<p><strong>ಬೆಂಗಳೂರು:</strong> ‘ಬದುಕಿನ ಬಂಡಿ ಹಿಂದಕ್ಕೆ ಚಲಿಸುವಂತೆ ಮಾಡುವ ಗೇರ್ ಇಲ್ಲ. ಹಾಗಾಗಿ ಕಳೆದ ಸಮಯವನ್ನು ಮತ್ತೆ ಪಡೆಯಲು ಸಾಧ್ಯವಿಲ್ಲ. ಇರುವ ಪ್ರತಿ ಕ್ಷಣವನ್ನು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಆದಿಚುಂಚನಗಿರಿ ಸಂಸ್ಥಾನದ ನಿರ್ಮಲಾನಂದನಾಥ ಸ್ವಾಮೀಜಿ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.</p>.<p>ರಾವ್ ಬಹದ್ದೂರ್ ಧರ್ಮಪ್ರವರ್ತ ಗುಬ್ಬಿ ತೋಟದಪ್ಪ ಧರ್ಮಸಂಸ್ಥೆಯು ಭಾನುವಾರ ಆಯೋಜಿಸಿದ್ದ ಶತಮಾನೋತ್ಸವ ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸಾಧನೆಗೆ ಜಾತಿ, ಧರ್ಮ, ಬಡತನ ಹಾಗೂ ಹುಟ್ಟು ಕಾರಣವಲ್ಲ.ವಿದ್ಯಾರ್ಥಿ ಜೀವನ ಅತ್ಯಂತ ಅಮೂಲ್ಯ. ಅದನ್ನು ಸಮರ್ಪಕವಾಗಿ ಬಳಸಿಕೊಂಡರೆ ಮುಂದಿನ ಭವಿಷ್ಯ ಉಜ್ವಲವಾಗಿರುತ್ತದೆ’ ಎಂದರು.</p>.<p>ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (ವಿಟಿಯು) ಕುಲಪತಿ ಡಾ.ಕರಿಸಿದ್ದಪ್ಪ, ‘ರಾಜ್ಯದ ಅನೇಕ ಮಠಗಳು ವೈದ್ಯಕೀಯ ಹಾಗೂಎಂಜಿನಿಯರಿಂಗ್ ಶಿಕ್ಷಣ ಆರಂಭಿಸಿವೆ. ಇದರಿಂದ ಸಾಮಾನ್ಯರಿಗೂ ಉನ್ನತ ಶಿಕ್ಷಣ ದೊರೆಯುವಂತಾಗಿದೆ. ಶಿಕ್ಷಣಕ್ಕೆ ಮಠಗಳ ಪಾತ್ರ ಮಹತ್ವದ್ದು’ ಎಂದರು.</p>.<p>ಕಾರ್ಯಕ್ರಮದಲ್ಲಿ 320 ವಿದ್ಯಾರ್ಥಿಗಳಿಗೆವಿದ್ಯಾರ್ಥಿ ವೇತನ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಬದುಕಿನ ಬಂಡಿ ಹಿಂದಕ್ಕೆ ಚಲಿಸುವಂತೆ ಮಾಡುವ ಗೇರ್ ಇಲ್ಲ. ಹಾಗಾಗಿ ಕಳೆದ ಸಮಯವನ್ನು ಮತ್ತೆ ಪಡೆಯಲು ಸಾಧ್ಯವಿಲ್ಲ. ಇರುವ ಪ್ರತಿ ಕ್ಷಣವನ್ನು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಆದಿಚುಂಚನಗಿರಿ ಸಂಸ್ಥಾನದ ನಿರ್ಮಲಾನಂದನಾಥ ಸ್ವಾಮೀಜಿ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.</p>.<p>ರಾವ್ ಬಹದ್ದೂರ್ ಧರ್ಮಪ್ರವರ್ತ ಗುಬ್ಬಿ ತೋಟದಪ್ಪ ಧರ್ಮಸಂಸ್ಥೆಯು ಭಾನುವಾರ ಆಯೋಜಿಸಿದ್ದ ಶತಮಾನೋತ್ಸವ ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸಾಧನೆಗೆ ಜಾತಿ, ಧರ್ಮ, ಬಡತನ ಹಾಗೂ ಹುಟ್ಟು ಕಾರಣವಲ್ಲ.ವಿದ್ಯಾರ್ಥಿ ಜೀವನ ಅತ್ಯಂತ ಅಮೂಲ್ಯ. ಅದನ್ನು ಸಮರ್ಪಕವಾಗಿ ಬಳಸಿಕೊಂಡರೆ ಮುಂದಿನ ಭವಿಷ್ಯ ಉಜ್ವಲವಾಗಿರುತ್ತದೆ’ ಎಂದರು.</p>.<p>ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (ವಿಟಿಯು) ಕುಲಪತಿ ಡಾ.ಕರಿಸಿದ್ದಪ್ಪ, ‘ರಾಜ್ಯದ ಅನೇಕ ಮಠಗಳು ವೈದ್ಯಕೀಯ ಹಾಗೂಎಂಜಿನಿಯರಿಂಗ್ ಶಿಕ್ಷಣ ಆರಂಭಿಸಿವೆ. ಇದರಿಂದ ಸಾಮಾನ್ಯರಿಗೂ ಉನ್ನತ ಶಿಕ್ಷಣ ದೊರೆಯುವಂತಾಗಿದೆ. ಶಿಕ್ಷಣಕ್ಕೆ ಮಠಗಳ ಪಾತ್ರ ಮಹತ್ವದ್ದು’ ಎಂದರು.</p>.<p>ಕಾರ್ಯಕ್ರಮದಲ್ಲಿ 320 ವಿದ್ಯಾರ್ಥಿಗಳಿಗೆವಿದ್ಯಾರ್ಥಿ ವೇತನ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>