ಬೆಂಗಳೂರು: ‘ಬ್ರಾಹ್ಮಣ ಸಮುದಾಯದವರು ಬಡವರಲ್ಲವೇ? ಅವರ ಮಕ್ಕಳು ದೇವಸ್ಥಾನಗಳ ಮುಂದೆ, ರಸ್ತೆ– ರಸ್ತೆಗಳಲ್ಲಿ ಭಿಕ್ಷೆ ಬೇಡುತ್ತಿದ್ದಾರಲ್ಲವೇ, ಅವರಿಗೆ ಅಭಿವೃದ್ಧಿ ನಿಗಮ ಬೇಕು; ಆದರೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಲ್ಲಿರುವ ಅಲೆಮಾರಿ ಸಮುದಾಯಗಳಿಗೆ ನಿಗಮ ಬೇಡ ಅಲ್ಲವೇ’ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಎಸ್. ಶಿವಣ್ಣ ಅವರು ತೀಕ್ಷ್ಣವಾಗಿ ಪ್ರಶ್ನಿಸಿದರು.