<p><strong>ಬೆಂಗಳೂರು: </strong>ಪರಿಶಿಷ್ಟ ಪಂಗಡ ಮತ್ತು ಜಾತಿಯಲ್ಲಿಯೇ (ಎಸ್ಸಿ–ಎಸ್ಟಿ) ತಳ ಸಮುದಾಯಗಳಾದ ವಿಮುಕ್ತ ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಸ್ಥಾಪನೆ ಮಾಡಬೇಕು. ಈ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಅಲೆಮಾರಿ ಬುಡಕಟ್ಟು ಮಹಾಸಭಾ ಎಚ್ಚರಿಸಿದೆ.</p>.<p>ನಗರದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಮಹಾಸಭಾದ ಮುಖಂಡರು ಈ ಒತ್ತಾಯ ಮಾಡಿದರು. ‘ಮುಂದಿನ ಬಜೆಟ್ನಲ್ಲಿ, ಅಲೆಮಾರಿ ಅಭಿವೃದ್ಧಿ ಕೋಶವನ್ನು ವಿಮುಕ್ತ ಅಲೆಮಾರಿ ನಿಗಮವನ್ನಾಗಿ ಪರಿವರ್ತಿಸಬೇಕು. ಸಮುದಾಯದ ಅಭಿವೃದ್ಧಿಗೆ ₹250 ಕೋಟಿ ಮೊತ್ತದ ಪ್ಯಾಕೇಜ್ ಘೋಷಿಸಬೇಕು’ ಎಂದು ಸಂಘಟನೆಯ ಅಧ್ಯಕ್ಷ ಡಾ. ಬಾಲಗುರುಮೂರ್ತಿ ಒತ್ತಾಯಿಸಿದರು.</p>.<p>‘ರಾಜ್ಯದಲ್ಲಿ 20 ಲಕ್ಷಕ್ಕಿಂತಲೂ ಅಧಿಕ ಸಂಖ್ಯೆಯಲ್ಲಿರುವ ಅತ್ಯಂತ ಶೋಷಿತ ತಳ ಸಮುದಾಯವಿದು. ಅಲೆಮಾರಿ, ಆದಿವಾಸಿ, ಅರಣ್ಯಮೂಲ ಬುಡಕಟ್ಟುಗಳು ಇನ್ನು ಮುಂದೆ ಒಗ್ಗೂಡಿ ಹೋರಾಡಬೇಕು. ಸಂವಿಧಾನಬದ್ಧ ಹಕ್ಕುಗಳನ್ನು ಪಡೆದುಕೊಳ್ಳಲು ರಾಜ್ಯದಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದು’ ಎಂದು ಅವರು ಹೇಳಿದರು.</p>.<p>ಪ್ರಧಾನ ಕಾರ್ಯದರ್ಶಿ ಕಿರಣ್ ಕುಮಾರ್ ಕೊತ್ತಗೆರೆ, ‘ಸಮಾಜ ಕಲ್ಯಾಣ ಇಲಾಖೆಯು ಅಲೆಮಾರಿಗಳ ಕಲ್ಯಾಣವನ್ನು ಮರೆತಿದೆ.ರಾಜ್ಯದಲ್ಲಿ ಜಾತಿಗೊಂದು ನಿಗಮವನ್ನು ರಾತ್ರೋರಾತ್ರಿ ಘೋಷಣೆ ಮಾಡುವ ಸರ್ಕಾರ ಅಲೆಮಾರಿಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳುತ್ತಿಲ್ಲ. ಅಲೆಮಾರಿಗಳು ಇಂದಿಗೂ ಟೆಂಟ್ನಲ್ಲಿ ವಾಸಿಸುತ್ತಿದ್ದಾರೆ’ ಎಂದರು.</p>.