ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾದರಾಯನಪುರದಲ್ಲಿ ನಿಷೇಧಾಜ್ಞೆ ಜಾರಿ

Last Updated 7 ಜೂನ್ 2020, 20:52 IST
ಅಕ್ಷರ ಗಾತ್ರ

ಬೆಂಗಳೂರು: ಕಾರ್ಪೋರೇಟರ್ ಇಮ್ರಾನ್ ಪಾಷಾ ಅವರನ್ನು ಪೊಲೀಸರು ವಶಕ್ಕೆ ಪಡೆದ ಬೆನ್ನಲ್ಲೇ ಪಾದರಾಯನಪುರದಲ್ಲಿ ಸೆಕ್ಷನ್ 144ರಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಪಾದರಾಯನಪುರಕ್ಕೆ ಭಾನುವಾರ ಸಂಜೆ ಭೇಟಿ ನೀಡಿದ್ದ ಭಾಸ್ಕರ್ ರಾವ್, ಮೆರವಣಿಗೆ ಹಾಗೂ ಅದನ್ನು ಸಂಘಟಿಸಿದ್ದವರ ಬಗ್ಗೆ ಮಾಹಿತಿ ಪಡೆದುಕೊಂಡರು.

ಸುದ್ದಿಗಾರರ ಜೊತೆ ಮಾತನಾಡಿದ ಭಾಸ್ಕರ್ ರಾವ್, ‘ಮೆರವಣಿಗೆ ಮಾಡಿರುವುದು ತಪ್ಪು‌. ಇದು ಬೇಜವಾಬ್ದಾರಿ ನಡೆ. ಈಗಾಗಲೇ ಕಾರ್ಪೊರೇಟರ್‌ ಅವರನ್ನು ವಶಕ್ಕೆ ಪಡೆಯಲಾಗಿದೆ. ಪೊಲೀಸರ ಲೋಪವಿದ್ದರೆ ಅವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು. ಸದ್ಯ ಮುಂಜಾಗ್ರತಾ ಕ್ರಮವಾಗಿ ಜಗಜೀವನರಾಮ್ ನಗರ ಠಾಣೆ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT