<p><strong>ದಾಬಸ್ ಪೇಟೆ:</strong> ಮುದ್ದಲಿಂಗನಹಳ್ಳಿ ಗೇಟ್ನ ಅಕ್ಷರ ಅಕಾಡೆಮಿ ಆಫ್ ಎಕ್ಸಲೆನ್ಸ್ ಶಾಲೆಗೆ ಸೇರಿದ ವಾಹನ ಚಾಲಕನ ನಿಯಂತ್ರಣ ತಪ್ಪಿ ಒಬಳಾಪುರದ ಗ್ರಾಮದ ಸಮೀಪ ಉರುಳಿ ಬಿದ್ದು ಚಾಲಕ ತಮ್ಮೇಗೌಡ ಎಂಬುವರಿಗೆ ಸಣ್ಣಪುಟ್ಟ ಗಾಯಗಳಾಗಿದೆ.</p>.<p>ಮಂಗಳವಾರ ಸಂಜೆ 5ರ ಸುಮಾರಿಗೆ ಒಬಳಾಪುರ ಗ್ರಾಮದ ಎಲೆಕಲ್ಲು ಬಳಿ ಸ್ಟೇರಿಂಗ್ ಇದ್ದಕ್ಕಿದ್ದ ಹಾಗೆ ಲಾಕ್ ಆಗಿದೆ. ನಿಯಂತ್ರಣ ಕಳೆದುಕೊಂಡ ವಾಹನ ಪಲ್ಟಿ ಹೊಡೆದಿದೆ. ಈ ವೇಳೆ ವಾಹನದಲ್ಲಿ ಮೂವರು ವಿದ್ಯಾರ್ಥಿಗಳು ಇದ್ದರು ಎನ್ನಲಾಗಿದೆ. ಮಕ್ಕಳಿಗೆ ಯಾವುದೇ ರೀತಿಯ ತೊಂದರೆಯಾಗಿಲ್ಲ. ಗಾಯಾಳು ಚಾಲಕನನ್ನು ನೆಲಮಂಗಲದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾಬಸ್ ಪೇಟೆ:</strong> ಮುದ್ದಲಿಂಗನಹಳ್ಳಿ ಗೇಟ್ನ ಅಕ್ಷರ ಅಕಾಡೆಮಿ ಆಫ್ ಎಕ್ಸಲೆನ್ಸ್ ಶಾಲೆಗೆ ಸೇರಿದ ವಾಹನ ಚಾಲಕನ ನಿಯಂತ್ರಣ ತಪ್ಪಿ ಒಬಳಾಪುರದ ಗ್ರಾಮದ ಸಮೀಪ ಉರುಳಿ ಬಿದ್ದು ಚಾಲಕ ತಮ್ಮೇಗೌಡ ಎಂಬುವರಿಗೆ ಸಣ್ಣಪುಟ್ಟ ಗಾಯಗಳಾಗಿದೆ.</p>.<p>ಮಂಗಳವಾರ ಸಂಜೆ 5ರ ಸುಮಾರಿಗೆ ಒಬಳಾಪುರ ಗ್ರಾಮದ ಎಲೆಕಲ್ಲು ಬಳಿ ಸ್ಟೇರಿಂಗ್ ಇದ್ದಕ್ಕಿದ್ದ ಹಾಗೆ ಲಾಕ್ ಆಗಿದೆ. ನಿಯಂತ್ರಣ ಕಳೆದುಕೊಂಡ ವಾಹನ ಪಲ್ಟಿ ಹೊಡೆದಿದೆ. ಈ ವೇಳೆ ವಾಹನದಲ್ಲಿ ಮೂವರು ವಿದ್ಯಾರ್ಥಿಗಳು ಇದ್ದರು ಎನ್ನಲಾಗಿದೆ. ಮಕ್ಕಳಿಗೆ ಯಾವುದೇ ರೀತಿಯ ತೊಂದರೆಯಾಗಿಲ್ಲ. ಗಾಯಾಳು ಚಾಲಕನನ್ನು ನೆಲಮಂಗಲದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>