<p><strong>ಬೆಂಗಳೂರು:</strong> ಸೀ ಸ್ಕೌಟ್ಸ್ ಆಂಡ್ ಗೈಡ್ಸ್ ಮಕ್ಕಳಲ್ಲಿ ಶಿಸ್ತು, ಸೇವಾಭಾವ, ಜವಾಬ್ದಾರಿ, ನೌಕದಳ ಹಾಗೂ ನಾಯಕತ್ವದ ಗುಣ ಬೆಳೆಸಲಿದ್ದು, ಯುವಕರು ಹೆಚ್ಚೆಚ್ಚು, ಸೀ ಸ್ಕೌಟ್ಸ್ ಆಂಡ್ ಗೈಡ್ಸ್ನಲ್ಲಿ ತೊಡಗಿಸಿಕೊಳ್ಳಬೇಕು ಎಂದು ನಿವೃತ್ತ ನೌಕಾಪಡೆಯ ಅಧಿಕಾರಿ ಕ್ಯಾಪ್ಟನ್ ಡಾ. ಉದಯ್ ಚಂದ್ ಕೊಂಡತ್ ಹೇಳಿದರು.</p><p>ನೌಕಾದಳ ದಿನಾಚರಣೆ ಅಂಗವಾಗಿ ರೆಜೆನ್ಸಿ ಪಬ್ಲಿಕ್ ಶಾಲೆಯ "ಸೀ ಸ್ಕೌಟ್ಸ್ ಅಂಡ್ ಗೈಡ್ಸ್ ಆಫ್ ಇಂಡಿಯಾ" –ಬೆಂಗಳೂರು ವಿಭಾಗದ ಮಕ್ಕಳಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.</p><p>ಸೀ ಸ್ಕೌಟ್ಸ್ ಆಂಡ್ ಗೈಡ್ಸ್ ಎಂದರೆ ಸಮುದ್ರ ಸಂಬಂಧಿತ ಚಟುವಟಿಕೆಗಳನ್ನು ಒಳಗೊಂಡಿರುವ ಸ್ಕೌಟ್ಸ್ ಆಂಡ್ ಗೈಡ್ಸ್ ವಿಭಾಗವಾಗಿದ್ದು, ಇದು ಯುವಕರಲ್ಲಿ ಶಿಸ್ತು, ಜವಾಬ್ದಾರಿ ಮತ್ತು ನಾಯಕತ್ವವನ್ನು ಬೆಳೆಸಲಿದೆ, ಅಷ್ಟೆ ಅಲ್ಲದೆ, ಸಮುದ್ರಯಾನ, ಹಡಗು ನಡೆಸುವಿಕೆ ಮತ್ತು ನಾವಿಕ ಕಲೆಗಳಂತಹ ಚಟುವಟಿಕೆಗಳನ್ನು ಕಲಿಸಲಿದೆ. ಭಾರತದಲ್ಲಿ, ಈ ಸಂಘಟನೆಯು ರಾಷ್ಟ್ರೀಯ ಮಟ್ಟದಲ್ಲಿ ಮತ್ತು ಕರ್ನಾಟಕ ರಾಜ್ಯದಲ್ಲಿ ತನ್ನ ಕಾರ್ಯಚಟುವಟಿಕೆಗಳನ್ನು ನಡೆಸುತ್ತ ಬಂದಿದೆ. ನೌಕಾ, ವಾಯು ಪಡೆಯಂತೆ ಸೀ ಸ್ಕೌಂಟ್ಸ್ ಅಂಡ್ ಗೈಡ್ಸ್ ಕೂಡ ಅತಿ ಅವಶ್ಯಕವಾಗಿದ್ದು, ಸಮುದ್ರಯಾನ ನೌಕೆಯು ನಮ್ಮ ದೇಶದ ರಕ್ಷಣೆಯಲ್ಲಿ ಪ್ರಮುಖಸ್ಥಾನ ವಹಿಸಲಿದೆ ಎಂದು ಹೇಳಿದರು.</p><p>ಕರ್ನಾಟಕದಲ್ಲಿಯೂ ಹೆಚ್ಚಿನ ವಿದ್ಯಾರ್ಥಿಗಳು ಈ ತರಬೇತಿಯಲ್ಲಿ ಭಾಗವಹಿಸಿ, ದೇಶದ ಉತ್ತಮ ಹಾಗೂ ಜವಾಬ್ದಾರಿಯುತ ನಾಗರಿಕರಾಗಿ ಬೆಳೆಯುವಂತೆ ಹಿತವಚನ ನೀಡಿದರು. ನೌಕಾದಳದಲ್ಲಿ ವಿದ್ಯಾರ್ಥಿಗಳಿಗೆ ಭವಿಷ್ಯದ ಅಪಾರ ಅವಕಾಶಗಳು ಲಭ್ಯವಿದ್ದು, ಕರ್ನಾಟಕದ ಶಾಲೆಗಳು ಈ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕೆಂದು ಅವರು ಕಿವಿ ಮಾತು ಹೇಳಿದರು.