<p><strong>ಬೆಂಗಳೂರು:</strong> ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಸೆಂಟ್ರಲ್ ಕಾಲೇಜಿನ ಆವರಣದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಸಬಲೀಕರಣ ಹಾಗೂ ಇತರೆ ಹಿಂದುಳಿದ ವರ್ಗಗಳ (ಒಬಿಸಿ) ಕೋಶಗಳ ಕಚೇರಿಗಳನ್ನು ಪ್ರಭಾರ ಕುಲಪತಿ ಪ್ರೊ.ಕೆ.ಆರ್.ಜಲಜಾ ಮಂಗಳವಾರ ಉದ್ಘಾಟಿಸಿದರು. ಕುಲಸಚಿವ ಪ್ರೊ.ಬಿ.ರಮೇಶ್ ಪರೀಕ್ಷಾಪೂರ್ವ ತರಬೇತಿ ಕೇಂದ್ರಕ್ಕೆ ಚಾಲನೆ ನೀಡಿದರು.</p>.<p>ನಂತರ ಮಾತನಾಡಿದ ರಮೇಶ್ ಅವರು, ‘ಕೇಂದ್ರ, ರಾಜ್ಯ ಸರ್ಕಾರಗಳು ಹಾಗೂ ವಿಶ್ವವಿದ್ಯಾಲಯ ಧನಸಹಾಯ ಆಯೋಗದಿಂದ ದೊರೆಯುವ ವಿವಿಧ ಸೌಲಭ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅಗತ್ಯ ಮಾರ್ಗದರ್ಶನ ಮತ್ತು ನೆರವು ಒದಗಿಸಲು ಈ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ’ ಎಂದು ತಿಳಿಸಿದರು.</p>.<p>‘ರೋಸ್ಟರ್ ಪದ್ಧತಿ, ಹಾಸ್ಟೆಲ್ ಸೌಲಭ್ಯ ಸೇರಿದಂತೆ ವಿದ್ಯಾರ್ಥಿಗಳ ಕುಂದು ಕೊರತೆಗಳ ನಿವಾರಣೆಗೆ ಈ ಕೋಶಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಲಿವೆ’ ಎಂದು ಅವರು ವಿವರಿಸಿದರು.</p>.<p>‘ಪರೀಕ್ಷಾಪೂರ್ವ ತರಬೇತಿ ಕೇಂದ್ರದ ಮೂಲಕ ಜ್ಞಾನಜ್ಯೋತಿ ಕ್ಯಾಂಪಸ್ನಲ್ಲಿ ಓದುತ್ತಿರುವ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗಲು ಸೂಕ್ತ ತರಬೇತಿ ನೀಡಲಾಗುವುದು’ ಎಂದು ತಿಳಿಸಿದರು.</p>.<p>‘ವಿದ್ಯಾರ್ಥಿಗಳಿಗೆ ಕೌಶಲ ತರಬೇತಿಯ ಮೂಲಕ ವೃತ್ತಿಪರ ಪರಿಣತಿ ದೊರಕಿಸಿಕೊಡಲಾಗುವುದು. ಪ್ರತಿವರ್ಷ ಉದ್ಯಮ ವಲಯದ ಸಹಯೋಗದಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗುವುದು’ ಎಂದು ಅವರು ವಿವರಿಸಿದರು.</p>.<p>ಬಿಸಿಯು ಸಿಂಡಿಕೇಟ್ ಸದಸ್ಯರಾದ ಬಿ.ಆರ್. ಸುಪ್ರೀತ್. ಎಚ್. ಕೃಷ್ಣರಾಮ್, ಕೆ.ಪಿ.ಪಾಟೀಲ್, ಶಿಲ್ಪಶ್ರೀ, ಪಿ.ಎಂ.