<p><strong>ಬೆಂಗಳೂರು:</strong> ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಹಾಗೂ ಕರ್ನಾಟಕ ಸಾಹಿತ್ಯ ಅಕಾಡೆಮಿ ಜಂಟಿಯಾಗಿ ವಿಜ್ಞಾನ ಸಾಹಿತ್ಯ ಮತ್ತು ಸಂವಹನ ಕಾರ್ಯಾಗಾರವನ್ನು ಜ.22 ಹಾಗೂ 23ರಂದು ಹಮ್ಮಿಕೊಂಡಿವೆ.</p>.<p>ನಗರದ ವಿದ್ಯಾರಣ್ಯಪುರದಲ್ಲಿರುವ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಭವನದಲ್ಲಿ ನಡೆಯುವ ಕಾರ್ಯಾಗಾರದಲ್ಲಿ 40ರಿಂದ 50 ಮಂದಿ ಪಾಲ್ಗೊಳ್ಳಲು ಅವಕಾಶವಿದ್ದು, ಪ್ರಮುಖ ವಿಜ್ಞಾನ ಲೇಖಕರು, ಸಂವಹನಕಾರರು ಮಾರ್ಗದರ್ಶನ ನೀಡುವರು ಎಂದು ಸಂಚಾಲಕರಾದ ಡಾ.ವಸುಂಧರ ಭೂಪತಿ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ವಿಜ್ಞಾನ ಸಾಹಿತ್ಯ ಮತ್ತು ಸಂವಹನವು, ವೈಜ್ಞಾನಿಕ ಜ್ಞಾನವನ್ನು ಸಮಾಜಕ್ಕೆ ತಲುಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಅದರಲ್ಲೂ ವಿಜ್ಞಾನ ಕ್ಷೇತ್ರದಲ್ಲಿ ಆಗುತ್ತಿರುವ ಹೊಸ ಸಂಶೋಧನೆ ಮತ್ತು ಆವಿಷ್ಕಾರಗಳನ್ನು ಜನರಿಗೆ ಸರಳ ಹಾಗೂ ಪರಿಣಾಮಕಾರಿಯಾಗಿ ತಲುಪಿಸಬೇಕಾಗಿದೆ. ಈ ಕಾರಣದಿಂದಲೇ ಕಾರ್ಯಾಗಾರ ಆಯೋಜಿಸಿ ವಿಜ್ಞಾನ ಬರವಣಿಗೆಯ ಕೌಶಲಗಳನ್ನು ತಿಳಿಸಿಕೊಡಲಾಗುತ್ತದೆ ಎಂದರು.</p>.<p>ಕಾರ್ಯಾಗಾರ ಉಚಿತ. ಆಸಕ್ತರು 9986840447ಕ್ಕೆ ಕರೆ ಮಾಡಿ ಹೆಸರು ನೊಂದಾಯಿಸಿಕೊಳ್ಳಬಹುದು ಎಂದು ತಿಳಿಸಿದರು.</p>.<p>ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್.ಮುಕುಂದರಾಜ್, ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಅಧ್ಯಕ್ಷ ರಾಜಾಸಾಬ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಹಾಗೂ ಕರ್ನಾಟಕ ಸಾಹಿತ್ಯ ಅಕಾಡೆಮಿ ಜಂಟಿಯಾಗಿ ವಿಜ್ಞಾನ ಸಾಹಿತ್ಯ ಮತ್ತು ಸಂವಹನ ಕಾರ್ಯಾಗಾರವನ್ನು ಜ.22 ಹಾಗೂ 23ರಂದು ಹಮ್ಮಿಕೊಂಡಿವೆ.</p>.<p>ನಗರದ ವಿದ್ಯಾರಣ್ಯಪುರದಲ್ಲಿರುವ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಭವನದಲ್ಲಿ ನಡೆಯುವ ಕಾರ್ಯಾಗಾರದಲ್ಲಿ 40ರಿಂದ 50 ಮಂದಿ ಪಾಲ್ಗೊಳ್ಳಲು ಅವಕಾಶವಿದ್ದು, ಪ್ರಮುಖ ವಿಜ್ಞಾನ ಲೇಖಕರು, ಸಂವಹನಕಾರರು ಮಾರ್ಗದರ್ಶನ ನೀಡುವರು ಎಂದು ಸಂಚಾಲಕರಾದ ಡಾ.ವಸುಂಧರ ಭೂಪತಿ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ವಿಜ್ಞಾನ ಸಾಹಿತ್ಯ ಮತ್ತು ಸಂವಹನವು, ವೈಜ್ಞಾನಿಕ ಜ್ಞಾನವನ್ನು ಸಮಾಜಕ್ಕೆ ತಲುಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಅದರಲ್ಲೂ ವಿಜ್ಞಾನ ಕ್ಷೇತ್ರದಲ್ಲಿ ಆಗುತ್ತಿರುವ ಹೊಸ ಸಂಶೋಧನೆ ಮತ್ತು ಆವಿಷ್ಕಾರಗಳನ್ನು ಜನರಿಗೆ ಸರಳ ಹಾಗೂ ಪರಿಣಾಮಕಾರಿಯಾಗಿ ತಲುಪಿಸಬೇಕಾಗಿದೆ. ಈ ಕಾರಣದಿಂದಲೇ ಕಾರ್ಯಾಗಾರ ಆಯೋಜಿಸಿ ವಿಜ್ಞಾನ ಬರವಣಿಗೆಯ ಕೌಶಲಗಳನ್ನು ತಿಳಿಸಿಕೊಡಲಾಗುತ್ತದೆ ಎಂದರು.</p>.<p>ಕಾರ್ಯಾಗಾರ ಉಚಿತ. ಆಸಕ್ತರು 9986840447ಕ್ಕೆ ಕರೆ ಮಾಡಿ ಹೆಸರು ನೊಂದಾಯಿಸಿಕೊಳ್ಳಬಹುದು ಎಂದು ತಿಳಿಸಿದರು.</p>.<p>ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್.ಮುಕುಂದರಾಜ್, ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಅಧ್ಯಕ್ಷ ರಾಜಾಸಾಬ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>