<p><strong>ಬೆಂಗಳೂರು:</strong> ಎಸ್ಡಿಪಿಐ ನಗರದಲ್ಲಿ ಆಯೋಜಿಸಿರುವ ಸಮಾವೇಶಕ್ಕೆ ಅನುಮತಿ ನೀಡಬಾರದು ಎಂದು ಶಾಸಕ ಬಿ.ಆರ್. ಪಾಟೀಲ್ ಆಗ್ರಹಿಸಿದ್ದಾರೆ. <br><br>‘ಎಸ್ಡಿಪಿಐ ಕೋಮುವಾದಿಯಾಗಿದ್ದು ಸಮಾಜದಲ್ಲಿ ಸಾಮರಸ್ಯವನ್ನು ಕೆಡಿಸುತ್ತಾ ಬಂದಿದೆ. ಅದರ ಸಿದ್ಧಾಂತವು ಸಾರ್ವಜನಿಕ ಹಿತಾಸಕ್ತಿಗೆ ಪೂರಕವಾಗಿಲ್ಲ. ಬಿಜೆಪಿ ಹಾಗೂ ಆರ್ಎಸ್ಎಸ್ ಸಿದ್ದಾಂತವನ್ನು ವಿರೋಧ ಮಾಡುವ ನಾವು, ಎಸ್ಡಿಪಿಐ ಸಿದ್ಧಾಂತವನ್ನೂ ವಿರೋಧಿಸುತ್ತೇವೆ’ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<p>‘ಈ ಎರಡೂ ಕೋಮುವಾದಿ ಗುಂಪುಗಳು ಸಮಾಜದಲ್ಲಿನ ಶಾಂತಿಯನ್ನು ಕದಡುತ್ತಲೇ ಇವೆ. ಹಾಗಾಗಿ ಸಮಾವೇಶಕ್ಕೆ ಅನುಮತಿ ನೀಡಬಾರದು ಎಂದು ಗೃಹ ಸಚಿವ ಜಿ. ಪರಮೇಶ್ವರ ಅವರನ್ನು ಒತ್ತಾಯಿಸಿದ್ದಾರೆ.</p>.<p>ವಿಧಾನ ಪರಿಷತ್ನ ಮಾಜಿ ಸದಸ್ಯ ಮೋಹನ್ ಕುಮಾರ್ ಕೊಂಡಜ್ಜಿ, ನಾಗೇಶ್ ಅರಳಕುಪ್ಪೆ, ದಯಾನಂದ್. ಶ್ರೀಕಂಠ ಮೂರ್ತಿ, ಜಿ.ವಿ.ಸುಂದರ್, ಪ್ರಕಾಶ್ ಕಮ್ಮರಡಿ, ಆಲಿಬಾಬಾ ಅವರು ಈ ಪತ್ರಕ್ಕೆ ಸಹಿ ಹಾಕಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಎಸ್ಡಿಪಿಐ ನಗರದಲ್ಲಿ ಆಯೋಜಿಸಿರುವ ಸಮಾವೇಶಕ್ಕೆ ಅನುಮತಿ ನೀಡಬಾರದು ಎಂದು ಶಾಸಕ ಬಿ.ಆರ್. ಪಾಟೀಲ್ ಆಗ್ರಹಿಸಿದ್ದಾರೆ. <br><br>‘ಎಸ್ಡಿಪಿಐ ಕೋಮುವಾದಿಯಾಗಿದ್ದು ಸಮಾಜದಲ್ಲಿ ಸಾಮರಸ್ಯವನ್ನು ಕೆಡಿಸುತ್ತಾ ಬಂದಿದೆ. ಅದರ ಸಿದ್ಧಾಂತವು ಸಾರ್ವಜನಿಕ ಹಿತಾಸಕ್ತಿಗೆ ಪೂರಕವಾಗಿಲ್ಲ. ಬಿಜೆಪಿ ಹಾಗೂ ಆರ್ಎಸ್ಎಸ್ ಸಿದ್ದಾಂತವನ್ನು ವಿರೋಧ ಮಾಡುವ ನಾವು, ಎಸ್ಡಿಪಿಐ ಸಿದ್ಧಾಂತವನ್ನೂ ವಿರೋಧಿಸುತ್ತೇವೆ’ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<p>‘ಈ ಎರಡೂ ಕೋಮುವಾದಿ ಗುಂಪುಗಳು ಸಮಾಜದಲ್ಲಿನ ಶಾಂತಿಯನ್ನು ಕದಡುತ್ತಲೇ ಇವೆ. ಹಾಗಾಗಿ ಸಮಾವೇಶಕ್ಕೆ ಅನುಮತಿ ನೀಡಬಾರದು ಎಂದು ಗೃಹ ಸಚಿವ ಜಿ. ಪರಮೇಶ್ವರ ಅವರನ್ನು ಒತ್ತಾಯಿಸಿದ್ದಾರೆ.</p>.<p>ವಿಧಾನ ಪರಿಷತ್ನ ಮಾಜಿ ಸದಸ್ಯ ಮೋಹನ್ ಕುಮಾರ್ ಕೊಂಡಜ್ಜಿ, ನಾಗೇಶ್ ಅರಳಕುಪ್ಪೆ, ದಯಾನಂದ್. ಶ್ರೀಕಂಠ ಮೂರ್ತಿ, ಜಿ.ವಿ.ಸುಂದರ್, ಪ್ರಕಾಶ್ ಕಮ್ಮರಡಿ, ಆಲಿಬಾಬಾ ಅವರು ಈ ಪತ್ರಕ್ಕೆ ಸಹಿ ಹಾಕಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>