<p><strong>ಬೆಂಗಳೂರು: </strong>ರಾಜ್ಯ ಸರ್ಕಾರ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಅ.30ರವರೆಗೆ ರಜೆ ಘೋಷಿಸಿದ್ದರೂ, ಬಿಬಿಎಂಪಿ ಶಾಲಾ ಶಿಕ್ಷಕರು ವಿದ್ಯಾರ್ಥಿಗಳನ್ನು ಶಾಲೆಗೆ ಕರೆಸಿ ತರಗತಿ ನಡೆಸುತ್ತಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.</p>.<p>‘ಜಯನಗರದ ಭೈರಸಂದ್ರದಲ್ಲಿರುವ ಬಿಬಿಎಂಪಿ ಶಾಲೆಯಲ್ಲಿ ಮಕ್ಕಳು ಓದುತ್ತಿದ್ದಾರೆ. ರಾಜ್ಯ ಸರ್ಕಾರ ರಜೆ ಘೋಷಿಸಿದ ನಂತರವೂ ಮಕ್ಕಳನ್ನು ಶಾಲೆಗೆ ಬರಲು ಹೇಳುತ್ತಿದ್ದಾರೆ. ಬಿಬಿ ಎಂಪಿ ಶಿಕ್ಷಕರು ಕೋವಿಡ್ ಕರ್ತವ್ಯದಲ್ಲಿದ್ದಾರೆ. ಬೆಳಿಗ್ಗೆ ಈ ಕೆಲಸ ಮುಗಿಸಿ, ಮಧ್ಯಾಹ್ನ ತರಗತಿಗೆ ಬರುತ್ತಾರೆ. ಶಿಕ್ಷಕರಿಂದ ಮಕ್ಕಳಿಗೆ ಸೋಂಕು ಹರಡಿ ದರೆ ಯಾರು ಜವಾಬ್ದಾರಿ’ ಎಂದು ಪೋಷಕರೊಬ್ಬರು ಪ್ರಶ್ನಿಸಿದರು.</p>.<p>‘ಬಿಬಿಎಂಪಿ ಶಾಲೆಗಳು ಸರ್ಕಾರದ ನಿಯಮ ಪಾಲಿಸಬೇಕು. ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ ನೀಡಬೇಕು. ಮಕ್ಕ ಳನ್ನು ಶಾಲೆಗೆ ಕರೆಸದಿರಲು ಕ್ರಮ ಕೈಗೊಳ್ಳಬೇಕು’ ಎಂದು ಅವರು ಒತ್ತಾಯಿಸಿದರು.</p>.<p>‘ವಿದ್ಯಾಗಮದ ಅಡಿ ಕೈಗೊಳ್ಳುವ ತರಗತಿಗೆ ಹಾಜರಾಗಲು ಕಳೆದ 12ರಂದು ಮೂವರು ವಿದ್ಯಾರ್ಥಿಗಳು ಬಂದಿದ್ದರು. ಆದರೆ, ಈ ಕಾರ್ಯಕ್ರಮ ಸ್ಥಗಿತಗೊಂಡಿದ್ದರ ಬಗ್ಗೆ ಅವರಿಗೆ ಮಾಹಿತಿ ಇರಲಿಲ್ಲ. ಶಿಕ್ಷಕರೂ ಬಂದಿರಲಿಲ್ಲ. ಮಳೆ ಬರುತ್ತಿದ್ದರಿಂದ ಮಕ್ಕಳನ್ನು ಶಾಲೆಯೊಳಗೆ ಕರೆದೆವು. ಆದರೆ, ತರಗತಿ ನಡೆಸಿಲ್ಲ’ ಎಂದು ಬಿಬಿಎಂಪಿ ಪ್ರೌಢಶಾಲೆಯ ಮುಖ್ಯಶಿಕ್ಷಕಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಶಾಲಾ ದಾಖಲಾತಿ ಪ್ರಕ್ರಿಯೆ ನಡೆಯುತ್ತಿದೆ. ಮಕ್ಕಳನ್ನು ಶಾಲೆಗೆ ಸೇರಿಸುವಂತೆ ಶಿಕ್ಷಕರು ಮನೆ ಮನೆಗೆ ತೆರಳಿ ಪೋಷಕರನ್ನು ಕೋರಿದ್ದರು. ಹೊಸದಾಗಿ ಶಾಲೆ ಸೇರಲು ಬರುವ ವಿದ್ಯಾರ್ಥಿಗಳಿಗೆ ವರ್ಗಾವಣೆ ಪ್ರಮಾಣ ಪತ್ರ ಸೇರಿದಂತೆ ಇನ್ನಿತರ ದಾಖಲೆಗಳನ್ನು ತಂದುಕೊಡುವಂತೆ ಕರೆ ಮಾಡಿದ್ದೆವು’ ಎಂದು ಅವರು ಸ್ಪಷ್ಟಪಡಿಸಿದರು.</p>.<p class="Subhead"><strong>ಕೆಲಸ ಮಾಡಿ, ಸಂಬಳ ಕೇಳಬೇಡಿ:</strong> ‘ರಜೆ ಇದ್ದರೂ ನಾವು ಕೋವಿಡ್ ಕರ್ತವ್ಯ ಮಾಡುತ್ತಿದ್ದೇವೆ. ಜೂನ್ನಿಂದ ವಿದ್ಯಾಗಮ ಕಾರ್ಯಕ್ರಮದ ಅಡಿ ಮಕ್ಕಳಿಗೆ ಪಾಠವನ್ನೂ ಮಾಡುತ್ತಿದ್ದೇವೆ. ಆದರೆ, ಜೂನ್ನಿಂದ ಈವರೆಗೆ ವೇತನ ನೀಡಿಲ್ಲ’ ಎಂದು ಬಿಬಿಎಂಪಿ ಶಾಲೆಯಲ್ಲಿನ ಹೊರಗುತ್ತಿಗೆ ಶಿಕ್ಷಕರೊಬ್ಬರು ಹೇಳಿದರು.</p>.<p>‘ಕಾಯಂ ಶಿಕ್ಷಕರು ಮಾಡುವ ಎಲ್ಲ ಕೆಲಸವನ್ನೂ ಮಾಡುತ್ತಿದ್ದೇವೆ. ಬಿಬಿಎಂಪಿ ಅಧಿಕಾರಿಗಳು ನಮ್ಮನ್ನು ಕೋವಿಡ್ ಕರ್ತವ್ಯಕ್ಕೆ ನಿಯೋಜಿಸುತ್ತಿದ್ದಾರೆ. ಆದರೆ, ವೇತನ ಕೇಳಿದರೆ ಮಾತ್ರ ಯಾರೊಬ್ಬರೂ ಪ್ರತಿಕ್ರಿಯಿಸುವುದಿಲ್ಲ. ಹೊರಗುತ್ತಿಗೆ ಏಜೆನ್ಸಿಯವರಿಗೆ ಕೇಳಿದರೆ ಬಿಬಿಎಂಪಿಯಿಂದಲೇ ಹಣ ಪಾವತಿಯಾಗಿಲ್ಲ ಎನ್ನುತ್ತಾರೆ’ ಎಂದು ಅವರು ಅಳಲು ತೋಡಿಕೊಂಡರು.</p>.<p>***</p>.<p>ಜೂನ್ನಲ್ಲಿ ಹಿಂಬಾಕಿ ವೇತನ ನೀಡಲಾಗಿದೆ. ಉಳಿದ ತಿಂಗಳುಗಳ ವೇತನ ಪಾವತಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಶೀಘ್ರ ದಲ್ಲಿ ವೇತನ ಪಾವತಿಗೆ ಕ್ರಮ ಕೈಗೊಳ್ಳಲಾಗುವುದು</p>.