ಶಾಸಕ ಎಸ್.ಆರ್. ವಿಶ್ವನಾಥ್ ಮಾತನಾಡಿ, ‘ಸವಿತಾ ಸಮುದಾಯ, ಮಡಿವಾಳ ಜನಾಂಗ ಸೇರಿದಂತೆ ಸಮಾಜದಲ್ಲಿ ತೀರಾ ಹಿಂದುಳಿದ ಸಮುದಾಯಗಳ ಏಳಿಗೆಗಾಗಿ ಯಲಹಂಕ ತಾಲ್ಲೂಕು ವ್ಯಾಪ್ತಿಯಲ್ಲಿ ಭೂಮಿ ನೀಡುವ ಸಂಬಂಧ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದ್ದು, ಮತ್ತೊಮ್ಮೆ ಚರ್ಚಿಸಿ, ಶೀಘ್ರ ಅನುಷ್ಠಾನಕ್ಕೆ ಪ್ರಯತ್ನಿಸಲಾಗುವುದು. ಜನಾಂಗಕ್ಕೆ ಹಿಂದುಳಿದ ವರ್ಗದ ಅಡಿಯಲ್ಲಿ ಒಳಮೀಸಲಾತಿ ಕಲ್ಪಿಸಲು ಸರ್ಕಾರದ ಗಮನ ಸೆಳೆಯುತ್ತೇನೆ’ ಎಂದು ಭರವಸೆ ನೀಡಿದರು.