‘ಸರ್ಕಾರದ ಆದೇಶವನ್ನು ಎಲ್ಲ ಶಾಲೆಗಳೂ ಕಡ್ಡಾಯವಾಗಿ ಪಾಲಿಸಬೇಕು. ನಮ್ಮ ಅಧಿಕಾರಿಗಳುಶಾಲೆಗಳಿಗೆ ಹೋಗಿ ಬ್ಯಾಗ್ ತೂಗುತ್ತೇವೆ, ಆದೇಶ ಪಾಲನೆಯಾಗಿದೆಯೇ ಎಂಬುದನ್ನು ಗಮನಿಸುತ್ತೇವೆ. ರಾಜ್ಯದಾದ್ಯಂತ ಈ ಕಾರ್ಯಾಚರಣೆ ನಡೆಯಲಿದೆ’ ಎಂದು ಪ್ರಾಥಮಿಕ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್ ‘ಪ್ರಜಾವಾಣಿ’ಗೆ ತಿಳಿಸಿದರು.