ಸಭೆಯಲ್ಲಿ ಮಾತನಾಡಿದ ಸಂಘಟನೆಯರಾಜ್ಯ ಘಟಕದ ಅಧ್ಯಕ್ಷ ಇಲ್ಯಾಜ್ ಮಹಮ್ಮದ್, ‘ಸರೋಜಿನಿ ಮಹಿಷಿ ವರದಿಶಿಫಾರಸ್ಸಿನ ಅನುಷ್ಠಾನದಲ್ಲಿ ಸರ್ಕಾರಗಳು ಹಿಂದೆ ಬಿದ್ದಿವೆ. ಹೊರ ರಾಜ್ಯಗಳಿಂದ ಬಂದವರು ರಾಜ್ಯದಲ್ಲಿ ಉದ್ಯಮ ಸ್ಥಾಪಿಸಿ, ಕನ್ನಡಿಗರನ್ನು ಕಡೆಗಣಿಸುತ್ತಿದ್ದಾರೆ. ಸರ್ಕಾರ ಕೂಡಲೇ ವರದಿ ಜಾರಿ ಮಾಡಬೇಕು’ ಎಂದು ಒತ್ತಾಯಿಸಿದರು.