<p><strong>ಬೆಂಗಳೂರು:</strong> ‘ಬರ ನಿರ್ವಹಣೆ ಹಾಗೂ ಪರಿಹಾರ ಕಾಮಗಾರಿ ಕೈಗೊಳ್ಳುವ ದಿಸೆ ಯಲ್ಲಿ ರಾಜ್ಯ ಸರ್ಕಾರ ವಿಪತ್ತು ಉಪಶಮನ ನಿಧಿ (ಎಸ್ಡಿಎಂಎ-) ಸ್ಥಾಪನೆ ಮಾಡಿಲ್ಲ’ ಎಂದು ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.</p>.<p>ಈ ಕುರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ಹಾಗೂ ನ್ಯಾಯ ಮೂರ್ತಿ ಎಚ್.ಟಿ.ನರೇಂದ್ರ ಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ಅರ್ಜಿದಾರ ಮಲ್ಲಿಕಾರ್ಜುನ ವಾದ ಮಂಡಿಸಿ, ‘163 ತಾಲ್ಲೂಕುಗಳಲ್ಲಿ ಬರ ಮುಂದುವರಿದಿದೆ. ಗೋಶಾಲೆಗಳಲ್ಲಿ ನೀಡುತ್ತಿರುವ ಮೇವು ಪೌಷ್ಟಿಕವಾಗಿಲ್ಲ’ ಎಂದು ಆಕ್ಷೇಪಿಸಿದರು.</p>.<p>ವಿಚಾರಣೆ ಮುಕ್ತಾಯಗೊಳಿಸಿ ಮಧ್ಯಂತರ ಆದೇಶದ ಉಕ್ತಲೇಖನ ಆರಂಭಿಸಿದ ನ್ಯಾಯಪೀಠ, ‘ನಿಧಿ ಸ್ಥಾಪನೆ ಗಾಗಿ ರೂಪಿಸಲಾದ ಉಪನಿಯಮ 2007ರಲ್ಲಿ ಜಾರಿಗೆ ಬಂದಿದೆ. ಆದರೆ ಕಳೆದ 12 ವರ್ಷಗಳಿಂದ ನಿಧಿ ಸ್ಥಾಪನೆ ಮಾಡಿಲ್ಲ ಎಂಬ ಅಂಶ ಸಮರ್ಥನೀಯವಲ್ಲ’ ಎಂಬ ಅಭಿಪ್ರಾಯವನ್ನು ಮೌಖಿಕವಾಗಿ ವ್ಯಕ್ತಪಡಿಸಿತು.</p>.<p>ಆದೇಶದ ಉಕ್ತಲೇಖನ ಅಪೂರ್ಣ ಗೊಂಡಿದ್ದು, ಇದೇ 22ರಂದು ಮುಂದು ವರಿಯಲಿದೆ.</p>.<p>‘ರಾಜ್ಯದ ಬರಪೀಡಿತ ಪ್ರದೇಶಗಳಲ್ಲಿ ಗೋಶಾಲೆ ಮತ್ತು ಮೇವು ವ್ಯವಸ್ಥೆ ಮಾಡುವಂತೆ ನಿರ್ದೇಶಿಸಬೇಕು’ ಎಂದು ಕೋರಿ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಚೇಳೂರು ಗ್ರಾಮದ ಎ.ಮಲ್ಲಿಕಾರ್ಜುನ ಹಾಗೂ ಸಾರ್ವಜನಿಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಸಲ್ಲಿಸಿರುವ ಅರ್ಜಿ ಇದಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಬರ ನಿರ್ವಹಣೆ ಹಾಗೂ ಪರಿಹಾರ ಕಾಮಗಾರಿ ಕೈಗೊಳ್ಳುವ ದಿಸೆ ಯಲ್ಲಿ ರಾಜ್ಯ ಸರ್ಕಾರ ವಿಪತ್ತು ಉಪಶಮನ ನಿಧಿ (ಎಸ್ಡಿಎಂಎ-) ಸ್ಥಾಪನೆ ಮಾಡಿಲ್ಲ’ ಎಂದು ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.</p>.<p>ಈ ಕುರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ಹಾಗೂ ನ್ಯಾಯ ಮೂರ್ತಿ ಎಚ್.ಟಿ.ನರೇಂದ್ರ ಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ಅರ್ಜಿದಾರ ಮಲ್ಲಿಕಾರ್ಜುನ ವಾದ ಮಂಡಿಸಿ, ‘163 ತಾಲ್ಲೂಕುಗಳಲ್ಲಿ ಬರ ಮುಂದುವರಿದಿದೆ. ಗೋಶಾಲೆಗಳಲ್ಲಿ ನೀಡುತ್ತಿರುವ ಮೇವು ಪೌಷ್ಟಿಕವಾಗಿಲ್ಲ’ ಎಂದು ಆಕ್ಷೇಪಿಸಿದರು.</p>.<p>ವಿಚಾರಣೆ ಮುಕ್ತಾಯಗೊಳಿಸಿ ಮಧ್ಯಂತರ ಆದೇಶದ ಉಕ್ತಲೇಖನ ಆರಂಭಿಸಿದ ನ್ಯಾಯಪೀಠ, ‘ನಿಧಿ ಸ್ಥಾಪನೆ ಗಾಗಿ ರೂಪಿಸಲಾದ ಉಪನಿಯಮ 2007ರಲ್ಲಿ ಜಾರಿಗೆ ಬಂದಿದೆ. ಆದರೆ ಕಳೆದ 12 ವರ್ಷಗಳಿಂದ ನಿಧಿ ಸ್ಥಾಪನೆ ಮಾಡಿಲ್ಲ ಎಂಬ ಅಂಶ ಸಮರ್ಥನೀಯವಲ್ಲ’ ಎಂಬ ಅಭಿಪ್ರಾಯವನ್ನು ಮೌಖಿಕವಾಗಿ ವ್ಯಕ್ತಪಡಿಸಿತು.</p>.<p>ಆದೇಶದ ಉಕ್ತಲೇಖನ ಅಪೂರ್ಣ ಗೊಂಡಿದ್ದು, ಇದೇ 22ರಂದು ಮುಂದು ವರಿಯಲಿದೆ.</p>.<p>‘ರಾಜ್ಯದ ಬರಪೀಡಿತ ಪ್ರದೇಶಗಳಲ್ಲಿ ಗೋಶಾಲೆ ಮತ್ತು ಮೇವು ವ್ಯವಸ್ಥೆ ಮಾಡುವಂತೆ ನಿರ್ದೇಶಿಸಬೇಕು’ ಎಂದು ಕೋರಿ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಚೇಳೂರು ಗ್ರಾಮದ ಎ.ಮಲ್ಲಿಕಾರ್ಜುನ ಹಾಗೂ ಸಾರ್ವಜನಿಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಸಲ್ಲಿಸಿರುವ ಅರ್ಜಿ ಇದಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>