</p><p>ಸೀ ಸ್ಕೌಟ್ಸ್ ಆಂಡ್ ಗೈಡ್ಸ್ ಆಫ್ ಇಂಡಿಯಾ ಬೆಂಗಳೂರು ವಿಭಾಗದವತಿಯಿಂದ ಕ್ಯಾಪ್ಟನ್ ಸೂಪರಿಂಟೆಂಡೆಂಟ್ ಮತ್ತು ಸೀ ಸ್ಕೌಟ್ಸ್ ಅಂಡ್ ಗೈಡ್ಸ್ ಇಂಡಿಯಾ ಸಂಸ್ಥಾಪಕರಾದ ಗೋಪಿಶೆಟ್ಟಿರವರ ಮಾರ್ಗದರ್ಶನದಲ್ಲಿ ಆಚರಿಸಲಾಯಿತು.</p><p>ಕರ್ನಾಟಕದಲ್ಲಿಯೂ ಸೀ ಸ್ಕೌಟ್ಸ್ ಆಂಡ್ ಗೈಡ್ಸ್ಗೆ ಹೆಚ್ಚಿನ ಪ್ರೋತ್ಸಾಹ ಸಿಗಬೇಕು, ಮಕ್ಕಳೂ ನೌಕಾಪಡೆಗೆ ಸೇರ್ಪಡೆಯುವ ಮೂಲಕ ದೇಶ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.</p><p>ಕಾರ್ಯಕ್ರಮದಲ್ಲಿ ಬಿಪ್ಯಾಕ್ ಕಾರ್ಯಕ್ರಮದ ಉಸ್ತುವಾರಿ ರಾಘವೇಂದ್ರ ಪೂಜಾರಿ, ಗೀತಾ ಚಂದ್ರಶೇಖರ್ (ಮಿಡ್ ಶಿಪ್ಮೆಂಟ್, ಸಿ ಸ್ಕೌಟ್ಸ್ ಅಂಡ್ ಗೈಡ್ಸ್), ಪ್ರಾಂಶುಪಾಲೆ ರಮಾ ಕಾರ್ತಿಕ್, ಶಿಕ್ಷಕರಾದ ದೀಪಿಕಾ, ಕ್ರಿಪಾ ಡಿ. ಶಾ, ಕೋಕಿಲ, ಮತ್ತಿತತರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸೀ ಸ್ಕೌಟ್ಸ್ ಆಂಡ್ ಗೈಡ್ಸ್ ಮಕ್ಕಳಲ್ಲಿ ಶಿಸ್ತು, ಸೇವಾಭಾವ, ಜವಾಬ್ದಾರಿ, ನೌಕದಳ ಹಾಗೂ ನಾಯಕತ್ವದ ಗುಣ ಬೆಳೆಸಲಿದ್ದು, ಯುವಕರು ಹೆಚ್ಚೆಚ್ಚು, ಸೀ ಸ್ಕೌಟ್ಸ್ ಆಂಡ್ ಗೈಡ್ಸ್ನಲ್ಲಿ ತೊಡಗಿಸಿಕೊಳ್ಳಬೇಕು ಎಂದು ನಿವೃತ್ತ ನೌಕಾಪಡೆಯ ಅಧಿಕಾರಿ ಕ್ಯಾಪ್ಟನ್ ಡಾ. ಉದಯ್ ಚಂದ್ ಕೊಂಡತ್ ಹೇಳಿದರು.</p><p>ನೌಕಾದಳ ದಿನಾಚರಣೆ ಅಂಗವಾಗಿ ರೆಜೆನ್ಸಿ ಪಬ್ಲಿಕ್ ಶಾಲೆಯ "ಸೀ ಸ್ಕೌಟ್ಸ್ ಅಂಡ್ ಗೈಡ್ಸ್ ಆಫ್ ಇಂಡಿಯಾ" –ಬೆಂಗಳೂರು ವಿಭಾಗದ ಮಕ್ಕಳಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.</p><p>ಸೀ ಸ್ಕೌಟ್ಸ್ ಆಂಡ್ ಗೈಡ್ಸ್ ಎಂದರೆ ಸಮುದ್ರ ಸಂಬಂಧಿತ ಚಟುವಟಿಕೆಗಳನ್ನು ಒಳಗೊಂಡಿರುವ ಸ್ಕೌಟ್ಸ್ ಆಂಡ್ ಗೈಡ್ಸ್ ವಿಭಾಗವಾಗಿದ್ದು, ಇದು ಯುವಕರಲ್ಲಿ ಶಿಸ್ತು, ಜವಾಬ್ದಾರಿ ಮತ್ತು ನಾಯಕತ್ವವನ್ನು ಬೆಳೆಸಲಿದೆ, ಅಷ್ಟೆ ಅಲ್ಲದೆ, ಸಮುದ್ರಯಾನ, ಹಡಗು ನಡೆಸುವಿಕೆ ಮತ್ತು ನಾವಿಕ ಕಲೆಗಳಂತಹ ಚಟುವಟಿಕೆಗಳನ್ನು ಕಲಿಸಲಿದೆ. ಭಾರತದಲ್ಲಿ, ಈ ಸಂಘಟನೆಯು ರಾಷ್ಟ್ರೀಯ ಮಟ್ಟದಲ್ಲಿ ಮತ್ತು ಕರ್ನಾಟಕ ರಾಜ್ಯದಲ್ಲಿ ತನ್ನ ಕಾರ್ಯಚಟುವಟಿಕೆಗಳನ್ನು ನಡೆಸುತ್ತ ಬಂದಿದೆ. ನೌಕಾ, ವಾಯು ಪಡೆಯಂತೆ ಸೀ ಸ್ಕೌಂಟ್ಸ್ ಅಂಡ್ ಗೈಡ್ಸ್ ಕೂಡ ಅತಿ ಅವಶ್ಯಕವಾಗಿದ್ದು, ಸಮುದ್ರಯಾನ ನೌಕೆಯು ನಮ್ಮ ದೇಶದ ರಕ್ಷಣೆಯಲ್ಲಿ ಪ್ರಮುಖಸ್ಥಾನ ವಹಿಸಲಿದೆ ಎಂದು ಹೇಳಿದರು.</p><p>ಕರ್ನಾಟಕದಲ್ಲಿಯೂ ಹೆಚ್ಚಿನ ವಿದ್ಯಾರ್ಥಿಗಳು ಈ ತರಬೇತಿಯಲ್ಲಿ ಭಾಗವಹಿಸಿ, ದೇಶದ ಉತ್ತಮ ಹಾಗೂ ಜವಾಬ್ದಾರಿಯುತ ನಾಗರಿಕರಾಗಿ ಬೆಳೆಯುವಂತೆ ಹಿತವಚನ ನೀಡಿದರು. ನೌಕಾದಳದಲ್ಲಿ ವಿದ್ಯಾರ್ಥಿಗಳಿಗೆ ಭವಿಷ್ಯದ ಅಪಾರ ಅವಕಾಶಗಳು ಲಭ್ಯವಿದ್ದು, ಕರ್ನಾಟಕದ ಶಾಲೆಗಳು ಈ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕೆಂದು ಅವರು ಕಿವಿ ಮಾತು ಹೇಳಿದರು.</p><p>ಸೀ ಸ್ಕೌಟ್ಸ್ ಆಂಡ್ ಗೈಡ್ಸ್ ಆಫ್ ಇಂಡಿಯಾ ಬೆಂಗಳೂರು ವಿಭಾಗದವತಿಯಿಂದ ಕ್ಯಾಪ್ಟನ್ ಸೂಪರಿಂಟೆಂಡೆಂಟ್ ಮತ್ತು ಸೀ ಸ್ಕೌಟ್ಸ್ ಅಂಡ್ ಗೈಡ್ಸ್ ಇಂಡಿಯಾ ಸಂಸ್ಥಾಪಕರಾದ ಗೋಪಿಶೆಟ್ಟಿರವರ ಮಾರ್ಗದರ್ಶನದಲ್ಲಿ ಆಚರಿಸಲಾಯಿತು.</p><p>ಕರ್ನಾಟಕದಲ್ಲಿಯೂ ಸೀ ಸ್ಕೌಟ್ಸ್ ಆಂಡ್ ಗೈಡ್ಸ್ಗೆ ಹೆಚ್ಚಿನ ಪ್ರೋತ್ಸಾಹ ಸಿಗಬೇಕು, ಮಕ್ಕಳೂ ನೌಕಾಪಡೆಗೆ ಸೇರ್ಪಡೆಯುವ ಮೂಲಕ ದೇಶ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.</p><p>ಕಾರ್ಯಕ್ರಮದಲ್ಲಿ ಬಿಪ್ಯಾಕ್ ಕಾರ್ಯಕ್ರಮದ ಉಸ್ತುವಾರಿ ರಾಘವೇಂದ್ರ ಪೂಜಾರಿ, ಗೀತಾ ಚಂದ್ರಶೇಖರ್ (ಮಿಡ್ ಶಿಪ್ಮೆಂಟ್, ಸಿ ಸ್ಕೌಟ್ಸ್ ಅಂಡ್ ಗೈಡ್ಸ್), ಪ್ರಾಂಶುಪಾಲೆ ರಮಾ ಕಾರ್ತಿಕ್, ಶಿಕ್ಷಕರಾದ ದೀಪಿಕಾ, ಕ್ರಿಪಾ ಡಿ. ಶಾ, ಕೋಕಿಲ, ಮತ್ತಿತತರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>