<p><strong>- ಹರೀಶ್, ಬಿಬಿಎಂಪಿ ಶಿಕ್ಷಣಾಧಿಕಾರಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯ ಸರ್ಕಾರ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಅ.30ರವರೆಗೆ ರಜೆ ಘೋಷಿಸಿದ್ದರೂ, ಬಿಬಿಎಂಪಿ ಶಾಲಾ ಶಿಕ್ಷಕರು ವಿದ್ಯಾರ್ಥಿಗಳನ್ನು ಶಾಲೆಗೆ ಕರೆಸಿ ತರಗತಿ ನಡೆಸುತ್ತಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.</p>.<p>‘ಜಯನಗರದ ಭೈರಸಂದ್ರದಲ್ಲಿರುವ ಬಿಬಿಎಂಪಿ ಶಾಲೆಯಲ್ಲಿ ಮಕ್ಕಳು ಓದುತ್ತಿದ್ದಾರೆ. ರಾಜ್ಯ ಸರ್ಕಾರ ರಜೆ ಘೋಷಿಸಿದ ನಂತರವೂ ಮಕ್ಕಳನ್ನು ಶಾಲೆಗೆ ಬರಲು ಹೇಳುತ್ತಿದ್ದಾರೆ. ಬಿಬಿ ಎಂಪಿ ಶಿಕ್ಷಕರು ಕೋವಿಡ್ ಕರ್ತವ್ಯದಲ್ಲಿದ್ದಾರೆ. ಬೆಳಿಗ್ಗೆ ಈ ಕೆಲಸ ಮುಗಿಸಿ, ಮಧ್ಯಾಹ್ನ ತರಗತಿಗೆ ಬರುತ್ತಾರೆ. ಶಿಕ್ಷಕರಿಂದ ಮಕ್ಕಳಿಗೆ ಸೋಂಕು ಹರಡಿ ದರೆ ಯಾರು ಜವಾಬ್ದಾರಿ’ ಎಂದು ಪೋಷಕರೊಬ್ಬರು ಪ್ರಶ್ನಿಸಿದರು.</p>.<p>‘ಬಿಬಿಎಂಪಿ ಶಾಲೆಗಳು ಸರ್ಕಾರದ ನಿಯಮ ಪಾಲಿಸಬೇಕು. ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ ನೀಡಬೇಕು. ಮಕ್ಕ ಳನ್ನು ಶಾಲೆಗೆ ಕರೆಸದಿರಲು ಕ್ರಮ ಕೈಗೊಳ್ಳಬೇಕು’ ಎಂದು ಅವರು ಒತ್ತಾಯಿಸಿದರು.</p>.<p>‘ವಿದ್ಯಾಗಮದ ಅಡಿ ಕೈಗೊಳ್ಳುವ ತರಗತಿಗೆ ಹಾಜರಾಗಲು ಕಳೆದ 12ರಂದು ಮೂವರು ವಿದ್ಯಾರ್ಥಿಗಳು ಬಂದಿದ್ದರು. ಆದರೆ, ಈ ಕಾರ್ಯಕ್ರಮ ಸ್ಥಗಿತಗೊಂಡಿದ್ದರ ಬಗ್ಗೆ ಅವರಿಗೆ ಮಾಹಿತಿ ಇರಲಿಲ್ಲ. ಶಿಕ್ಷಕರೂ ಬಂದಿರಲಿಲ್ಲ. ಮಳೆ ಬರುತ್ತಿದ್ದರಿಂದ ಮಕ್ಕಳನ್ನು ಶಾಲೆಯೊಳಗೆ ಕರೆದೆವು. ಆದರೆ, ತರಗತಿ ನಡೆಸಿಲ್ಲ’ ಎಂದು ಬಿಬಿಎಂಪಿ ಪ್ರೌಢಶಾಲೆಯ ಮುಖ್ಯಶಿಕ್ಷಕಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಶಾಲಾ ದಾಖಲಾತಿ ಪ್ರಕ್ರಿಯೆ ನಡೆಯುತ್ತಿದೆ. ಮಕ್ಕಳನ್ನು ಶಾಲೆಗೆ ಸೇರಿಸುವಂತೆ ಶಿಕ್ಷಕರು ಮನೆ ಮನೆಗೆ ತೆರಳಿ ಪೋಷಕರನ್ನು ಕೋರಿದ್ದರು. ಹೊಸದಾಗಿ ಶಾಲೆ ಸೇರಲು ಬರುವ ವಿದ್ಯಾರ್ಥಿಗಳಿಗೆ ವರ್ಗಾವಣೆ ಪ್ರಮಾಣ ಪತ್ರ ಸೇರಿದಂತೆ ಇನ್ನಿತರ ದಾಖಲೆಗಳನ್ನು ತಂದುಕೊಡುವಂತೆ ಕರೆ ಮಾಡಿದ್ದೆವು’ ಎಂದು ಅವರು ಸ್ಪಷ್ಟಪಡಿಸಿದರು.</p>.<p class="Subhead"><strong>ಕೆಲಸ ಮಾಡಿ, ಸಂಬಳ ಕೇಳಬೇಡಿ:</strong> ‘ರಜೆ ಇದ್ದರೂ ನಾವು ಕೋವಿಡ್ ಕರ್ತವ್ಯ ಮಾಡುತ್ತಿದ್ದೇವೆ. ಜೂನ್ನಿಂದ ವಿದ್ಯಾಗಮ ಕಾರ್ಯಕ್ರಮದ ಅಡಿ ಮಕ್ಕಳಿಗೆ ಪಾಠವನ್ನೂ ಮಾಡುತ್ತಿದ್ದೇವೆ. ಆದರೆ, ಜೂನ್ನಿಂದ ಈವರೆಗೆ ವೇತನ ನೀಡಿಲ್ಲ’ ಎಂದು ಬಿಬಿಎಂಪಿ ಶಾಲೆಯಲ್ಲಿನ ಹೊರಗುತ್ತಿಗೆ ಶಿಕ್ಷಕರೊಬ್ಬರು ಹೇಳಿದರು.</p>.<p>‘ಕಾಯಂ ಶಿಕ್ಷಕರು ಮಾಡುವ ಎಲ್ಲ ಕೆಲಸವನ್ನೂ ಮಾಡುತ್ತಿದ್ದೇವೆ. ಬಿಬಿಎಂಪಿ ಅಧಿಕಾರಿಗಳು ನಮ್ಮನ್ನು ಕೋವಿಡ್ ಕರ್ತವ್ಯಕ್ಕೆ ನಿಯೋಜಿಸುತ್ತಿದ್ದಾರೆ. ಆದರೆ, ವೇತನ ಕೇಳಿದರೆ ಮಾತ್ರ ಯಾರೊಬ್ಬರೂ ಪ್ರತಿಕ್ರಿಯಿಸುವುದಿಲ್ಲ. ಹೊರಗುತ್ತಿಗೆ ಏಜೆನ್ಸಿಯವರಿಗೆ ಕೇಳಿದರೆ ಬಿಬಿಎಂಪಿಯಿಂದಲೇ ಹಣ ಪಾವತಿಯಾಗಿಲ್ಲ ಎನ್ನುತ್ತಾರೆ’ ಎಂದು ಅವರು ಅಳಲು ತೋಡಿಕೊಂಡರು.</p>.<p>***</p>.<p>ಜೂನ್ನಲ್ಲಿ ಹಿಂಬಾಕಿ ವೇತನ ನೀಡಲಾಗಿದೆ. ಉಳಿದ ತಿಂಗಳುಗಳ ವೇತನ ಪಾವತಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಶೀಘ್ರ ದಲ್ಲಿ ವೇತನ ಪಾವತಿಗೆ ಕ್ರಮ ಕೈಗೊಳ್ಳಲಾಗುವುದು</p>.<p><strong>- ಹರೀಶ್, ಬಿಬಿಎಂಪಿ ಶಿಕ್ಷಣಾಧಿಕಾರಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>