ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ.ರಾಜೀವ,‘ಪರಿಶಿಷ್ಟ ಜಾತಿ ಮೀಸಲಾತಿಯನ್ನು ಶೇ 15ರಿಂದ ಶೇ 19ಕ್ಕೆ ಹೆಚ್ಚಿಸಬೇಕು. ಲಂಬಾಣಿ ಸಮುದಾಯ ಅಭಿವೃದ್ಧಿಯಿಂದ ಹಿಂದುಳಿದಿದೆ. ರಾಜ್ಯದಲ್ಲಿ 3,300 ತಾಂಡಾಗಳಿದ್ದು, 2,750 ತಾಂಡಗಳು ಇಂದಿಗೂ ಕಂದಾಯ ಗ್ರಾಮಗಳಾಗಿಲ್ಲ. ಅವರಿಗೆ ಇಂದಿಗೂ ಹಕ್ಕುಪತ್ರಗಳು ಸಿಕ್ಕಿಲ್ಲ. ಸರ್ಕಾರಿ ಹಾಗೂ ಖಾಸಗಿ ಭೂಮಿಗಳಲ್ಲಿ ಬದುಕುತ್ತಿದ್ದಾರೆ’ ಎಂದರು.
ಲೇಖಕಿ ಬಿ.ಟಿ.ಲಲಿತಾ ನಾಯಕ್, ‘ಕಳೆದ 70 ವರ್ಷಗಳಲ್ಲಿ ಲಂಬಾಣಿ ಸಮುದಾಯದಲ್ಲಿ ಒಬ್ಬರು ಮಾತ್ರ ಸಂಸದರಾಗಿದ್ದಾರೆ. ಉನ್ನತ ಉದ್ಯೋಗಗಳಲ್ಲಿ ಯಾರೂ ಇಲ್ಲದಿರುವುದರಿಂದ ಮೀಸಲಾತಿಯನ್ನು ಹೆಚ್ಚಿಸುವ ಅಗತ್ಯವಿದೆ’ ಎಂದರು.