ಸೆ ಪಡೆಯುತ್ತಿರುವವರ ವೈದ್ಯಕೀಯ ವೆಚ್ಚವನ್ನು ಸರ್ಕಾರವೇ ಭರಿಸಬೇಕು ಎಂದುಅಖಿಲಭಾರತ ಶಿಕ್ಷಣ ಉಳಿಸಿ ಸಮಿತಿ ಒತ್ತಾಯಿಸಿದೆ.</p>.<p>ಸೋಂಕಿತ ಶಿಕ್ಷಕರು ಸಂಪೂರ್ಣ ಗುಣಮುಖವಾಗುವವರೆಗೂ ಸಂಬಳ ಸಹಿತ ರಜೆ ನೀಡಬೇಕು ಎಂದು ಸಮಿತಿ ಅಧ್ಯಕ್ಷ ಅಲ್ಲಮಪ್ರಭು ಬೆಟ್ಟದೂರು ಆಗ್ರಹಿಸಿದ್ದಾರೆ.</p>.<p>‘ಎಲ್ಲ ಅತಿಥಿ ಶಿಕ್ಷಕರು ಅಥವಾ ಉಪನ್ಯಾಸಕರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಕರ್ತವ್ಯದಲ್ಲಿದ್ದಾರೆಂದು ಪರಿಗಣಿಸಿ ಅವರೆಲ್ಲರಿಗೂ ಸರ್ಕಾರ ಜೂನ್ನಿಂದ ಶಾಲಾ ಕಾಲೇಜುಗಳು ಆರಂಭವಾಗುವವರೆಗೂಸಂಬಳ ನೀಡಬೇಕು. ಖಾಸಗಿ ಶಾಲಾ–ಕಾಲೇಜುಗಳ ಸಿಬ್ಬಂದಿಗೂ ಸಂಬಳ ನೀಡುವಂತೆಖಾಸಗಿ ಆಡಳಿತ ಮಂಡಳಿಗಳಿಗೆ ನಿರ್ದೇಶನ ನೀಡಬೇಕು.ಇದನ್ನು ಉಲ್ಲಂಘಿಸುವ ಸಂಸ್ಥೆಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಸಮಿತಿ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>