<p><strong>ಬೆಂಗಳೂರು</strong>: ವಿಕೋಪ ಪರಿಸ್ಥಿತಿ ಎದುರಿಸಲು ಬೇಕಾದ ಸಿದ್ಧತೆ ಮತ್ತು ಅದನ್ನು ನಿರ್ವಹಿಸುವುದಕ್ಕೆ ಬೇಕಾದ ಕ್ರಮಗಳು ಕುರಿತು ನಗರದ ದಯಾನಂದ ಸಾಗರ ಕಾಲೇಜಿನಲ್ಲಿ ಶುಕ್ರವಾರ (ಫೆ.19) ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ.</p>.<p>ಕೋವಿಡ್ ನಿರ್ವಹಣೆ ಮತ್ತು ಇಂತಹ ವಿಕೋಪಗಳನ್ನು ಎದುರಿಸಲು ಬೇಕಾದ ಕ್ರಮಗಳ ಬಗ್ಗೆ ಚರ್ಚೆ, ಉಪನ್ಯಾಸ ನಡೆಯಲಿದೆ. ಕಾಲೇಜಿನ ಸಿವಿಲ್ ಎಂಜಿನಿಯರಿಂಗ್ ವಿಭಾಗದಿಂದ ಹಮ್ಮಿಕೊಂಡಿರುವ ಈ ವಿಚಾರ ಸಂಕಿರಣವನ್ನು ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಮುಖ್ಯಸ್ಥ ಡಾ. ಎಂ.ಕೆ. ಸುದರ್ಶನ್ ಉದ್ಘಾಟಿಸಲಿದ್ದಾರೆ. ಐಐಟಿ ಗುವಾಹಟಿಯ ಡಾ. ಟಿ.ಜಿ. ಸೀತಾರಾಮನ್ ಮುಖ್ಯ ಭಾಷಣ ಮಾಡಲಿದ್ದು, ಇಂಡಿಯನ್ ವಾಟರ್ ವರ್ಕ್ಸ್ ಅಸೋಸಿಯೇಷನ್ನ ಬೆಂಗಳೂರು ಕೇಂದ್ರದ ಮುಖ್ಯಸ್ಥ ಬಿ.ಶ್ರೀನಿವಾಸ ರೆಡ್ಡಿ ಉಪನ್ಯಾಸ ನೀಡಲಿದ್ದಾರೆ.</p>.<p>ತಜ್ಞರಾದ ಡಾ.ವಿ.ಎಸ್. ಪ್ರಕಾಶ್, ಡಾ. ಜಿ.ಎನ್. ನಾಗೇಶ್ ಮತ್ತಿತರರು ವಿಚಾರಗೋಷ್ಠಿಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯ ಡಾ.ಸಿ.ಪಿ.ಎಸ್. ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವಿಕೋಪ ಪರಿಸ್ಥಿತಿ ಎದುರಿಸಲು ಬೇಕಾದ ಸಿದ್ಧತೆ ಮತ್ತು ಅದನ್ನು ನಿರ್ವಹಿಸುವುದಕ್ಕೆ ಬೇಕಾದ ಕ್ರಮಗಳು ಕುರಿತು ನಗರದ ದಯಾನಂದ ಸಾಗರ ಕಾಲೇಜಿನಲ್ಲಿ ಶುಕ್ರವಾರ (ಫೆ.19) ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ.</p>.<p>ಕೋವಿಡ್ ನಿರ್ವಹಣೆ ಮತ್ತು ಇಂತಹ ವಿಕೋಪಗಳನ್ನು ಎದುರಿಸಲು ಬೇಕಾದ ಕ್ರಮಗಳ ಬಗ್ಗೆ ಚರ್ಚೆ, ಉಪನ್ಯಾಸ ನಡೆಯಲಿದೆ. ಕಾಲೇಜಿನ ಸಿವಿಲ್ ಎಂಜಿನಿಯರಿಂಗ್ ವಿಭಾಗದಿಂದ ಹಮ್ಮಿಕೊಂಡಿರುವ ಈ ವಿಚಾರ ಸಂಕಿರಣವನ್ನು ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಮುಖ್ಯಸ್ಥ ಡಾ. ಎಂ.ಕೆ. ಸುದರ್ಶನ್ ಉದ್ಘಾಟಿಸಲಿದ್ದಾರೆ. ಐಐಟಿ ಗುವಾಹಟಿಯ ಡಾ. ಟಿ.ಜಿ. ಸೀತಾರಾಮನ್ ಮುಖ್ಯ ಭಾಷಣ ಮಾಡಲಿದ್ದು, ಇಂಡಿಯನ್ ವಾಟರ್ ವರ್ಕ್ಸ್ ಅಸೋಸಿಯೇಷನ್ನ ಬೆಂಗಳೂರು ಕೇಂದ್ರದ ಮುಖ್ಯಸ್ಥ ಬಿ.ಶ್ರೀನಿವಾಸ ರೆಡ್ಡಿ ಉಪನ್ಯಾಸ ನೀಡಲಿದ್ದಾರೆ.</p>.<p>ತಜ್ಞರಾದ ಡಾ.ವಿ.ಎಸ್. ಪ್ರಕಾಶ್, ಡಾ. ಜಿ.ಎನ್. ನಾಗೇಶ್ ಮತ್ತಿತರರು ವಿಚಾರಗೋಷ್ಠಿಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯ ಡಾ.ಸಿ.ಪಿ.ಎಸ್. ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>