ಚೈತ್ರಾ, ಆಯಿಷಾ ಫರ್ಜಾನಾ ಹಾಗೂ ಪ್ರಾಧ್ಯಾಪಕರು, ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಸೆಂಟ್ರಲ್ ಕಾಲೇಜಿನ ಆವರಣದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಸಬಲೀಕರಣ ಹಾಗೂ ಇತರೆ ಹಿಂದುಳಿದ ವರ್ಗಗಳ (ಒಬಿಸಿ) ಕೋಶಗಳ ಕಚೇರಿಗಳನ್ನು ಪ್ರಭಾರ ಕುಲಪತಿ ಪ್ರೊ.ಕೆ.ಆರ್.ಜಲಜಾ ಮಂಗಳವಾರ ಉದ್ಘಾಟಿಸಿದರು. ಕುಲಸಚಿವ ಪ್ರೊ.ಬಿ.ರಮೇಶ್ ಪರೀಕ್ಷಾಪೂರ್ವ ತರಬೇತಿ ಕೇಂದ್ರಕ್ಕೆ ಚಾಲನೆ ನೀಡಿದರು.</p>.<p>ನಂತರ ಮಾತನಾಡಿದ ರಮೇಶ್ ಅವರು, ‘ಕೇಂದ್ರ, ರಾಜ್ಯ ಸರ್ಕಾರಗಳು ಹಾಗೂ ವಿಶ್ವವಿದ್ಯಾಲಯ ಧನಸಹಾಯ ಆಯೋಗದಿಂದ ದೊರೆಯುವ ವಿವಿಧ ಸೌಲಭ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅಗತ್ಯ ಮಾರ್ಗದರ್ಶನ ಮತ್ತು ನೆರವು ಒದಗಿಸಲು ಈ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ’ ಎಂದು ತಿಳಿಸಿದರು.</p>.<p>‘ರೋಸ್ಟರ್ ಪದ್ಧತಿ, ಹಾಸ್ಟೆಲ್ ಸೌಲಭ್ಯ ಸೇರಿದಂತೆ ವಿದ್ಯಾರ್ಥಿಗಳ ಕುಂದು ಕೊರತೆಗಳ ನಿವಾರಣೆಗೆ ಈ ಕೋಶಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಲಿವೆ’ ಎಂದು ಅವರು ವಿವರಿಸಿದರು.</p>.<p>‘ಪರೀಕ್ಷಾಪೂರ್ವ ತರಬೇತಿ ಕೇಂದ್ರದ ಮೂಲಕ ಜ್ಞಾನಜ್ಯೋತಿ ಕ್ಯಾಂಪಸ್ನಲ್ಲಿ ಓದುತ್ತಿರುವ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗಲು ಸೂಕ್ತ ತರಬೇತಿ ನೀಡಲಾಗುವುದು’ ಎಂದು ತಿಳಿಸಿದರು.</p>.<p>‘ವಿದ್ಯಾರ್ಥಿಗಳಿಗೆ ಕೌಶಲ ತರಬೇತಿಯ ಮೂಲಕ ವೃತ್ತಿಪರ ಪರಿಣತಿ ದೊರಕಿಸಿಕೊಡಲಾಗುವುದು. ಪ್ರತಿವರ್ಷ ಉದ್ಯಮ ವಲಯದ ಸಹಯೋಗದಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗುವುದು’ ಎಂದು ಅವರು ವಿವರಿಸಿದರು.</p>.<p>ಬಿಸಿಯು ಸಿಂಡಿಕೇಟ್ ಸದಸ್ಯರಾದ ಬಿ.ಆರ್. ಸುಪ್ರೀತ್. ಎಚ್. ಕೃಷ್ಣರಾಮ್, ಕೆ.ಪಿ.ಪಾಟೀಲ್, ಶಿಲ್ಪಶ್ರೀ, ಪಿ.ಎಂ.ಚೈತ್ರಾ, ಆಯಿಷಾ ಫರ್ಜಾನಾ ಹಾಗೂ ಪ್ರಾಧ್ಯಾಪಕರು, ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>