ರಾಜ್ಯ ವಿಜ್ಞಾನ ಪರಿಷತ್ತಿನ ಅಧ್ಯಕ್ಷ ಗಿರೀಶ್ ಕಡ್ಲೇವಾಡ,‘ ಜನರು ವೈಜ್ಞಾನಿಕವಾಗಿ ಆಲೋಚಿಸುವ ಗುಣ ಬೆಳೆಸಿಕೊಳ್ಳಬೇಕು. ಯುವಜನತೆ ವಿಜ್ಞಾನ ಕ್ಷೇತ್ರದಲ್ಲಿ ಹೆಚ್ಚು ಸೇವೆ ಸಲ್ಲಿಸಬೇಕು. ಕೋವಿಡ್ನಿಂದ ನಿರ್ಮಾಣವಾಗಿರುವ ಸಂದಿಗ್ಧ ಸ್ಥಿತಿಯ ನಡುವೆಯೂ ಜೀವನ ಮುಂದುವರೆಸುವುದು ಅನಿವಾರ್ಯ. ಉನ್ನತ ಶಿಕ್ಷಣ ಹಾಗೂ ಸರ್ಕಾರಿ ಕೆಲಸ ಪಡೆಯಲು ಹೆಚ್ಚಿನ ಶ್ರಮ ಪಡಬೇಕು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಬೇಕು’ ಎಂದರು.