ಗೋವಿಂದರಾಜನಗರದಲ್ಲಿ ನಿರ್ಮಾಣವಾಗಿರುವ ಎಂ. ಚಿದಾನಂದಮೂರ್ತಿ ಸಭಾಂಗಣವನ್ನು ಈಚೆಗೆ ಉದ್ಘಾಟಿಸಿದ ಅವರು, ‘ಕ್ಷೇತ್ರದಲ್ಲಿನ ಕಾಮಗಾರಿ, ಯೋಜನೆಗಳಿಗೆ ಬಸವೇಶ್ವರ, ದಾಸಶೇಷ್ಠ ಕನಕದಾಸ, ಸಂಗೊಳ್ಳಿ ರಾಯಣ್ಣ, ನಾಡಪ್ರಭು ಕೆಂಪೇಗೌಡ, ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್, ಸ್ವಾಮಿ ವಿವೇಕಾನಂದ, ಅಟಲ್ ಬಿಹಾರಿ ವಾಜಪೇಯಿ, ಶಿವಕುಮಾರ ಸ್ವಾಮೀಜಿ, ಬಾಲಗಂಗಾಧರನಾಥ ಸ್ವಾಮೀಜಿ, ಪೇಜಾವರ ಸ್ವಾಮೀಜಿ ಸೇರಿ ವಿವಿಧ ಮಹನೀಯರ ಹೆಸರನ್ನು ಇಡಲಾಗಿದೆ. ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಆಳವಡಿಸಿಕೊಂಡು, ಉತ್ತಮ ಪ್ರಜೆಯಾಗಲಿ ಎಂಬ ಉದ್ದೇಶದಿಂದ ಹೆಸರುಗಳನ್ನು ನಾಮಕರಣ ಮಾಡಲಾಗಿದೆ’ ಎಂದು ಹೇಳಿದರು.