<p><strong>ಬೆಂಗಳೂರು: </strong>ಕೊರೊನಾ ಪರಿಸ್ಥಿತಿಯಲ್ಲಿ ಶಾಲಾರಂಭ ಮತ್ತು ಸಮುದಾಯದ ಸಹಕಾರ ಕುರಿತಂತೆ ಸಲಹೆ, ಸೂಚನೆಗಳನ್ನು ನೀಡುವಂತೆ ಎಲ್ಲ ಸಚಿವರು ಮತ್ತು ಶಾಸಕರಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ.</p>.<p>ರಾಜ್ಯದಲ್ಲಿ ಶಾಲೆಗಳನ್ನು (ಎಲ್ಕೆಜಿಯಿಂದ ಪಿಯುಸಿವರೆಗೆ) ಯಾವಾಗ ಆರಂಭಿಸಬಹುದು, ಒಂದು ವೇಳೆ ಆರಂಭಿಸುವುದಾದರೆ ಯಾವ ತರಗತಿಗಳನ್ನು ಮೊದಲು ಆರಂಭಿಸಬಹುದು, ಸಮುದಾಯ ಹಾಗೂ ಜನಪ್ರತಿನಿಧಿಗಳಿಂದ ಶಿಕ್ಷಣ ಇಲಾಖೆ ಯಾವ ರೀತಿಯಿಂದ ಸಹಕಾರ ನಿರೀಕ್ಷಿಸಬಹುದು’ ಎಂಬ ಬಗ್ಗೆ ಸಲಹೆ, ಸೂಚನೆಯನ್ನು ನೀಡುವಂತೆ ಪತ್ರದಲ್ಲಿ ಅವರು ಕೋರಿದ್ದಾರೆ.</p>.<p>‘ಕೊರೊನಾ ಕಾರಣದಿಂದ ಮಾರ್ಚ್ನಲ್ಲಿ ಮುಚ್ಚಿದ ಶಾಲೆಗಳನ್ನು ಇನ್ನೂ ತೆರೆಯಲಾಗುತ್ತಿಲ್ಲ. ಜೂನ್ನಲ್ಲಿ ಆರಂಭವಾಗಬೇಕಿದ್ದ ಪ್ರಸಕ್ತ ಶೈಕ್ಷಣಿಕ ಸಾಲಿನ ಚಟುವಟಿಕೆ ಇನ್ನೂ ಪೂರ್ಣ ಪ್ರಮಾಣದಲ್ಲಿ ಆರಂಭಗೊಂಡಿಲ್ಲ. ಶಾಲೆಗಳನ್ನು ಮತ್ತೆ ಆರಂಭಿಸಲು ಪೂರ್ವಸಿದ್ಧತೆ, ಪ್ರಮಾಣಿತ ಕಾರ್ಯಾಚರಣಾ ವಿಧಾನವನ್ನು (ಎಸ್ಒಪಿ) ಇಲಾಖೆ ಸಿದ್ಧಪಡಿಸಿಕೊಂಡಿದೆ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.</p>.<p>‘ಕೊರೊನಾ ಸಾಂಕ್ರಾಮಿಕ ರೋಗ ದಿನದಿಂದ ದಿನಕ್ಕೆ ತೀವ್ರವಾಗುತ್ತಲೇ ಸಾಗಿದೆ. ಈ ಪರಿಸ್ಥಿತಿಯ ನಡುವೆಯೇ ಸಾಮಾಜಿಕ ಜೀವನ ತಹಬಂದಿಗೆ ಮರಳಬೇಕಿದೆ. ಕೊರೊನಾ ಕಾರಣಕ್ಕಾಗಿ ಅತ್ಯಂತ ಸಂಕಷ್ಟಕ್ಕೆ ಸಿಲುಕಿರುವುದು ಶಿಕ್ಷಣ ಕ್ಷೇತ್ರವಾಗಿದೆ’ ಎಂದೂ ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕೊರೊನಾ ಪರಿಸ್ಥಿತಿಯಲ್ಲಿ ಶಾಲಾರಂಭ ಮತ್ತು ಸಮುದಾಯದ ಸಹಕಾರ ಕುರಿತಂತೆ ಸಲಹೆ, ಸೂಚನೆಗಳನ್ನು ನೀಡುವಂತೆ ಎಲ್ಲ ಸಚಿವರು ಮತ್ತು ಶಾಸಕರಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ.</p>.<p>ರಾಜ್ಯದಲ್ಲಿ ಶಾಲೆಗಳನ್ನು (ಎಲ್ಕೆಜಿಯಿಂದ ಪಿಯುಸಿವರೆಗೆ) ಯಾವಾಗ ಆರಂಭಿಸಬಹುದು, ಒಂದು ವೇಳೆ ಆರಂಭಿಸುವುದಾದರೆ ಯಾವ ತರಗತಿಗಳನ್ನು ಮೊದಲು ಆರಂಭಿಸಬಹುದು, ಸಮುದಾಯ ಹಾಗೂ ಜನಪ್ರತಿನಿಧಿಗಳಿಂದ ಶಿಕ್ಷಣ ಇಲಾಖೆ ಯಾವ ರೀತಿಯಿಂದ ಸಹಕಾರ ನಿರೀಕ್ಷಿಸಬಹುದು’ ಎಂಬ ಬಗ್ಗೆ ಸಲಹೆ, ಸೂಚನೆಯನ್ನು ನೀಡುವಂತೆ ಪತ್ರದಲ್ಲಿ ಅವರು ಕೋರಿದ್ದಾರೆ.</p>.<p>‘ಕೊರೊನಾ ಕಾರಣದಿಂದ ಮಾರ್ಚ್ನಲ್ಲಿ ಮುಚ್ಚಿದ ಶಾಲೆಗಳನ್ನು ಇನ್ನೂ ತೆರೆಯಲಾಗುತ್ತಿಲ್ಲ. ಜೂನ್ನಲ್ಲಿ ಆರಂಭವಾಗಬೇಕಿದ್ದ ಪ್ರಸಕ್ತ ಶೈಕ್ಷಣಿಕ ಸಾಲಿನ ಚಟುವಟಿಕೆ ಇನ್ನೂ ಪೂರ್ಣ ಪ್ರಮಾಣದಲ್ಲಿ ಆರಂಭಗೊಂಡಿಲ್ಲ. ಶಾಲೆಗಳನ್ನು ಮತ್ತೆ ಆರಂಭಿಸಲು ಪೂರ್ವಸಿದ್ಧತೆ, ಪ್ರಮಾಣಿತ ಕಾರ್ಯಾಚರಣಾ ವಿಧಾನವನ್ನು (ಎಸ್ಒಪಿ) ಇಲಾಖೆ ಸಿದ್ಧಪಡಿಸಿಕೊಂಡಿದೆ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.</p>.<p>‘ಕೊರೊನಾ ಸಾಂಕ್ರಾಮಿಕ ರೋಗ ದಿನದಿಂದ ದಿನಕ್ಕೆ ತೀವ್ರವಾಗುತ್ತಲೇ ಸಾಗಿದೆ. ಈ ಪರಿಸ್ಥಿತಿಯ ನಡುವೆಯೇ ಸಾಮಾಜಿಕ ಜೀವನ ತಹಬಂದಿಗೆ ಮರಳಬೇಕಿದೆ. ಕೊರೊನಾ ಕಾರಣಕ್ಕಾಗಿ ಅತ್ಯಂತ ಸಂಕಷ್ಟಕ್ಕೆ ಸಿಲುಕಿರುವುದು ಶಿಕ್ಷಣ ಕ್ಷೇತ್ರವಾಗಿದೆ’ ಎಂದೂ ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>