<p><strong>ಬೆಂಗಳೂರು:</strong> ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್ಸಿಎಸ್ಪಿ) ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆಯ (ಟಿಎಸ್ಪಿ) ₹26 ಸಾವಿರ ಕೋಟಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸುವ ರಾಜ್ಯ ಸರ್ಕಾರದ ನಡೆ ಖಂಡಿಸಿ ಕರ್ನಾಟಕ ಅಹಿಂದ ಸಂಘಟನೆಗಳ ಒಕ್ಕೂಟದ ಸದಸ್ಯರು ಬುಧವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.</p>.<p>ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದಿದ್ದ ಪ್ರತಿಭಟನಕಾರರು ‘ಕಾಂಗ್ರೆಸ್ ಹಠಾವೋ, ದಲಿತ್ ಬಚಾವೋ’, ‘ನಿಮ್ಮ ಗ್ಯಾರಂಟಿಗೆ ನಮ್ಮ ಹಣ ಏಕೆ?’, ‘ದಲಿತ ವಿರೋಧಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ’ ಎಂಬ ಫಲಕಗಳನ್ನು ಪ್ರದರ್ಶಿಸಿದರು.</p>.<p>ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ ಮಾತನಾಡಿ, ‘ಎಸ್ಸಿಎಸ್ಪಿ, ಟಿಸಿಪಿಯ ಅನುದಾನದಲ್ಲಿ ಈವರೆಗೆ ₹2.56 ಲಕ್ಷ ಕೋಟಿ ಅನುದಾನವನ್ನು ಹಿಂದಿನ ಸರ್ಕಾರಗಳು ಅನ್ಯ ಉದ್ದೇಶಕ್ಕೆ ಬಳಸಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. ಈಗ ಅವರ ನೇತೃತ್ವದ ಸರ್ಕಾರವೇ ₹26 ಸಾವಿರ ಕೋಟಿ ವರ್ಗಾವಣೆ ಮಾಡುತ್ತಿದೆ. ಈ ಅನುದಾನ ಯಾವುದಕ್ಕೆ ಬಳಕೆಯಾಗಿದೆ ಎಂಬುದರ ಕುರಿತು ಶ್ವೇತಪತ್ರ ಹೊರಡಿಸಬೇಕು. ಈ ₹3 ಲಕ್ಷ ಕೋಟಿ ಅನುದಾನದಲ್ಲಿ ದಲಿತರಿಗಾಗಿ ಪ್ರತ್ಯೇಕ ಬಜೆಟ್ ಮಂಡಿಸಬೇಕು’ ಎಂದು ಆಗ್ರಹಿಸಿದರು.</p>.<p>‘ಕ್ರಾಂಗೆಸ್ಗೆ ದಲಿತರ ಹಿತ ಮತ್ತು ಏಳಿಗೆ ಬೇಕಾಗಿಲ್ಲ. ಅವರಿಗೆ ನಮ್ಮ ಮತ ಮಾತ್ರ ಬೇಕಾಗಿದೆ. ಆದ್ದರಿಂದ, ನಾವು ನಮ್ಮ ಮತಶಕ್ತಿಯ ಮೂಲಕ ಹೋರಾಡಬೇಕಿದೆ. ಪ್ರಜಾತಾಂತ್ರಿಕವಾಗಿ ಈ ಸರ್ಕಾರವನ್ನು ಕಿತ್ತೊಗೆಯಬೇಕು. ನಮ್ಮ ಹಿತಾಸಕ್ತಿ ಕಾಪಾಡುವ ಪ್ರತ್ಯೇಕ ರಾಜಕೀಯ ಅಸ್ಮಿತೆ ಕಂಡುಕೊಳ್ಳಲು ರಾಜಕೀಯ ಪಕ್ಷ ಕಟ್ಟಬೇಕಿದೆ’ ಎಂದರು.</p>.<p>ಒಕ್ಕೂಟದ ಹರಿರಾಮ್, ಹೈಕೋರ್ಟ್ ವಕೀಲ ಬಾಲನ್, ಎಎಪಿ ಮುಖಂಡ ಮೋಹನ್ ದಾಸರಿ ಭಾಗವಹಿಸಿದ್ದರು.</p>.<h2> ‘ಅಹಿಂದ ಪರಿಕಲ್ಪನೆ ಕಾಂಗ್ರೆಸ್ನದ್ದಲ್ಲ’</h2>.<p> ‘ಅಹಿಂದ ಕಾಂಗ್ರೆಸ್ನ ಪರಿಕಲ್ಪನೆ ಅಲ್ಲ ಇದು ದಲಿತ ಚಳವಳಿಯ ಪರಿಕಲ್ಪನೆ. ಅದನ್ನು ಬಳಸಿಕೊಂಡು ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಅಧಿಕಾರ ಅನುಭವಿಸುವ ಮೂಲಕ ದಲಿತರಿಗೆ ಅನ್ಯಾಯ ಮಾಡುತ್ತಿದ್ದಾರೆ’ ಎಂದು ಕೋಟಿಗಾನಹಳ್ಳಿ ರಾಮಯ್ಯ ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್ಸಿಎಸ್ಪಿ) ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆಯ (ಟಿಎಸ್ಪಿ) ₹26 ಸಾವಿರ ಕೋಟಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸುವ ರಾಜ್ಯ ಸರ್ಕಾರದ ನಡೆ ಖಂಡಿಸಿ ಕರ್ನಾಟಕ ಅಹಿಂದ ಸಂಘಟನೆಗಳ ಒಕ್ಕೂಟದ ಸದಸ್ಯರು ಬುಧವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.</p>.<p>ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದಿದ್ದ ಪ್ರತಿಭಟನಕಾರರು ‘ಕಾಂಗ್ರೆಸ್ ಹಠಾವೋ, ದಲಿತ್ ಬಚಾವೋ’, ‘ನಿಮ್ಮ ಗ್ಯಾರಂಟಿಗೆ ನಮ್ಮ ಹಣ ಏಕೆ?’, ‘ದಲಿತ ವಿರೋಧಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ’ ಎಂಬ ಫಲಕಗಳನ್ನು ಪ್ರದರ್ಶಿಸಿದರು.</p>.<p>ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ ಮಾತನಾಡಿ, ‘ಎಸ್ಸಿಎಸ್ಪಿ, ಟಿಸಿಪಿಯ ಅನುದಾನದಲ್ಲಿ ಈವರೆಗೆ ₹2.56 ಲಕ್ಷ ಕೋಟಿ ಅನುದಾನವನ್ನು ಹಿಂದಿನ ಸರ್ಕಾರಗಳು ಅನ್ಯ ಉದ್ದೇಶಕ್ಕೆ ಬಳಸಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. ಈಗ ಅವರ ನೇತೃತ್ವದ ಸರ್ಕಾರವೇ ₹26 ಸಾವಿರ ಕೋಟಿ ವರ್ಗಾವಣೆ ಮಾಡುತ್ತಿದೆ. ಈ ಅನುದಾನ ಯಾವುದಕ್ಕೆ ಬಳಕೆಯಾಗಿದೆ ಎಂಬುದರ ಕುರಿತು ಶ್ವೇತಪತ್ರ ಹೊರಡಿಸಬೇಕು. ಈ ₹3 ಲಕ್ಷ ಕೋಟಿ ಅನುದಾನದಲ್ಲಿ ದಲಿತರಿಗಾಗಿ ಪ್ರತ್ಯೇಕ ಬಜೆಟ್ ಮಂಡಿಸಬೇಕು’ ಎಂದು ಆಗ್ರಹಿಸಿದರು.</p>.<p>‘ಕ್ರಾಂಗೆಸ್ಗೆ ದಲಿತರ ಹಿತ ಮತ್ತು ಏಳಿಗೆ ಬೇಕಾಗಿಲ್ಲ. ಅವರಿಗೆ ನಮ್ಮ ಮತ ಮಾತ್ರ ಬೇಕಾಗಿದೆ. ಆದ್ದರಿಂದ, ನಾವು ನಮ್ಮ ಮತಶಕ್ತಿಯ ಮೂಲಕ ಹೋರಾಡಬೇಕಿದೆ. ಪ್ರಜಾತಾಂತ್ರಿಕವಾಗಿ ಈ ಸರ್ಕಾರವನ್ನು ಕಿತ್ತೊಗೆಯಬೇಕು. ನಮ್ಮ ಹಿತಾಸಕ್ತಿ ಕಾಪಾಡುವ ಪ್ರತ್ಯೇಕ ರಾಜಕೀಯ ಅಸ್ಮಿತೆ ಕಂಡುಕೊಳ್ಳಲು ರಾಜಕೀಯ ಪಕ್ಷ ಕಟ್ಟಬೇಕಿದೆ’ ಎಂದರು.</p>.<p>ಒಕ್ಕೂಟದ ಹರಿರಾಮ್, ಹೈಕೋರ್ಟ್ ವಕೀಲ ಬಾಲನ್, ಎಎಪಿ ಮುಖಂಡ ಮೋಹನ್ ದಾಸರಿ ಭಾಗವಹಿಸಿದ್ದರು.</p>.<h2> ‘ಅಹಿಂದ ಪರಿಕಲ್ಪನೆ ಕಾಂಗ್ರೆಸ್ನದ್ದಲ್ಲ’</h2>.<p> ‘ಅಹಿಂದ ಕಾಂಗ್ರೆಸ್ನ ಪರಿಕಲ್ಪನೆ ಅಲ್ಲ ಇದು ದಲಿತ ಚಳವಳಿಯ ಪರಿಕಲ್ಪನೆ. ಅದನ್ನು ಬಳಸಿಕೊಂಡು ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಅಧಿಕಾರ ಅನುಭವಿಸುವ ಮೂಲಕ ದಲಿತರಿಗೆ ಅನ್ಯಾಯ ಮಾಡುತ್ತಿದ್ದಾರೆ’ ಎಂದು ಕೋಟಿಗಾನಹಳ್ಳಿ ರಾಮಯ್ಯ ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>