ನವದೆಹಲಿಯ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ (ಐಎಆರ್ಐ) ಹಾಗೂ ನೆದರ್ಲೆಂಡ್ನ ವಿಶ್ವವಿದ್ಯಾಲಯಗಳಲ್ಲಿ ಸಂದರ್ಶಕ ಪ್ರಾಧ್ಯಾಾಪಕರಾಗಿ ಕಾರ್ಯ ನಿರ್ವಹಿಸಿದ್ದರು. ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕುಲಾಂತರಿ ಸಸ್ಯಗಳ ಕುರಿತಾದ ಸಮೀಕ್ಷಾ ಸಮಿತಿಯ ಸಹ ಅಧ್ಯಕ್ಷರಾಗಿ, ಕೇಂದ್ರ ಪರಿಸರ ಇಲಾಖೆಯ ಕುಲಾಂತರಿ ಕುರಿತಾದ ಸಮಿತಿಯ ಸದಸ್ಯರಾಗಿ ಭಾರತದಲ್ಲಿ ಕುಲಾಂತರಿ ಸಸ್ಯಗಳ ಅಭಿವೃದ್ಧಿ ಬಗ್ಗೆ ಕಾನೂನುಗಳನ್ನು ರೂಪಿಸಲು ಶ್ರಮಿಸಿದ್ದರು.