<p>ಕಾರ್ಯಾಧ್ಯಕ್ಷ ವೆಂಕಟರಮಣಯ್ಯ, ‘ಜಾತಿ ಪತ್ರ ನೀಡುವುದಕ್ಕೇ ಸರ್ಕಾರ ಮೀನಮೇಷ ಎಣಿಸುತ್ತಿದೆ. ಸರ್ಕಾರ ಕೂಡಲೇ ಅಲೆಮಾರಿ ಆಯೋಗವನ್ನು ರಚನೆ ಮಾಡಬೇಕು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಪರಿಶಿಷ್ಟ ಪಂಗಡ ಮತ್ತು ಜಾತಿಯಲ್ಲಿಯೇ (ಎಸ್ಸಿ–ಎಸ್ಟಿ) ತಳ ಸಮುದಾಯಗಳಾದ ವಿಮುಕ್ತ ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಸ್ಥಾಪನೆ ಮಾಡಬೇಕು. ಈ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಅಲೆಮಾರಿ ಬುಡಕಟ್ಟು ಮಹಾಸಭಾ ಎಚ್ಚರಿಸಿದೆ.</p>.<p>ನಗರದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಮಹಾಸಭಾದ ಮುಖಂಡರು ಈ ಒತ್ತಾಯ ಮಾಡಿದರು. ‘ಮುಂದಿನ ಬಜೆಟ್ನಲ್ಲಿ, ಅಲೆಮಾರಿ ಅಭಿವೃದ್ಧಿ ಕೋಶವನ್ನು ವಿಮುಕ್ತ ಅಲೆಮಾರಿ ನಿಗಮವನ್ನಾಗಿ ಪರಿವರ್ತಿಸಬೇಕು. ಸಮುದಾಯದ ಅಭಿವೃದ್ಧಿಗೆ ₹250 ಕೋಟಿ ಮೊತ್ತದ ಪ್ಯಾಕೇಜ್ ಘೋಷಿಸಬೇಕು’ ಎಂದು ಸಂಘಟನೆಯ ಅಧ್ಯಕ್ಷ ಡಾ. ಬಾಲಗುರುಮೂರ್ತಿ ಒತ್ತಾಯಿಸಿದರು.</p>.<p>‘ರಾಜ್ಯದಲ್ಲಿ 20 ಲಕ್ಷಕ್ಕಿಂತಲೂ ಅಧಿಕ ಸಂಖ್ಯೆಯಲ್ಲಿರುವ ಅತ್ಯಂತ ಶೋಷಿತ ತಳ ಸಮುದಾಯವಿದು. ಅಲೆಮಾರಿ, ಆದಿವಾಸಿ, ಅರಣ್ಯಮೂಲ ಬುಡಕಟ್ಟುಗಳು ಇನ್ನು ಮುಂದೆ ಒಗ್ಗೂಡಿ ಹೋರಾಡಬೇಕು. ಸಂವಿಧಾನಬದ್ಧ ಹಕ್ಕುಗಳನ್ನು ಪಡೆದುಕೊಳ್ಳಲು ರಾಜ್ಯದಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದು’ ಎಂದು ಅವರು ಹೇಳಿದರು.</p>.<p>ಪ್ರಧಾನ ಕಾರ್ಯದರ್ಶಿ ಕಿರಣ್ ಕುಮಾರ್ ಕೊತ್ತಗೆರೆ, ‘ಸಮಾಜ ಕಲ್ಯಾಣ ಇಲಾಖೆಯು ಅಲೆಮಾರಿಗಳ ಕಲ್ಯಾಣವನ್ನು ಮರೆತಿದೆ.ರಾಜ್ಯದಲ್ಲಿ ಜಾತಿಗೊಂದು ನಿಗಮವನ್ನು ರಾತ್ರೋರಾತ್ರಿ ಘೋಷಣೆ ಮಾಡುವ ಸರ್ಕಾರ ಅಲೆಮಾರಿಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳುತ್ತಿಲ್ಲ. ಅಲೆಮಾರಿಗಳು ಇಂದಿಗೂ ಟೆಂಟ್ನಲ್ಲಿ ವಾಸಿಸುತ್ತಿದ್ದಾರೆ’ ಎಂದರು.</p>.<p>ಕಾರ್ಯಾಧ್ಯಕ್ಷ ವೆಂಕಟರಮಣಯ್ಯ, ‘ಜಾತಿ ಪತ್ರ ನೀಡುವುದಕ್ಕೇ ಸರ್ಕಾರ ಮೀನಮೇಷ ಎಣಿಸುತ್ತಿದೆ. ಸರ್ಕಾರ ಕೂಡಲೇ ಅಲೆಮಾರಿ ಆಯೋಗವನ್ನು ರಚನೆ ಮಾಡಬೇಕು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>