<p><strong>ಬೆಂಗಳೂರು:</strong> ‘ಎಸ್ಸಿಎಸ್ಪಿ ಹಾಗೂ ಟಿಎಸ್ಪಿ ಅನುದಾನವನ್ನು ನಿಗದಿತ ಯೋಜನೆಗಳಿಗೆ ಬಳಸಬೇಕು. ಅನುದಾನ ದುರುಪಯೋಗಪಡಿಸಿಕೊಳ್ಳುವ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.</p>.<p>‘ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಅಭಿವೃದ್ದಿಗೆಂದೇ ರೂಪಿಸಿರುವ ಯೋಜನೆ ಅನುದಾನವನ್ನು ಅದೇ ಸಮುದಾಯದವರ ಅಭಿವೃದ್ದಿಗೆ ಬಳಸಬೇಕು. ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಈ ಅನುದಾನ ಬಳಕೆ ಮಾಡಬಾರದು. ದುರ್ಬಳಕೆಗೆ ಕಾರಣವಾಗುತ್ತಿರುವ ಸೆಕ್ಷನ್ ಅನ್ನು ರದ್ದುಪಡಿಸಬೇಕು’ ಎಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಅಧ್ಯಕ್ಷ ಆರ್.ಕೋದಂಡರಾಮ್ ಒತ್ತಾಯಿಸಿದರು.</p>.<p>‘ಸಮಾಜ ಕಲ್ಯಾಣ ಇಲಾಖೆಯ ಕ್ರೈಸ್ ಅಡಿಯ ವಸತಿ ಶಾಲೆಗಳನ್ನು ಕಾಲೇಜುಗಳಾಗಿ ಮೇಲ್ದರ್ಜೆಗೇರಿಸಬೇಕು. ಈ ಶಾಲೆಗಳಲ್ಲಿನ ಅಕ್ರಮಗಳ ಕುರಿತು ತನಿಖೆಯಾಗಬೇಕು. ಕರ್ನಾಟಕದಲ್ಲಿ ದಲಿತರು ಮುಖ್ಯಮಂತ್ರಿಯಾಗಲು ಅವಕಾಶ ಮಾಡಿಕೊಡಬೇಕು’ ಎಂದು ಆಗ್ರಹಿಸಿದರು.</p>.<p>‘ಅಂಬೇಡ್ಕರ್ ಅವರು ರಾಜ್ಯದಲ್ಲಿ ಭೇಟಿ ನೀಡಿದ ಸ್ಥಳಗಳಲ್ಲಿ ಸ್ಮಾರಕ ನಿರ್ಮಾಣಕ್ಕೆ ₹10 ಕೋಟಿ ಹೆಚ್ಚುವರಿ ಅನುದಾನ ನೀಡಬೇಕು. ಬೆಂಗಳೂರು ಅಂತರಾಷ್ಟ್ರಿಯ ವಿಮಾನ ನಿಲ್ದಾಣದ ಬಳಿ ಅತಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಿಸಬೇಕು’ ಎಂದು ಒತ್ತಾಯಿಸಿದರು.</p>.<p>ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಸೇನೆಯ ಎಂ.ಆನಂದಕುಮಾರ್, ಜೆ.ಈ.ಮಂಜುನಾಥ್, ಎಂ.ಕೆ.ಕಾಂತರಾಜ್, ಕಾರ್ಯದರ್ಶಿ ಶರಣು ಎಸ್.ಜಮಖಂಡಿ, ಕಾಶೀನಾಥ್ ನಾಟೇಕರ್, ರಾಜೇಂದ್ರ ಬಾಬು, ಬೆಂಗಳೂರು ನಗರ ಅಧ್ಯಕ್ಷ ಆರ್.ಅನಿಲ್ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಎಸ್ಸಿಎಸ್ಪಿ ಹಾಗೂ ಟಿಎಸ್ಪಿ ಅನುದಾನವನ್ನು ನಿಗದಿತ ಯೋಜನೆಗಳಿಗೆ ಬಳಸಬೇಕು. ಅನುದಾನ ದುರುಪಯೋಗಪಡಿಸಿಕೊಳ್ಳುವ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.</p>.<p>‘ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಅಭಿವೃದ್ದಿಗೆಂದೇ ರೂಪಿಸಿರುವ ಯೋಜನೆ ಅನುದಾನವನ್ನು ಅದೇ ಸಮುದಾಯದವರ ಅಭಿವೃದ್ದಿಗೆ ಬಳಸಬೇಕು. ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಈ ಅನುದಾನ ಬಳಕೆ ಮಾಡಬಾರದು. ದುರ್ಬಳಕೆಗೆ ಕಾರಣವಾಗುತ್ತಿರುವ ಸೆಕ್ಷನ್ ಅನ್ನು ರದ್ದುಪಡಿಸಬೇಕು’ ಎಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಅಧ್ಯಕ್ಷ ಆರ್.ಕೋದಂಡರಾಮ್ ಒತ್ತಾಯಿಸಿದರು.</p>.<p>‘ಸಮಾಜ ಕಲ್ಯಾಣ ಇಲಾಖೆಯ ಕ್ರೈಸ್ ಅಡಿಯ ವಸತಿ ಶಾಲೆಗಳನ್ನು ಕಾಲೇಜುಗಳಾಗಿ ಮೇಲ್ದರ್ಜೆಗೇರಿಸಬೇಕು. ಈ ಶಾಲೆಗಳಲ್ಲಿನ ಅಕ್ರಮಗಳ ಕುರಿತು ತನಿಖೆಯಾಗಬೇಕು. ಕರ್ನಾಟಕದಲ್ಲಿ ದಲಿತರು ಮುಖ್ಯಮಂತ್ರಿಯಾಗಲು ಅವಕಾಶ ಮಾಡಿಕೊಡಬೇಕು’ ಎಂದು ಆಗ್ರಹಿಸಿದರು.</p>.<p>‘ಅಂಬೇಡ್ಕರ್ ಅವರು ರಾಜ್ಯದಲ್ಲಿ ಭೇಟಿ ನೀಡಿದ ಸ್ಥಳಗಳಲ್ಲಿ ಸ್ಮಾರಕ ನಿರ್ಮಾಣಕ್ಕೆ ₹10 ಕೋಟಿ ಹೆಚ್ಚುವರಿ ಅನುದಾನ ನೀಡಬೇಕು. ಬೆಂಗಳೂರು ಅಂತರಾಷ್ಟ್ರಿಯ ವಿಮಾನ ನಿಲ್ದಾಣದ ಬಳಿ ಅತಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಿಸಬೇಕು’ ಎಂದು ಒತ್ತಾಯಿಸಿದರು.</p>.<p>ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಸೇನೆಯ ಎಂ.ಆನಂದಕುಮಾರ್, ಜೆ.ಈ.ಮಂಜುನಾಥ್, ಎಂ.ಕೆ.ಕಾಂತರಾಜ್, ಕಾರ್ಯದರ್ಶಿ ಶರಣು ಎಸ್.ಜಮಖಂಡಿ, ಕಾಶೀನಾಥ್ ನಾಟೇಕರ್, ರಾಜೇಂದ್ರ ಬಾಬು, ಬೆಂಗಳೂರು ನಗರ ಅಧ್ಯಕ್ಷ ಆರ್.ಅನಿಲ್ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>