‘ಶಾಲೆಗಳು ಇನ್ನೂ ಪ್ರಾರಂಭಗೊಂಡಿಲ್ಲ. ಕಟ್ಟಡದ ಕೆಲಸಗಳು ಪೂರ್ಣಗೊಂಡಿಲ್ಲ. ಆದರೂ, ಉದ್ಘಾಟನಾ ಕಾರ್ಯಕ್ರಮ ಏರ್ಪಡಿಸಲಾಯಿತು. ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಅವರನ್ನು ಸ್ವಾಗತಿಸಲು ಶಾಲಾ ಮಕ್ಕಳು ವಾದ್ಯ ಬಾರಿಸುತ್ತಿದ್ದರು.ಕೋವಿಡ್ ಈ ಸಮಯದಲ್ಲಿ ಶಾಲಾ ಮಕ್ಕಳನ್ನು ಹೀಗೆ ಬಳಸಿಕೊಳ್ಳುವುದು ಎಷ್ಟು ಸರಿ’ ಎಂದು ಬಿಳಿಜಾಜಿ ನಿವಾಸಿ ಗೋವಿಂದರಾಜು ಪ್ರಶ್ನಿಸಿದರು.