ಬೆಂಗಳೂರು: ‘ಮಾನವನ ವೈಯಕ್ತಿಕ ಮತ್ತು ಸಾಮಾಜಿಕ ಮನೋಭಾವ ದಿನದಿಂದ ದಿನಕ್ಕೆ ವಿಕಾರಗೊಳ್ಳುತ್ತಿದೆ. ಆದ್ದರಿಂದ ನಮ್ಮ ಸಾಮಾಜಿಕ, ರಾಜಕೀಯ, ಧಾರ್ಮಿಕ, ಆರ್ಥಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆಗಳಿಗೆ ಹುಚ್ಚು ಹಿಡಿದಂತಾಗಿದೆ’ ಎಂದು ಜಾನಪದ ವಿದ್ವಾಂಸ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕದ ಸಹಾಯಕ ರಾಜ್ಯ ಆಯುಕ್ತ ಗೊ.ರು.ಚನ್ನಬಸಪ್ಪ ವಿಷಾದಿಸಿದರು.